ಚಿತ್ರದುರ್ಗ ಜೈಲಿನಿಂದ ಮುರುಘಾ ಶ್ರೀ ಬಿಡುಗಡೆ – ಮುರುಘಾ ಶ್ರೀಗೆ ಕೋರ್ಟ್‌ ವಿಧಿಸಿದ 7 ಷರತ್ತುಗಳೇನು?

ಚಿತ್ರದುರ್ಗ ಜೈಲಿನಿಂದ ಮುರುಘಾ ಶ್ರೀ ಬಿಡುಗಡೆ – ಮುರುಘಾ ಶ್ರೀಗೆ ಕೋರ್ಟ್‌ ವಿಧಿಸಿದ 7 ಷರತ್ತುಗಳೇನು?

ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣದಲ್ಲಿ ಜೈಲು ಸೇರಿದ್ದ ಮುರುಘಾ ಮಠದ ಶಿವಮೂರ್ತಿ ಶರಣರು ಗುರುವಾರ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಪೋಕ್ಸೋ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ಮುರುಘಾ ಶ್ರೀಗಳಿಗೆ ಜಾಮೀನು ಮಂಜೂರು ಮಾಡಿದ ಹಿನ್ನೆಲೆಯಲ್ಲಿ ಜೈಲಿನಿಂದ ರಿಲೀಸ್‌ ಆಗಿದ್ದಾರೆ.

ಮುರುಘಾ ಶ್ರೀ ವಿರುದ್ಧ ಎರಡು ಪೋಕ್ಸೋ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ಕಳೆದ 13 ತಿಂಗಳಿನಿಂದ ನ್ಯಾಯಾಂಗ ಬಂಧನದಲ್ಲಿ ಇರಿಸಲಾಗಿತ್ತು. ಇದೀಗ ಮುರುಘಾ ಶ್ರೀಗಳಿಗೆ ಜಾಮೀನು ಮಂಜೂರು ಮಾಡಿದ ಹಿನ್ನೆಲೆಯಲ್ಲಿ ಚಿತ್ರದುರ್ಗ ಜೈಲಿನಿಂದ ಬಿಡುಗಡೆಯಾಗಿದ್ದಾರೆ.

ಇದನ್ನೂ ಓದಿ: ಸಿಲಿಕಾನ್‌ ಸಿಟಿಯಲ್ಲಿ ಪುಂಡರ ಹಾವಳಿ – 5 ನಿಮಿಷದಲ್ಲಿ 30 ಕ್ಕೂ ಹೆಚ್ಚು ವಾಹನಗಳ ಗ್ಲಾಸ್ ಪುಡಿ ಪುಡಿ!

ಮುರುಘಾಶ್ರೀಗಳಿಗೆ ನ.8 ರಂದು ಒಂದು ಪ್ರಕರಣದಲ್ಲಿ ಜಾಮೀನು ಸಿಕ್ಕಿದ್ದರೂ ಎರಡನೇ ಪೋಕ್ಸೋ ಪ್ರಕರಣದ ಜಾಮೀನು ಅರ್ಜಿ ವಿಚಾರಣೆ ಹೈಕೋರ್ಟ್‌ನಲ್ಲಿ ಬಾಕಿಯಿತ್ತು. ಈ ಹಿನ್ನೆಲೆಯಲ್ಲಿ ಅವರ ಬಿಡುಗಡೆಯಾಗಿರಲಿಲ್ಲ. ಈ ಪ್ರಕರಣದ ವಿಚಾರಣೆ ಗುರುವಾರ  ನಡೆದಿದೆ. ಜಾಮೀನು ಆದೇಶ ನೀಡುವ ಚಿತ್ರದುರ್ಗದಲ್ಲಿ ನೆಲೆಸುವಂತಿಲ್ಲ ಎಂದು ಕೋರ್ಟ್‌ ಷರತ್ತು ವಿಧಿಸಿದೆ. ಹೀಗಾಗಿ ಶ್ರೀಗಳು ಜೈಲಿನಿಂದ ಬಿಡುಗಡೆಯಾದ ಬಳಿಕ  ದಾವಣಗೆರೆ ಕಡೆ ಹೊರಟಿದ್ದಾರೆ.

ವಿಚಾರಣೆ ಮುಗಿಯುವವರೆಗೂ ಚಿತ್ರದುರ್ಗಕ್ಕೆ ಹೋಗುವಂತಿಲ್ಲ. ಇಬ್ಬರ ಶ್ಯೂರಿಟಿಯನ್ನು ಒದಗಿಸಬೇಕು. ವೀಡಿಯೊ ಕಾನ್ಫರೆನ್ಸ್ ಮೂಲಕ ಕೋರ್ಟ್ ವಿಚಾರಣೆಗೆ ಹಾಜರಾಗಬೇಕು. ಎರಡು ಲಕ್ಷ ರೂ. ಬಾಂಡ್ ಶ್ಯೂರಿಟಿ ನೀಡಬೇಕು. ಪಾಸ್‌ಪೋರ್ಟ್‌ ಅನ್ನು ಕೋರ್ಟ್‌ ವಶಕ್ಕೆ ನೀಡಬೇಕು. ಸಾಕ್ಷಿಗಳಿಗೆ ಬೆದರಿಕೆ ಹಾಕಬಾರದು. ಇಂತಹ ಕೃತ್ಯ ಪುನರಾವರ್ತನೆಯಾಗಬಾರದು ಎಂದು ಕೋರ್ಟ್‌ ಷರತ್ತು ವಿಧಿಸಿದೆ.

Shwetha M