ಶಾಸಕರ ಕಾರು ಡಿಕ್ಕಿಯಾಗಿ ವೃದ್ಧೆ ಸಾವು – ನಾಯಿಯನ್ನು ತಪ್ಪಿಸಲು ಹೋಗಿ ಅಜ್ಜಿಯನ್ನೇ ಬಲಿ ಪಡೆದರು..!

ಶಾಸಕರ ಕಾರು ಡಿಕ್ಕಿಯಾಗಿ ವೃದ್ಧೆ ಸಾವು – ನಾಯಿಯನ್ನು ತಪ್ಪಿಸಲು ಹೋಗಿ ಅಜ್ಜಿಯನ್ನೇ ಬಲಿ ಪಡೆದರು..!

ಕೊಪ್ಪಳ: ಮೈಲಾಪುರ ಬಸ್ ನಿಲ್ದಾಣ ಬಳಿ ರಸ್ತೆ ದಾಟುತ್ತಿದ್ದ ವೃದ್ಧೆಗೆ ಶಾಸಕರೊಬ್ಬರು ಪ್ರಯಾಣಿಸುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ. ಅದು ಕೂಡಾ ಶಾಸಕರ ಕಾರಿಗೆ ನಾಯಿಯೊಂದು ಅಡ್ಡಬಂದಿತ್ತು. ನಾಯಿಯನ್ನು ತಪ್ಪಿಸಲು ಹೋಗಿ ನಿಯಂತ್ರಣ ತಪ್ಪಿದ ಕಾರು ಪಾಪದ ಅಜ್ಜಿಗೆ ಹೋಗಿ ಡಿಕ್ಕಿ ಹೊಡೆದಿದೆ. ಪರಿಣಾಮ ತಮ್ಮ ಇಳಿವಯಸ್ಸಿನಲ್ಲಿ ವೃದ್ಧಾಪ್ಯ ವೇತನ ಪಡೆಯಲು ತೆರಳುತ್ತಿದ್ದ ಅಜ್ಜಿ ದಾರುಣವಾಗಿ ಸಾವನ್ನಪ್ಪಿದ್ದಾರೆ. ಕನಕಗಿರಿ ಕ್ಷೇತ್ರದ ಶಾಸಕ ಬಸವರಾಜ ದಡೇಸುಗೂರು(MLA Basavaraj Dadesugur) ಅವರ ಕಾರಿಗೆ ಬಲಿಯಾದ ವೃದ್ಧೆ ಹೆೆಸರು ಮರಿಯಮ್ಮ ನಾಯಕ. 70 ವರ್ಷದ ಮರಿಯಮ್ಮ, ಕೊಪ್ಪಳ ಜಿಲ್ಲೆ ಕಾರಟಗಿ ತಾಲೂಕಿನ ಮೈಲಾಪುರ ಕ್ರಾಸ್ ಬಳಿ ನಡೆದುಕೊಂಡು ಹೋಗುತ್ತಿರುವಾಗ ಈ ದಾರುಣ ಘಟನೆ ನಡೆದಿದೆ.

ಇದನ್ನೂ ಓದಿ:  ಚಂದ್ರನ ಬಳಿ ನಡೆದ ಚಂದ್ರಗಿರಿಯ ಸಾರಾ – ಕನ್ನಡದ ಖ್ಯಾತ ಸಾಹಿತಿ ಸಾರಾ ಅಬೂಬಕ್ಕರ್ ಇನ್ನಿಲ್ಲ

ಗಾಯಾಳು ವೃದ್ಧೆಯನ್ನ ಕಾರಟಗಿ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ಕೊಡಿಸಲಾಗಿತ್ತು. ವೃದ್ಧೆ ಮರಿಯಮ್ಮಗೆ ಚಿಕಿತ್ಸೆ ಕೊಡಿಸಿ ಶಾಸಕ ದಡೇಸುಗೂರು ಅಲ್ಲಿಂದ ತೆರಳಿದ್ದರು. ಹಾಗೂ ಹೆಚ್ಚಿನ ಚಿಕಿತ್ಸೆಗಾಗಿ ವೃದ್ಧೆಯನ್ನ ಬಳ್ಳಾರಿ ವಿಮ್ಸ್​ಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಿಸದೆ ವೃದ್ಧೆ ಮರಿಯಮ್ಮ ನಾಯಕ ಮೃತಪಟ್ಟಿದ್ದಾರೆ. ಮೂಲತಃ ಚಳ್ಳೂರು ಗ್ರಾಮದ ನಿವಾಸಿಯಾಗಿರುವ ಮರಿಯಮ್ಮ ಮೈಲಾಪುರ ಗ್ರಾಮದ ಮಗಳ ಮನೆಯಲ್ಲೇ ನೆಲೆಸಿದ್ದರು. ವೃದ್ಧಾಪ್ಯ ವೇತನಕ್ಕಾಗಿ ಚಳ್ಳೂರು ಗ್ರಾಮಕ್ಕೆ ತೆರಳಿದ್ದಾಗ ಘಟನೆ ನಡೆದಿದೆ. ಕಾರಟಗಿ ಪೊಲೀಸ್​​​​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

suddiyaana