ಉದ್ಯಮಿ ಮುಕೇಶ್ ಅಂಬಾನಿಗೆ ಮತ್ತೆ ಜೀವ ಬೆದರಿಕೆ – 400 ಕೋಟಿ ರೂ.ಗೆ ಬೇಡಿಕೆ ಇಟ್ಟ ದುಷ್ಕರ್ಮಿಗಳು!

ಉದ್ಯಮಿ ಮುಕೇಶ್ ಅಂಬಾನಿಗೆ ಮತ್ತೆ ಜೀವ ಬೆದರಿಕೆ – 400 ಕೋಟಿ ರೂ.ಗೆ ಬೇಡಿಕೆ ಇಟ್ಟ ದುಷ್ಕರ್ಮಿಗಳು!

ಉದ್ಯಮಿ ಮುಕೇಶ್​ ಅಂಬಾನಿಗೆ ಭದ್ರತಾ ಲೋಪ ಇದ್ಯಾ ಅನ್ನೋ ಪ್ರಶ್ನೆ ಕಾಡುತ್ತಿದೆ. ಏಕೆಂದರೆ ಅವರಿಗೆ ಮತ್ತೆ ಜೀವ ಬೆದರಿಕೆಯ ಇ-ಮೇಲ್ ಬಂದಿದೆ ಎಂದು ವರದಿಯಾಗಿದೆ. ಈ ಬಾರಿ ದುಷ್ಕರ್ಮಿಗಳು ಬರೋಬ್ಬರಿ 400 ಕೋಟಿ ರೂ. ಕೊಡುವಂತೆ ಬೇಡಿಕೆ ಇಟ್ಟಿದ್ದಾರೆ ಎಂದು ವರದಿಯಾಗಿದೆ.

ಕಳೆದ ಕೆಲವು ದಿನಗಳ ಹಿಂದೆ ದುಷ್ಕರ್ಮಿಗಳು ಮುಕೇಶ್‌ ಅಂಬಾನಿ ಅವರಿಗೆ 20 ಕೋಟಿ ರೂ. ಹಾಗೂ 200 ಕೋಟಿ ರೂ,ಗೆ ಆರೋಪಿ ಬೇಡಿಕೆ ಇಟ್ಟಿದ್ದರು. ಇದೀಗ 400 ಕೋಟಿ ರೂ,ಗೆ ಬೇಡಿಕೆ ಇಟ್ಟಿದ್ದಾರೆ. ಹಣವನ್ನು ನೀಡಲು ವಿಫಲವಾದಲ್ಲಿ ಹತ್ಯೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ. ಒಂದು ವಾರದಲ್ಲಿ ಮೂರನೇ ಬಾರಿಗೆ ಬೆದರಿಕೆಯ ಇ-ಮೇಲ್ ಬಂದಿದೆ. ಕಂಪನಿಯ ಮೇಲ್ ಐಡಿಗೆ ಶುಕ್ರವಾರ ಮೊದಲ ಇ-ಮೇಲ್ ಬಂದಿತ್ತು, ಶನಿವಾರ ಮತ್ತೊಂದು ಇ-ಮೇಲ್ ಬಂದಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಮುಕೇಶ್ ಅಂಬಾನಿ & ಫ್ಯಾಮಿಲಿಗೆ ವಿದೇಶದಲ್ಲೂ ಝಡ್+ ಭದ್ರತೆ : ವೆಚ್ಚದ ಜವಾಬ್ದಾರಿ ಯಾರದ್ದು ಗೊತ್ತಾ?

ಈ ಸಂಬಂಧ ಅಂಬಾನಿ ಅವರು ನೀಡಿದ ದೂರಿನ ಆಧಾರದ ಮೇಲೆ, ಗಾಮ​ದೇವಿ ಪೊಲೀಸ್ ಠಾಣೆಯಲ್ಲಿ ಸುಲಿಗೆ ಮತ್ತು ಕ್ರಿಮಿನಲ್ ಬೆದರಿಕೆ ಆರೋಪದ ಮೇಲೆ ಆರೋಪಿಗಳ ವಿರುದ್ಧ ಎಫ್​ಐಆರ್​ ದಾಖಲಿಸಲಾಗಿದೆ. ಶಾದಬ್ ಖಾನ್ ಎಂಬ ಹೆಸರಿನಲ್ಲಿ ಇ-ಮೇಲ್ ಬಂದಿದೆ, ಈ ಪ್ರಕರಣ ಸಂಬಂಧ ಮುಂಬೈ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಶನಿವಾರ (ಅಕ್ಟೋಬರ್ 27) ಮುಕೇಶ್ ಅಂಬಾನಿ ಅವರ ಇಮೇಲ್ ಖಾತೆಗೆ ಮೇಲ್ ಬಂದಿದ್ದು, ಅದರಲ್ಲಿ ಮುಕೇಶ್ ಅಂಬಾನಿಗೆ 20 ಕೋಟಿ ರೂ.ಗೆ ಬೆದರಿಕೆ ಹಾಕಿದ್ದ ಮತ್ತು ಹಣ ನೀಡದಿದ್ದರೆ ನಷ್ಟ ಅನುಭವಿಸಬೇಕಾಗುತ್ತದೆ ಎಂದು ಹೇಳಿದ್ದ. ಹಿಂದಿನ ಬೆದರಿಕೆ ಇ-ಮೇಲ್‌ನಲ್ಲಿ,ನೀವು ನಮಗೆ 20 ಕೋಟಿ ರೂಪಾಯಿ ನೀಡದಿದ್ದರೆ, ನಾವು ನಿಮ್ಮನ್ನು ಕೊಲ್ಲುತ್ತೇವೆ. ನಾವು ಭಾರತದಲ್ಲಿ ಅತ್ಯುತ್ತಮ ಶೂಟರ್​ಗಳನ್ನು ಹೊಂದಿದ್ದೇವೆ ಎಂದು ಬೆದರಿಕೆ ಹಾಕಿದ್ದರು.

ಈ ಮೇಲ್ ಅನ್ನು ಯಾವ IP ವಿಳಾಸದಿಂದ ಕಳುಹಿಸಲಾಗಿದೆ ಎಂಬುದನ್ನು ಕಂಡುಹಿಡಿಯಲು ಪ್ರಯತ್ನಿಸಲು ಪ್ರಾರಂಭಿಸಿದೆ. ಈ ವರ್ಷದ ಫೆಬ್ರವರಿ ತಿಂಗಳಲ್ಲಿ, ವ್ಯಕ್ತಿಯೊಬ್ಬರು ನಾಗ್ಪುರ ಪೊಲೀಸ್ ನಿಯಂತ್ರಣ ಕೊಠಡಿಗೆ ಕರೆ ಮಾಡಿ ಮುಖೇಶ್ ಅಂಬಾನಿ ಅವರ ಮನೆ ಆಂಟಿಲಿಯಾವನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದರು, ನಂತರ ಪೊಲೀಸರು ತಕ್ಷಣವೇ ಆಂಟಿಲಿಯಾ ಭದ್ರತೆಯನ್ನು ಬಿಗಿಗೊಳಿಸಲಾಗಿತ್ತು.

Shwetha M