ಶಾಸಕ ಪುಟ್ಟರಂಗ ಶೆಟ್ಟಿಗೆ ತಪ್ಪಿದ ಸಚಿವ ಸ್ಥಾನ – ಸಚಿವ ಸ್ಥಾನ ಕೊಡದಿದ್ದರೆ ಕಾಂಗ್ರೆಸ್‌ ಕಚೇರಿ ಮುಂದೆ ಸಾಯುತ್ತೇನೆ ಎಂದ ಅಭಿಮಾನಿ!

ಶಾಸಕ ಪುಟ್ಟರಂಗ ಶೆಟ್ಟಿಗೆ ತಪ್ಪಿದ ಸಚಿವ ಸ್ಥಾನ – ಸಚಿವ ಸ್ಥಾನ ಕೊಡದಿದ್ದರೆ ಕಾಂಗ್ರೆಸ್‌ ಕಚೇರಿ ಮುಂದೆ ಸಾಯುತ್ತೇನೆ ಎಂದ ಅಭಿಮಾನಿ!

ಬೆಂಗಳೂರು: ಸಿದ್ದರಾಮಯ್ಯ ಸರ್ಕಾರದ ಸಂಪುಟ ವಿಸ್ತರಣೆ ಆಗಿದ್ದು, 24 ಶಾಸಕರಿಗೆ ಮಂತ್ರಿಗಿರಿ ಲಭಿಸಿದೆ. ಹಿರಿಯ ಶಾಸಕ ಪಟ್ಟರಂಗಶೆಟ್ಟಿ ಅವರಿಗೆ ಸಚಿವ ಸ್ಥಾನ ತಪ್ಪಿದೆ. ಈ ಬಗ್ಗೆ ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಮಂತ್ರಿ ಮಂಡಲದಲ್ಲಿ ಸಚಿವ ಸ್ಥಾನ ನೀಡಿದ್ದರೆ ಚೆನ್ನಾಗಿತ್ತು. ನಾನು ಶಾಸಕನಾಗಿಯೇ ಇರುತ್ತೇನೆ. ಈ ಬಗ್ಗೆ ಪಕ್ಷದ ಹಿರಿಯ ನಾಯಕರೊಂದಿಗೆ ಚರ್ಚಿಸಲಾಗುವುದು. ಸಚಿವ ಸ್ಥಾನ ಯಾಕೆ ಸಿಕ್ಕಿಲ್ಲ ಎಂಬುದರ ಬಗ್ಗೆ ನನಗೆ ಗೊತ್ತಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ:ನೂತನ ಸಚಿವರ ಪ್ರಮಾಣವಚನಕ್ಕೆ ಕ್ಷಣಗಣನೆ – ರಾಜಭವನ ಸುತ್ತಮುತ್ತದ ಮಾರ್ಗಗಗಳಲ್ಲಿ ಸಂಚಾರ ಬದಲಾವಣೆ

ಡೆಪ್ಯುಟಿ ಸ್ಪೀಕರ್​ ಸ್ಥಾನ ನೀಡುವುದಾಗಿ ಹೇಳಿದ್ದಾರೆ. ಆದರೆ ನಾನಿನ್ನೂ ಉಪಸಭಾಧ್ಯಕ್ಷ ಸ್ಥಾನ ವಹಿಸಿಕೊಳ್ಳಲು ತಿರ್ಮಾನಿಸಿಲ್ಲ ಸಿದ್ದರಾಮಯ್ಯ ಅವರ ಒತ್ತಾಯಕ್ಕೆ ಡೆಪ್ಯುಟಿ ಸ್ಪೀಕರ್​ ಸ್ಥಾನ ಪಡೆಯಬೇಕಷ್ಟೇ ಎಂದು ಹೇಳಿದ್ದಾರೆ.

ಇನ್ನು ಶಾಸಕ ಸಿ.ಪುಟ್ಟರಂಗಶೆಟ್ಟಿಗೆ ಸಚಿವ ಸ್ಥಾನ ಕೈ ತಪ್ಪಿದ ಹಿನ್ನೆಲೆ ಅವರ ಅಭಿಮಾನಿಯೊಬ್ಬರು ಈ ಬಗ್ಗೆ ಅಸಮಧಾನ ಹೊರಹಾಕಿದ್ದಾರೆ. ಪುಟ್ಟರಂಗ ಶೆಟ್ಟಿಗೆ ಸಚಿವ ಸ್ಥಾನ ನೀಡದಿದ್ದರೆ ಕಾಂಗ್ರೆಸ್ ಕಚೇರಿ ಮುಂದೆ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಅಭಿಮಾನಿಯೊಬ್ಬರು ಪತ್ರ ಬರೆದಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಈ ಪತ್ರ ವೈರಲ್ ಆಗಿದೆ.

ನಲ್ಲೂರುಮೋಳೆಯ ಚಂದ್ರಶೇಖರ್ ಪತ್ರ ಬರೆದಿರುವ ಅಭಿಮಾನಿ. ನಮ್ಮ ಉಪ್ಪಾರ ಸಮಾಜದ ಏಕೈಕ ಶಾಸಕ, ನಾಲ್ಕು ಬಾರಿ ಗೆದ್ದಿರುವ ಸಿ.ಪುಟ್ಟರಂಗಶೆಟ್ಟಿಗೆ ಕಾಂಗ್ರೆಸ್ ಸಚಿವ ಸ್ಥಾನ ಕೊಡದಿದ್ದರೆ ನಾನು ಚಂದ್ರಶೇಖರ್ s/o ನಂಜುಂಡಶೆಟ್ಟಿ ನಲ್ಲೂರುಮೋಳೆ ಕಾಂಗ್ರೆಸ್ ಬಗ್ಗೆ ಅಪಾರ ನಂಬಿಕೆ ಇಟ್ಟುಕೊಂಡಿದ್ದು. ನಂಬಿಕೆ ದ್ರೋಹದ ಕೆಲಸವನ್ನು ಕಾಂಗ್ರೆಸ್ ಮತ್ತು ಹೈಕಮಾಂಡ್ ಮಾಡಿದೆ.‌ ಸಿ.ಪುಟ್ಟರಂಗಶೆಟ್ಟಿಗೆ ಸಚಿವ ಸ್ಥಾನ‌ ಕೊಡದಿದ್ದರೆ ಜಿಲ್ಲಾ ಅಥವಾ ಕೆಪಿಸಿಸಿ ಕಚೇರಿ ಮುಂದೆ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾನೆ.

 

suddiyaana