ಸ್ವಾಭಿಮಾನ ಉಳಿಸೊ ಕೆಲಸ ಮಾಡಿ! – ಸುಮಲತಾ ಅಂಬರೀಶ್ ಗೆ ಖಡಕ್ ಎಚ್ಚರಿಕೆ ಕೊಟ್ಟ ಶಾಸಕ ನರೇಂದ್ರ ಸ್ವಾಮಿ

ಸ್ವಾಭಿಮಾನ ಉಳಿಸೊ ಕೆಲಸ ಮಾಡಿ! – ಸುಮಲತಾ ಅಂಬರೀಶ್ ಗೆ ಖಡಕ್ ಎಚ್ಚರಿಕೆ ಕೊಟ್ಟ ಶಾಸಕ ನರೇಂದ್ರ ಸ್ವಾಮಿ

ಲೋಕಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ ರಾಜಕೀಯ ಅಖಾಡ ರಂಗೇರುತ್ತಿದೆ. ಅದರಲ್ಲೂ ಮಂಡ್ಯ ಲೋಕಸಭಾ ಕ್ಷೇತ್ರ ಈ ಬಾರಿಯೂ ಸದ್ದು ಮಾಡುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಪುತ್ರನನ್ನು ನಿಲ್ಲಿಸಿ ಸುಮಲತಾ ಎದುರು ಸೋಲು ಕಂಡಿದ್ದ ಕುಮಾರಸ್ವಾಮಿ, ಇದೀಗ ತಾವೇ ಕಣಕ್ಕೆ ಇಳಿಯುವ ಮೂಲಕ ‘ಒಂದೇ ಏಟಿಗೆ ಎರಡು ಹಕ್ಕಿ ಹೊಡೆಯುವ’ ತವಕದಲ್ಲಿದ್ದಾರೆ. ಈ ಮಧ್ಯೆ ಕಾಂಗ್ರೆಸ್‌ ಶಾಸಕ ನರೇಂದ್ರ ಸ್ವಾಮಿ, ಸುಮಲತಾ ಅಂಬರೀಶ್ ಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಮಂಡ್ಯದಲ್ಲಿ ಕುಮಾರಣ್ಣನ ಸೋಲಿಸಲು ಸಿದ್ದು-ಡಿಕೆಶಿ ಹೆಣೆದ ವ್ಯೂಹ ಎಂಥಾದ್ದು?

ಮಳವಳ್ಳಿ ಪಟ್ಟಣದ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಶಾಸಕ ನರೇಂದ್ರ ಸ್ವಾಮಿ ಸುಮಲತಾ ಅಂಬರೀಶ್‌ ಅವರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ಕಳೆದ ಬಾರಿಯ ಚುನಾವಣೆಯಲ್ಲಿ ಜೆಡಿಎಸ್ ಪರ ಕೆಲಸ ಮಾಡಲ್ಲ, ಸುಮಲತಾ ಎಂದು ಅಂದಿನ ಮುಖ್ಯಮಂತ್ರಿಗೆ ಓಪನ್ ಆಗಿ ಹೇಳಿದ್ದೆ. ಅದೇ ರೀತಿ ಕೆಲಸ ಮಾಡಿ ಚುನಾವಣೆಯಲ್ಲಿ ಗೆಲ್ಲಿಸುವಲ್ಲಿ ನೆರವಾಗಿದ್ದೇವೆ. ನಿಮ್ಮ ಚುನಾವಣೆಯಲ್ಲಿ ಸ್ವಾಭಿಮಾನದ ಬಗೆಗೆ ಮಾತಾಡಿದ್ದೀರಿ. ಈಗ ಸ್ವಾಭಿಮಾನ ಉಳಿಸೊ ಕೆಲಸ ಮಾಡಿ ಎಂದು ವಾರ್ನ್‌ ಮಾಡಿದ್ದಾರೆ.

ಮಳವಳ್ಳಿಯ ಹುಚ್ಚೆಗೌಡರ ಸೊಸೆ ಮಳವಳ್ಳಿಯ ಸ್ವಾಭಿಮಾನ ಕಳೆಯಬೇಡಿ, ಚುನಾವಣೆಗೆ ಯಾರ ಪರವಾಗಿ ಬರ್ತಿರೊ ಬರಲ್ವೊ ನನಗೆ ಚಿಂತೆ ಇಲ್ಲ. ಆಗ ಸ್ವಾಭಿಮಾನದ ಬಗೆಗೆ ಮಾತನಾಡಿರೊ ನೀವು ಈಗ ಸ್ವಾಭಿಮಾನ ಉಳಿಸೊ ಕೆಲಸ ಮಾಡಿ, ಈ ಚುನಾವಣೆಯಲ್ಲಿ ತಟಸ್ಥವಾಗಿರಿ ಅಥವಾ ಕಾಂಗ್ರೆಸ್ ಗೆ ಬೆಂಬಲ ಕೊಡಿ ಎಂದು ತಾಕೀತು ಮಾಡಿದ್ದಾರೆ.

Shwetha M