ಮಣಿಪುರದ ಬಗ್ಗೆ ಪ್ರಧಾನಿ ಮೋದಿ ತುಟಿ ಬಿಚ್ಚಲು ಹೇಯ ಕೃತ್ಯ ನಡೆಯಬೇಕಾಯಿತು! – ಕಾಂಗ್ರೆಸ್ ಕಿಡಿ
![ಮಣಿಪುರದ ಬಗ್ಗೆ ಪ್ರಧಾನಿ ಮೋದಿ ತುಟಿ ಬಿಚ್ಚಲು ಹೇಯ ಕೃತ್ಯ ನಡೆಯಬೇಕಾಯಿತು! – ಕಾಂಗ್ರೆಸ್ ಕಿಡಿ](https://suddiyaana.com/wp-content/uploads/2023/07/4-15.jpg)
ಬೆಂಗಳೂರು: ಮಣಿಪುರದಲ್ಲಿ ಕಳೆದೆರಡು ತಿಂಗಳಿನಿಂದ ಭಾರಿ ಸಂಘರ್ಷ ನಡೆಯುತ್ತಿದೆ. ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರ, ಅತ್ಯಾಚಾರ, ಮಹಿಳೆಯರ ಬೆತ್ತಲೆ ಮೆರವಣಿಗೆ ಪ್ರಕರಣವನ್ನು ರಾಜ್ಯ ಕಾಂಗ್ರೆಸ್ ತೀವ್ರವಾಗಿ ಖಂಡಿಸಿದೆ. ಟ್ವೀಟ್ ಮಾಡಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ಕಿಡಿಕಾರಿದೆ.
ಇದನ್ನೂ ಓದಿ: ಮಣಿಪುರದಲ್ಲಿ ಮಹಿಳೆಯರ ಬೆತ್ತಲೆ ಮೆರವಣಿಗೆ ಪ್ರಕರಣ – ಪ್ರಮುಖ ಆರೋಪಿಯ ಮನೆಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ರಾಜ್ಯ ಕಾಂಗ್ರೆಸ್, ಜಗತ್ತಿನೆದುರು ಭಾರತ ತಲೆ ತಗ್ಗಿಸುವಂತಹ ಘಟನೆಗಳು ಬಿಜೆಪಿ ಆಡಳಿತದ ಮಣಿಪುರದಲ್ಲಿ ಜರುಗುತ್ತಿದ್ದರೂ ಪ್ರಧಾನಿ ಮೋದಿ ಅವರಿಗೆ ಇದುವರೆಗೂ ಅಲ್ಲಿಗೆ ಭೇಟಿ ನೀಡಬೇಕೆಂದು ಮನಸಾಗಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದೆ.
ಮಣಿಪುರದ ಬಗ್ಗೆ ಪ್ರಧಾನಿ ಮೋದಿ ತುಟಿ ಬಿಚ್ಚಲು ಅತ್ಯಂತ ಹೇಯ ಕೃತ್ಯ ನಡೆಯಬೇಕಾಯಿತು. ಗಲಭೆಗಳಲ್ಲೇ ರಾಜಕೀಯ ಅಸ್ತಿತ್ವ ಕಂಡುಕೊಂಡ ಮೋದಿಯವರಿಗೆ ಇದೆಲ್ಲಾ ಸಹಜ ಎನ್ನಿಸುತ್ತಿರಬಹುದೇ? ಎಂದು ಕಾಂಗ್ರೆಸ್ ಟ್ವೀಟ್ ಮಾಡಿ ಪ್ರಶ್ನಿಸಿದೆ.
ಸಿಎಂ ಸಿದ್ದರಾಮಯ್ಯ ಕೂಡ ಈ ಪ್ರಕರಣವನ್ನು ಖಂಡಿಸಿದ್ದಾರೆ. ಮಣಿಪುರದ ಹಿಂಸಾಚಾರ ಅಲ್ಲಿನ ಜನರನ್ನು ಸಂಕಷ್ಟಕ್ಕೆ ತಳ್ಳಿದೆ. ಮಣಿಪುರದಲ್ಲಿರುವ ನನ್ನ ಸಹೋದರಿಯರು ಸಾಕಷ್ಟು ಆಘಾತವನ್ನು ಅನುಭವಿಸುತ್ತಿದ್ದಾರೆ. ಈ ಕೃತ್ಯ ಅಮಾನವೀಯವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.