ರಾಹುಲ್ ಗಾಂಧಿಗೆ ಮತ್ತೆ ಜೈಲು ಪಾಲಾಗುವ ಭೀತಿ – ಮೋದಿ, ಶಾ, ಜೇಬುಗಳ್ಳರು ಹೇಳಿಕೆಗೆ ರಾಗಾ ವಿರುದ್ಧ ಕ್ರಮಕ್ಕೆ ಹೈಕೋರ್ಟ್ ನಿರ್ದೇಶನ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಕಾನೂನು ಸಂಕಷ್ಟ ಮುಗಿಯುವಂತೆ ಕಾಣುತ್ತಿಲ್ಲ. ಅವರಾಡುವ ಮಾತೇ ಅವರಿಗೆ ಮುಳುವಾಗುತ್ತಿದೆ. ಮೋದಿ ಸರ್ನೇಮ್ ವಿಚಾರವಾಗಿ ಶಿಕ್ಷೆ ಅನುಭವಿಸಿ ಜೈಲಿನಿಂದ ಹೊರ ಬಂದಿದ್ದ ರಾಗಾಗೆ ಮತ್ತೆ ಜೈಲು ಸೇರುವ ಭೀತಿ ಎದುರಾಗಿದೆ. ಜೇಬುಗಳ್ಳರ ಹೇಳಿಕೆಗೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಚುನಾವಣಾ ಆಯೋಗಕ್ಕೆ ದೆಹಲಿ ಹೈಕೋರ್ಟ್ ನಿರ್ದೇಶನ ನೀಡಿದೆ.
ಇದನ್ನೂ ಓದಿ: ಮುಂದುವರಿದ ಸಂಸದರ ಅಮಾನತು ಪರ್ವ – ಲೋಕಸಭೆಯಿಂದ ಡಿಕೆ ಸುರೇಶ್ ಸಸ್ಪೆಂಡ್!
ಹೌದು, ಚುನಾವಣೆ ಸಮಯದಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು ಉದ್ಯಮಿ ಗೌತಮ್ ಅದಾನಿಯನ್ನು ‘ಪಿಕ್ಪಾಕೆಟ್ಗಳು’ ಎಂದು ಕಾಂಗ್ರೆಸ್ ನಾಯಕ ರಾಹುಲ್ ಹೇಳಿಕೆ ನೀಡಿದ್ದರು. ಈ ಹೇಳಿಕೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗವು ನವೆಂಬರ್ 23 ರಂದು ರಾಹುಲ್ ಅವರಿಗೆ ನೋಟಿಸ್ ನೀಡಿತ್ತು. ನವೆಂಬರ್ 26 ರೊಳಗೆ ಉತ್ತರಿಸದಿದ್ದರೆ ಅವರ ವಿರುದ್ಧ ಕ್ರಮ ತೆಗೆದುಕೊಳ್ಳುವುದಾಗಿ ಹೇಳಿತ್ತು. ಇದೀಗ ಅವರು ಈ ನೋಟಿಸ್ಗೆ ಉತ್ತರ ನೀಡದ ಕಾರಣ ಅವರ ಮೇಲೆ ಕ್ರಮ ಕೈಗೊಳ್ಳುವಂತೆ ದೆಹಲಿ ಹೈಕೋರ್ಟ್ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿತ್ತು. ಇದೀಗ ದೆಹಲಿ ಹೈಕೋರ್ಟ್ ರಾಹುಲ್ ಗಾಂಧಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿದೆ. 8 ವಾರದ ಒಳಗಾಗಿ ಕ್ರಮ ಕೈಗೊಳ್ಳುವಂತೆ ಭಾರತ ಚುನಾವಣಾ ಆಯೋಗಕ್ಕೆ ದೆಹಲಿ ಹೈಕೋರ್ಟ್ ನಿರ್ದೇಶನ ನೀಡಿದೆ.
ಈ ಹೇಳಿಕೆಗಳು ಉತ್ತಮವಲ್ಲ, ಇದನ್ನು ಚುನಾವಣೆ ಸಮಯದಲ್ಲಿ ನೀಡಿರುವ ಕಾರಣ, ಈ ಬಗ್ಗೆ ಚುನಾವಣಾ ಆಯೋಗವೇ ಕ್ರಮ ಕೈಗೊಳ್ಳಬೇಕು. ಎಂಟು ವಾರದ ಒಳಗೆ ಈ ಬಗ್ಗೆ ಕ್ರಮ ತೆಗೆದುಕೊಳ್ಳಿ. ಈ ವಿಷಯಕ್ಕೆ ಸಂಬಂಧಿಸಿದಂತೆ ವಿಚಾರಣೆ ಮುಂದುವರಿಸುವುದಿಲ್ಲ. ಈ ಪ್ರಕರಣವನ್ನು ವಿಲೇವಾರಿ ಮಾಡಲಾಗಿದೆ ಎಂದು ಹೈಕೋರ್ಟ್ ಸ್ಪಷ್ಟವಾಗಿ ಆದೇಶದಲ್ಲಿ ಹೇಳಿದೆ.
ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿದ ಬಿಜೆಪಿ ‘ಅತ್ಯಂತ ಹಿರಿಯ ನಾಯಕರಿಗೆ’ ಇಂತಹ ಭಾಷೆ ಬಳಸುವುದು ಸೂಕ್ತವಲ್ಲ ಎಂದು ಹೇಳಿದೆ. ಚುನಾವಣಾ ನೀತಿ ಸಂಹಿತೆಯ ಪ್ರಕಾರ, ರಾಜಕೀಯ ಪ್ರತಿಸ್ಪರ್ಧಿಗಳ ವಿರುದ್ಧ ದೃಢೀಕರಿಸದ ಆರೋಪಗಳನ್ನು ಮಾಡಲು ನಾಯಕರಿಗೆ ಅವಕಾಶವಿಲ್ಲ ಎಂದು ಹೇಳಿದೆ.