ಮಂಡ್ಯದಿಂದ ಈ ಬಾರಿ ನಿಖಿಲ್‌ ಕುಮಾರಸ್ವಾಮಿ ಸ್ಪರ್ಧಿಸಲ್ಲ! –ಕಾರಣವೇನು ಗೊತ್ತಾ?

ಮಂಡ್ಯದಿಂದ ಈ ಬಾರಿ ನಿಖಿಲ್‌ ಕುಮಾರಸ್ವಾಮಿ ಸ್ಪರ್ಧಿಸಲ್ಲ! –ಕಾರಣವೇನು ಗೊತ್ತಾ?

ಈ ಬಾರಿಯ ಲೋಕಸಭಾ ಚುನಾವಣೆಗೆ ಜೆಡಿಎಸ್‌ ಹಾಗೂ ಬಿಜೆಪಿ ಮೈತ್ರಿ ಮಾಡಿಕೊಂಡಿದೆ. ಮಂಡ್ಯ ಲೋಕಸಭೆ ಕ್ಷೇತ್ರಕ್ಕೆ ಭಾರಿ ಪೈಪೋಟಿ ನಡೆಯುತ್ತಿದೆ. ಸುಮಲತಾ ಅಂಬರೀಶ್‌ ಅವರು ಮಂಡ್ಯ ಕ್ಷೇತ್ರ ತನಗೆ ಬಿಟ್ಟುಕೊಡಬೇಕು ಅಂತಾ ಪಟ್ಟು ಹಿಡಿಯುತ್ತಿದ್ದರೆ, ಇತ್ತ ನಿಖಿಲ್ ಕುಮಾರಸ್ವಾಮಿ ಮತ್ತೆ ಮಂಡ್ಯದಿಂದ ಸ್ಪರ್ಧೆ ಮಾಡುತ್ತಾರೆ ಎಂಬ ಮಾತುಗಳು ಕೇಳಿ ಬಂದಿದ್ದವು. ಆದರೆ ಈ ಬಾರಿ ನಿಖಿಲ್‌ ಮಂಡ್ಯ ಕಣದಿಂದ ಹಿಂದಕ್ಕೆ ಸರಿದಿದ್ದಾರೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ:   ದೆಹಲಿಯಲ್ಲಿ ರೈತರ ಪ್ರತಿಭಟನೆ – ರಾಷ್ಟ್ರರಾಜಧಾನಿಯಲ್ಲಿ ತಿಂಗಳ ಕಾಲ ಸೆಕ್ಷನ್ 144 ಜಾರಿ, ಮೆರವಣಿಗೆ ನಿಷೇಧ

ಹೌದು, ಜೆಡಿಎಸ್‌ ಹಾಗೂ ಬಿಜೆಪಿ ಮೈತ್ರಿ ಮಾಡಿಕೊಂಡ ಬಳಿಕ ಮಂಡ್ಯದಲ್ಲಿ ಸುಮಲತಾ ಅಂಬರೀಶ್‌ ಗೆ ಟಿಕೆಟ್‌ ನೀಡಬೇಕು ಅಂತಾ ಕೆಲ ಬಿಜೆಪಿ ನಾಯಕರು ಪಟ್ಟು ಹಿಡಿದಿದ್ದರೆ. ಇತ್ತ ಜೆಡಿಎಸ್‌ ನಾಯಕರು ಮಂಡ್ಯದಿಂದಲೇ ನಿಖಿಲ್‌ ಸ್ಪರ್ಧೆ ಮಾಡಬೇಕೆಂದು ಒತ್ತಡ ಹೇರಿದ್ದರು. ಅಷ್ಟೇ ಅಲ್ಲದೇ ನಿಖಿಲ್‌ ಅಭ್ಯರ್ಥಿಯಾಗುವುದು ಬಹುತೇಕ ಖಚಿತ ಎಂಬ ಮಾತು ಕೂಡ ಜೆಡಿಎಸ್‌ ವಲಯದಲ್ಲಿ ಕೇಳಿ ಬಂದಿತ್ತು. ಆದರೆ ಈಗ ಈ ಎಲ್ಲಾ ಮಾತುಗಳಿಗೆ ನಿಖಿಲ್‌ ಪೂರ್ಣವಿರಾಮ ಹಾಕಿದ್ದಾರೆ. ತಾನು ಮಂಡ್ಯ ಲೋಕಸಭೆ ಕ್ಷೇತ್ರದಿಂದ ಈ ಬಾರಿ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದಾರೆ.

ನಿಖಿಲ್‌ ಕುಮಾರಸ್ವಾಮಿ ಅವರು ಮಂಡ್ಯದಿಂದ ಸ್ಪರ್ಧೆ ಮಾಡುವುದಿಲ್ಲ ಎಂದು ಹೇಳುವುದರಲ್ಲಿ ಹಲವು ಕಾರಣಗಳಿವೆ ಎಂದು ಹೇಳಲಾಗುತ್ತಿದೆ. ಲೋಕಸಭಾ ಚುನಾವಣೆಯಲ್ಲಿ ಸೋತ ಬಳಿಕ ಮಂಡ್ಯದಲ್ಲಿ ನಿಖಿಲ್‌ ಹೆಚ್ಚು ಸಕ್ರಿಯರಾಗಿರಲಿಲ್ಲ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮಂಡ್ಯ ಜಿಲ್ಲೆ ಬಿಟ್ಟು ರಾಮನಗರದಲ್ಲಿ ಸ್ಪರ್ಧಿಸಿ ಸೋತಿದ್ದರು.  ಒಂದು ವೇಳೆ ನಿಖಿಲ್‌ ಮಂಡ್ಯದಲ್ಲೇ ಮರಳಿ ಸ್ಪರ್ಧೆ ಮಾಡಿದರೆ ಕಾಂಗ್ರೆಸ್‌ ನಾಯಕರು ಅವಕಾಶವಾದಿ ರಾಜಕಾರಣಿ ಎಂದು ಕರೆಯುವ ಸಾಧ್ಯತೆ ಇತ್ತು. ಈಗಾಗಲೇ ಎರಡು ಸೋಲು ಕಂಡಿರುವ ನಿಖಿಲ್ ರಾಜಕೀಯ ಜೀವನದಲ್ಲಿ ಮತ್ತೆ ಸೋಲಾದರೆ ಹ್ಯಾಟ್ರಿಕ್‌ ಸೋಲನ್ನು ಅನುಭವಿಸಿದ ಸಿಎಂ ಪುತ್ರ ಎಂಬ ಹಣೆಪಟ್ಟಿ ಕಟ್ಟಬಹುದು. ಈ ಕಾರಣಗಳನ್ನು ಇಟ್ಟುಕೊಂಡು ಮಂಡ್ಯ ಚುನಾವಣಾ ರಾಜಕೀಯದಿಂದ ನಿಖಿಲ್ ಹಿಂದೆ ಸರಿದಿರಬಹುದು ಎಂದು ವಿಮರ್ಷಿಸಲಾಗುತ್ತಿದೆ.

Shwetha M