ಶಿವಮೊಗ್ಗದಲ್ಲಿ ವಿಮಾನನಿಲ್ದಾಣ ಉದ್ಘಾಟನೆ.. ಬೆಳಗಾವಿಯಲ್ಲಿ ರಣಕಹಳೆ – ಫೆ.27ಕ್ಕೆ ‘ನಮೋ’ ಶಕ್ತಿಪ್ರದರ್ಶನ!

ಶಿವಮೊಗ್ಗದಲ್ಲಿ ವಿಮಾನನಿಲ್ದಾಣ ಉದ್ಘಾಟನೆ.. ಬೆಳಗಾವಿಯಲ್ಲಿ ರಣಕಹಳೆ – ಫೆ.27ಕ್ಕೆ ‘ನಮೋ’ ಶಕ್ತಿಪ್ರದರ್ಶನ!

ದಶಕಗಳ ಕನಸು.. ವರ್ಷಗಳ ಹೋರಾಟ.. ಕೊನೆಗೂ ಆ ಸುದಿನ ಹತ್ತಿರ ಬಂದಿದೆ. ಮಲೆನಾಡಿನಲ್ಲಿ ವಿಮಾನಗಳ ಹಾರಟಕ್ಕೆ ಕೌಂಟ್ ಡೌನ್ ಶುರುವಾಗಿದೆ. ಶಿವಮೊಗ್ಗದ ಸೋಗಾನೆಯಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಕಾಮಗಾರಿ ಪೂರ್ಣಗೊಂಡಿದೆ. ಫೆಬ್ರವರಿ 27ರ ಸೋಮವಾರ ಭಾರತದ ಪ್ರಧಾನಿ ನರೇಂದ್ರ ಮೋದಿ ವಿಮಾನ ನಿಲ್ದಾಣ ಲೋಕಾರ್ಪಣೆ ಮಾಡಲಿದ್ದಾರೆ.

ಶಿವಮೊಗ್ಗ ವಿಮಾನ ನಿಲ್ದಾಣ ಕರ್ನಾಟಕದ ಅತಿ ದೊಡ್ಡ ರನ್ ವೇ ಹೊಂದಿರುವ ಎರಡನೇ ವಿಮಾನ ನಿಲ್ದಾಣ ಆಗಲಿದೆ. 3,200 ಮೀಟರ್ ಉದ್ದದ ರನ್ ವೇ ಕಾಮಗಾರಿ ಈಗಾಗಲೇ ಪೂರ್ಣಗೊಂಡಿದೆ. ವಿಮಾನ ನಿಲ್ದಾಣಕ್ಕೆ 600 ಕೋಟಿ ರೂ. ವ್ಯಯಿಸಲಾಗಿದೆ. ಇದರಲ್ಲಿ ಕಟ್ಟಡ ಕಾಮಗಾರಿಗೆ 449 ಕೋಟಿ ರೂ. ಖರ್ಚು ಮಾಡಲಾಗಿದೆ

ಇದನ್ನೂ ಓದಿ : ಹೆಚ್​ ಡಿಡಿ, ಸಿದ್ದರಾಮಯ್ಯರನ್ನ ಕೊಂಡಾಡಿದ ಬಿಎಸ್​ವೈ – ಸಿಎಂ, ಸಭಾಧ್ಯಕ್ಷರಿಗೂ ಶಹಬ್ಬಾಸ್​ ಗಿರಿ!

ಸೋಗಾನೆಯ ವಿಮಾನ ನಿಲ್ದಾಣ ಉದ್ಘಾಟನಾ ಕಾರ್ಯಕ್ರಮಕ್ಕೆ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ, ರಾಜ್ಯಪಾಲರು, ಮುಖ್ಯಮಂತ್ರಿಗಳು, ಸಂಸದರು, ಶಾಸಕರು ಹಾಗೂ ಇತರೆ ಗಣ್ಯ ವ್ಯಕ್ತಿಗಳು ಹಾಗೂ ಸುತ್ತಮುತ್ತಲ ಜಿಲ್ಲೆಗಳಿಂದ ನೂರಾರು ಸಂಖ್ಯೆಯಲ್ಲಿ ಸಾರ್ವಜನಿಕರು, ವಾಹನಗಳು ಬರುವ ಹಿನ್ನೆಲೆಯಲ್ಲಿ ಸುಗಮ ಸಂಚಾರದ ದೃಷ್ಟಿಯಿಂದ ಜಿಲ್ಲಾಡಳಿತ ನಗರದಲ್ಲಿ ಮಾರ್ಗ ಬದಲಾವಣೆ ಮಾಡಿದೆ. ಶೂನ್ಯ ಸಂಚಾರ ರಸ್ತೆ ಮಾರ್ಗ ಮತ್ತು ವಾಹನ ಸಂಚಾರಕ್ಕೆ ಬದಲಿ ಮಾರ್ಗಗಳ ಅಧಿಸೂಚನೆಯನ್ನು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಇಂದು ಹೊರಡಿಸಿದ್ದಾರೆ.

ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಗೂ ಮುನ್ನವೇ ರಾಜ್ಯದಲ್ಲಿ ರಾಜಕೀಯ ಅಖಾಡ ರಂಗೇರುತ್ತಿದೆ. ಮೂರೂ ಪಕ್ಷಗಳ ತಯಾರಿ ಕೂಡ ಜೋರಾಗಿದೆ. ಅದ್ರಲ್ಲೂ ಬಿಜೆಪಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಪದೇಪದೆ ರಾಜ್ಯಕ್ಕೆ ಭೇಟಿ ನೀಡ್ತಿದ್ದಾರೆ. ಸದ್ಯ ಫೆ.27ರಂದು ಕುಂದಾನಗರಿಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಭೇಟಿ ನೀಡಲಿದ್ದಾರೆ. ಮೋದಿ ಆಗಮನಕ್ಕೆ ಭರ್ಜರಿ ಸಿದ್ಧತೆ ಮಾಡಿಕೊಳ್ಳಲಾಗುತ್ತಿದ್ದು, ನಾಡಿನ ಮಹನೀಯರು ಇತಿಹಾಸ ಸಾರುವ ಲೈವ್ ಶೋಗೆ ಸಿದ್ಧತೆ ನಡೆದಿದೆ.

ಫೆ.27ರಂದು ಬೆಳಗಾವಿ ನಗರದ ಸಿಪಿಎಡ್ ಮೈದಾನಕ್ಕೆ ಆಗಮಿಸುವ ಪ್ರಧಾನಿ ನರೇಂದ್ರ ಮೋದಿ ಆಗಮನಕ್ಕೆ ಬಿಜೆಪಿ ಪಕ್ಷದ ನಾಯಕರು ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ. ಬೆಳಗಾವಿಯಲ್ಲಿ 8 ಕಿಲೋಮೀಟರ್ ರೋಡ್ ಶೋಗೆ ಭರ್ಜರಿ ಸಿದ್ಧತೆ ನಡೆದಿದ್ದು, ರೋಡ್ ಶೋ ಮಾರ್ಗದಲ್ಲಿ ಸ್ವತಃ ಪಕ್ಷದ ಧ್ವಜ, ಬಂಟಿಂಗ್ಸ್ ಕಟ್ಟಿದ ಬಿಜೆಪಿ ಶಾಸಕ ಅಭಯ ಪಾಟೀಲ್ (Abhay Patil) ರೋಡ್ ಶೋ ಮಾರ್ಗದ ರಸ್ತೆಯ ಎರಡು ಬದಿಗಳಲ್ಲಿ ಪಕ್ಷದ ಧ್ವಜ ಕಾರ್ಯಕರ್ತರು ಕಟ್ಟುತ್ತಿದ್ದಾರೆ. 8 ಕಿಲೋಮೀಟರ್ ರೋಡ್ ಶೋ ಉದ್ದಕ್ಕೂ ರಸ್ತೆಯ ಎರಡು ಬದಿಯಲ್ಲಿ ಬ್ಯಾರಿಕೇಡ್ ಅವಳವಡಿಕೆ ಮಾಡಲಾಗುತ್ತಿದೆ.

ಡಿಸಿ ನಿತೇಶ್ ಪಾಟೀಲ್ ಅವರು ತಡರಾತ್ರಿ ಸಿದ್ಧತಾ ಕಾರ್ಯ ಪರಿಶೀಲನೆ ನಡೆಸಿದ್ದಾರೆ. ರೋಡ್ ಶೋ ಮಾರ್ಗದಲ್ಲಿ 90 ಲೈವ್ ಶೋಗೆ ನಿರ್ಧಾರ ಮಾಡಲಾಗಿದ್ದು, ಅದರಲ್ಲಿ ಪ್ರಮುಖವಾಗಿ ಛತ್ರಪತಿ ಶಿವಾಜಿ ಮಹಾರಾಜರು, ವೀರ ಮದಕರಿನಾಯಕ, ವಿಶ್ವಗುರು ಬಸವಣ್ಣ, ವೀರರಾಣಿ ಕಿತ್ತೂರು ಚೆನ್ನಮ್ಮ, ಕಾಂತ್ರಿವೀರ ಸಂಗೊಳ್ಳಿ ರಾಯಣ್ಣ ಸೇರಿ ಹಲವು ಮಹನೀಯರ ಇತಿಹಾಸ ಸಾರುವ ಲೈವ್ ಶೋಗೆ ನಿರ್ಧಾರ ಮಾಡಿಕೊಳ್ಳಲಾಗಿದೆ.

ವಿಧಾನಸಭಾ ಚುನಾವಣೆ ಸನಿಹದಲ್ಲಿರುವುದರಿಂದ ಬೆಳಗಾವಿಗೂ ಭೇಟಿ ನೀಡಲಿದ್ದು, ಹತ್ತು ಕಿ.ಮೀ. ರೋಡ್‌ ಶೋ ದಲ್ಲಿ ಭಾಗಿಯಾಗುವ ನಿರೀಕ್ಷೆಯಿದೆ. ಆ ಸಮಯದಲ್ಲಿ ಹತ್ತು ಸಾವಿರ ಮಹಿಳೆಯರು ಪೂರ್ಣಕುಂಭ ಹೊತ್ತು ಪ್ರಧಾನಿಯನ್ನು ಸ್ವಾಗತಿಸಲಿದ್ದಾರೆ ಎನ್ನಲಾಗಿದೆ. ಬೆಳಗಾವಿ ಚನ್ನಮ್ಮ ಸರ್ಕಲ್‌ನಿಂದ ಮಾಲಿನಿ ಸಿಟಿಯವರೆಗೆ ಭರ್ಜರಿ ರೋಡ್‌ ಶೋ ನಡೆಸಲು ನಿರ್ಧರಿಸಲಾಗಿದೆ. ಈ ಸಂದರ್ಭದಲ್ಲಿ ಹತ್ತು ಸಾವಿರ ಮಹಿಳೆಯರು ಪೂರ್ಣಕುಂಭ ಹೊತ್ತು ಪ್ರಧಾನಿ ನರೇಂದ್ರ ಮೋದಿಯವರನ್ನು ಸ್ವಾಗತಿಸಲಿದ್ದಾರೆ. ರೋಡ್‌ ಶೋ ನಡೆಯುವ ಅಕ್ಕಪಕ್ಕದ ಸ್ಥಳಗಳಲ್ಲಿ ವಿವಿಧ ಕಾರ್ಯಕ್ರಮಗಳು ನಡೆಯಲಿದೆ. ನಾಲ್ಕೈದು ಲಕ್ಷ ಜನರು ಸೇರುವ ನಿರೀಕ್ಷೆಯಿದೆ.

 

suddiyaana