ಮುಖ್ಯಮಂತ್ರಿ ಸ್ಥಾನಕ್ಕಾಗಿ ನವ ಚಂಡಿಕಾ ಹೋಮ – ರಾಜ್ಯದ ಚುಕ್ಕಾಣಿ ಮೇಲೆ ಡಿ.ಕೆ ಶಿವಕುಮಾರ್ ಕಣ್ಣು?

ಮುಖ್ಯಮಂತ್ರಿ ಸ್ಥಾನಕ್ಕಾಗಿ ನವ ಚಂಡಿಕಾ ಹೋಮ – ರಾಜ್ಯದ ಚುಕ್ಕಾಣಿ ಮೇಲೆ ಡಿ.ಕೆ ಶಿವಕುಮಾರ್ ಕಣ್ಣು?

ರಾಜ್ಯದಲ್ಲಿ ಚುನಾವಣೆಯ ಅಬ್ಬರ ಜೋರಾಗಿಯೇ ಇದೆ. ಇದರ ಮಧ್ಯೆ ಮುಖ್ಯಮಂತ್ರಿಯಾಗುವ ಕನಸು ಕೂಡಾ ರಾಜಕಾರಣಿಗಳಲ್ಲಿ ಗರಿಗೆದರಿದೆ. ಅದರಲ್ಲೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ ಆಗಲೇ ಬೇಕು. ರಾಜ್ಯದ ಚುಕ್ಕಾಣಿ ಹಿಡಿಯಲೇಬೇಕು ಅಂತ ಡಿಕೆ.ಶಿವಕುಮಾರ್ ಹಠ ತೊಟ್ಟಂತಿದೆ. ಇದಕ್ಕಾಗಿ ರಣತಂತ್ರ ಮಾಡ್ತಿರುವ ಕೆಪಿಸಿಸಿ ಸಾರಥಿ, ಯಾಗ, ಯಜ್ಞದ ಮೂಲಕ ದೇವರಲ್ಲೂ ಮೊರೆ ಇಟ್ಟಿದ್ದಾರೆ. ಚುನಾವಣಾ ಪ್ರಚಾರದ ಜೊತೆ ಜೊತೆಯಲ್ಲೇ ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ದೇವರ ಮೊರೆ ಹೋಗಿದ್ದಾರೆ.

ಇದನ್ನೂ ಓದಿ:  ಹೆಚ್.ಡಿ ಕುಮಾರಸ್ವಾಮಿಯೇ ಸಿಎಂ..! – ಭವಿಷ್ಯ ನುಡಿದ ಭೈರವ ಹೆಸರಿನ ಶ್ವಾನ..!

ಏಪ್ರಿಲ್ 23 ಮತ್ತು ಏಪ್ರಿಲ್ 24ರಂದು ಉಡುಪಿ ಜಿಲ್ಲೆಯಲ್ಲಿ ಕಾಂಗ್ರೆಸ್ ಪರ ಪ್ರಚಾರ ನಡೆಸಿದ ಡಿ.ಕೆ ಶಿವಕುಮಾರ್, ಕೊಲ್ಲೂರು ಮೂಕಾಂಬಿಕೆಯ ಸನ್ನಿಧಿಯಲ್ಲೂ ಎರಡು ದಿನ ಪೂಜೆ ನೆರವೇರಿಸಿದ್ದಾರೆ. ಏಪ್ರಿಲ್ 24ರಂದು ಡಿಕೆಶಿ ನವ ಚಂಡಿಕಾ ಹೋಮ ನೆರವೇರಿಸಿದ್ದಾರೆ. ದೇವಾಳದ ಅರ್ಚಕ ನರಸಿಂಹ ಅಡಿಗ ನೇತೃತ್ವದಲ್ಲಿ ಧಾರ್ಮಿಕ ಕಾರ್ಯ ನಡೆದಿದ್ದು, ಕನಕಪುರದಲ್ಲಿ ವಿಜಯ, ಮುಖ್ಯಮಂತ್ರಿ ಸ್ಥಾನ ಪ್ರಾಪ್ತಿಯ ಮಂತ್ರವನ್ನೂ ಅರ್ಚಕರು ಪಠಿಸಿದ್ದಾರೆ. ಅರ್ಚಕರು ಪಠಿಸಿದ ಮಂತ್ರದಲ್ಲಿ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗುವ ಕನಸನ್ನ ಹೊರಗೆಳೆದಿದೆ. ಈ ಕುರಿತು ಡಿಕೆ.ಶಿವಕುಮಾರ್ ಅವ್ರನ್ನೂ ಮಾಧ್ಯಮದವರು ಪ್ರಶ್ನೆ ಮಾಡಿದ್ರು. ಇದಕ್ಕೆ ಉತ್ತರಿಸಿದ ಡಿಕೆಶಿ, ನಾನೇನ್ ಕಾವಿ ಧರಿಸಿಲ್ಲ ಅನ್ನೋ ಡೈಲಾಗ್ ಹೊಡೆದ್ರು. ಸಿಎಂ ಹುದ್ದೆಯೇ ನನ್ನ ಟಾರ್ಗೆಟ್ ಅನ್ನೋ ರೀತಿಯಲ್ಲಿ ಮಾತನಾಡಿದ್ರು. ಇನ್ನು ಮೂಕಾಂಬಿಕೆ ಸನ್ನಿಧಿಯಲ್ಲಿ ಚಂಡಿಕಾ ಹೋಮ ಮಾಡಿದ್ರೆ, ಇಷ್ಟಾರ್ಥಗಳನ್ನ ದೇವಿ ಅನುಗ್ರಹಿಸುತ್ತಾಳೆ ಅನ್ನೋ ನಂಬಿಕೆ ಇದ್ಯಂತೆ.

suddiyaana