ಅಮಿತಾಭ್, ಧರ್ಮೇಂದ್ರ, ಅಂಬಾನಿ ಮನೆಯಲ್ಲಿ ಬಾಂಬ್!

ಅಮಿತಾಭ್, ಧರ್ಮೇಂದ್ರ, ಅಂಬಾನಿ ಮನೆಯಲ್ಲಿ ಬಾಂಬ್!

ವಿಮಾನ ನಿಲ್ದಾಣ, ಬಸ್ ಸ್ಟ್ಯಾಂಡ್ ನಲ್ಲಿ ಬಾಂಬ್ ಇಡಲಾಗಿದೆ ಅಂತಾ ಅಪರಿಚಿತ ವ್ಯಕ್ತಿಗಳು ಪೋಲಿಸರಿಗೆ ಕರೆ ಮಾಡಿರುವ ಬಗ್ಗೆ ಆಗಾಗ ವರದಿಯಾಗುತ್ತಿರುತ್ತದೆ. ಇದೀಗ ಬಾಲಿವುಡ್ ಖ್ಯಾತ ನಟರಾದ ಅಮಿತಾಭ್ ಬಚ್ಚನ್, ಧರ್ಮೇಂದ್ರ ಮತ್ತು ಉದ್ಯಮಿ ಮುಖೇಶ್ ಅಂಬಾನಿ ಹಾಗೂ ಕೆಲ ಗಣ್ಯವ್ಯಕ್ತಿಗಳ ಮನೆಯಲ್ಲಿ ಬಾಂಬ್ ಇಟ್ಟಿರುವುದಾಗಿ ಅಪರಿಚಿತ ವ್ಯಕ್ತಿಯೊಬ್ಬ ಪೊಲೀಸರಿಗೆ ಕರೆ ಮಾಡಿದ್ದಾನೆ ಎಂದು ವರದಿಯಾಗಿದೆ.

ಇದನ್ನೂ ಓದಿ:ಮುಕೇಶ್ ಅಂಬಾನಿ & ಫ್ಯಾಮಿಲಿಗೆ ವಿದೇಶದಲ್ಲೂ ಝಡ್+ ಭದ್ರತೆ : ವೆಚ್ಚದ ಜವಾಬ್ದಾರಿ ಯಾರದ್ದು ಗೊತ್ತಾ?

ಅಪರಿಚಿತ ವ್ಯಕ್ತಿಯೊಬ್ಬ ಬಾಲಿವುಡ್ ನಟರಾದ ಅಮಿತಾಭ್ ಬಚ್ಚನ್, ಧರ್ಮೇಂದ್ರ ಮತ್ತು ಉದ್ಯಮಿ ಮುಖೇಶ್ ಅಂಬಾನಿ ಸೇರಿದಂತೆ ಕೆಲ ಗಣ್ಯ ವ್ಯಕ್ತಿಗಳ ಮನೆಯಲ್ಲಿ ಬಾಂಬ್ ಇಡಲಾಗಿದೆ ಅಂತಾ ನಾಗ್ಪುರ ಪೊಲೀಸರಿಗೆ ಕರೆ ಮಾಡಿ ಹೇಳಿದ್ದಾನೆ. ಅಲ್ಲದೇ ಈಗಾಗಲೇ ಭಯೋತ್ಪಾದಕ ದಾಳಿ ನಡೆಸಲು 25 ಶಸ್ತ್ರಸಜ್ಜಿತ ವ್ಯಕ್ತಿಗಳು ಮುಂಬೈನ ದಾದರ್ ತಲುಪಿದ್ದಾರೆ ಎಂದು ಹೇಳಿದ್ದಾನೆ. ಭಯೋತ್ಪಾದಕರು ಎಂದು ಹೇಳುತ್ತಿದ್ದಂತೆಯೇ ಪೊಲೀಸ್ ಅಲರ್ಟ್ ಆಗಿದ್ದಾರೆ. ಅಲ್ಲದೇ ಈ ಕರೆಯಿಂದ ಆತಂಕಗೊಂಡ ಪೊಲೀಸರು ಕೂಡಲೇ ಮುಂಬೈ ಪೊಲೀಸರನ್ನು ಸಂಪರ್ಕಿಸಿದ್ದಾರೆ.

ನಾಗ್ಪುರ ಪೊಲೀಸರ ಮಾಹಿತಿಯನ್ನು ಆಧರಿಸಿ ಮುಂಬೈ ಪೊಲೀಸರು ತಂಡೋಪ ತಂಡವಾಗಿ ಆಗಮಿಸಿ ಅಪರಿಚಿತ ವ್ಯಕ್ತಿ ಹೇಳಿದ ಗಣ್ಯರ ಮನೆಯಲ್ಲಿ ತಪಾಸಣೆ ನಡೆಸಿದ್ದಾರೆ. ಪೊಲೀಸರು ತಪಾಸಣೆ ನಡೆಸಿರುವ ವೇಳೆ ಯಾವುದೇ ಬಾಂಬ್ ಪತ್ತೆಯಾಗಿಲ್ಲ ಎಂದು ವರದಿಯಾಗಿದೆ.

ಇದೊಂದು ಹುಸಿಕರೆಯಾಗಿದೆ. ಅಪರಿಚಿತ ವ್ಯಕ್ತಿಯ ಕರೆಯಿಂದಾಗಿ ಒಮ್ಮೆ ಆತಂಕ ಸೃಷ್ಟಿಯಾಗಿತ್ತು. ಹಾಗಾಗಿ ನಾಗ್ಪುರ  ಪೊಲೀಸರ ಮಾಹಿತಿ ಆಧಾರದ ಮೇಲೆ ಆ ವ್ಯಕ್ತಿ ಉಲ್ಲೇಖಿಸಿರುವ ಗಣ್ಯವ್ಯಕ್ತಿಗಳ ಮನೆಯಲ್ಲಿ ತಪಾಸಣೆ ನಡೆಸಲಾಗಿದೆ. ಹುಸಿ ಕರೆ ಮಾಡಿದ ವ್ಯಕ್ತಿಯನ್ನು ಪತ್ತೆ ಹಚ್ಚಲು ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ. ಅಲ್ಲದೇ ಆತನ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಮುಂಬೈ ಪೊಲೀಸರು ಹೇಳಿದ್ದಾರೆ.

suddiyaana