ಜಿ20 ಅತಿಥಿಗಳಿಗೆ ಭಾರತದ ವಾಸ್ತವತೆ ಮರೆಮಾಡುವ ಅಗತ್ಯವಿಲ್ಲ: ರಾಹುಲ್ ಗಾಂಧಿ ಹೀಗ್ಯಾಕೆ ಹೇಳಿದ್ದು?

ಜಿ20 ಅತಿಥಿಗಳಿಗೆ ಭಾರತದ ವಾಸ್ತವತೆ ಮರೆಮಾಡುವ ಅಗತ್ಯವಿಲ್ಲ: ರಾಹುಲ್ ಗಾಂಧಿ ಹೀಗ್ಯಾಕೆ ಹೇಳಿದ್ದು?

ದೆಹಲಿಯಲ್ಲಿ ಜಿ20 ಶೃಂಗಸಭೆ ನಡೆಯುತ್ತಿದ್ದರೆ, ಇತ್ತ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಭಾರತೀಯ ಸಾಗರೋತ್ತರ ಕಾಂಗ್ರೆಸ್ ಆಯೋಜಿಸಿರುವ ಯೂರೋಪ್ ಪ್ರವಾಸದಲ್ಲಿದ್ದಾರೆ. ಅಲ್ಲಿಂದಲೇ ಭಾರತದಲ್ಲಿ ನಡೆಯುತ್ತಿರುವ ಜಿ20 ಶೃಂಗ ಸಭೆಯನ್ನು ಗಮನಿಸುತ್ತಿದ್ದಾರೆ. ಪ್ರಧಾನಿ ಮೋದಿ ಹಾಗೂ ಅಮೆರಿಕ ಅಧ್ಯಕ್ಷರನ್ನು ಪತ್ರಕರ್ತರು ಪ್ರಶ್ನಿಸಲು ಅವಕಾಶ ನೀಡದ ವಿಚಾರವಾಗಿ ರಾಹುಲ್‌ ಗಾಂಧಿ ಪ್ರತಿಕ್ರಿಯೆ ನೀಡಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ರಾಹುಲ್‌ ಗಾಂಧಿ, ಜಿ20 (G20) ಅತಿಥಿಗಳಿಗೆ ಭಾರತದ ವಾಸ್ತವತೆಯನ್ನು ಮರೆಮಾಡುವ ಅಗತ್ಯವಿಲ್ಲ ಎಂದು ಕಾಂಗ್ರೆಸ್ ನಾಯಕ ಹಾಗೂ ಸಂಸದ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ. ಅಲ್ಲದೇ ನಮ್ಮ ದೇಶದ ಬಡ ಜನರನ್ನು ಮರೆಮಾಚುವ ಅಗತ್ಯ ಇಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಉಹಾಪೋಹ ಬೇಡ.. ಮೈತ್ರಿ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಮಾಜಿ ಸಿಎಂ ಕುಮಾರಸ್ವಾಮಿ

ಅಲ್ಲದೇ ಜಿ20 ಸಭೆಗೂ ಮುನ್ನ ದೆಹಲಿಯ ಬೀದಿಗಳಲ್ಲಿ ನಾಯಿಗಳನ್ನು ಸೆರೆ ಹಿಡಿಯಲಾಗಿತ್ತು, ಅಲ್ಲದೇ ಸ್ಲಂಗಳಿಗೆ ಪರದೆಯ ಮೂಲಕ ಮರೆ ಮಾಡಲಾಗಿತ್ತು. ಈ ಬಗ್ಗೆ ಕಾಂಗ್ರೆಸ್ ವೀಡಿಯೋ ಒಂದನ್ನು ಹಂಚಿಕೊಂಡಿತ್ತು. ಈ ವಿಚಾರವಾಗಿ ನಮ್ಮ ನೆಲದ ಜನರು ಹಾಗೂ ಪ್ರಾಣಿಗಳನ್ನು ಮುಚ್ಚಿಡುವ ಅಗತ್ಯವಿಲ್ಲ ಎಂದು ಕಿಡಿಕಾರಿದ್ದಾರೆ.

ದ್ವಿಪಕ್ಷೀಯ ಸಭೆಯ ಬಳಿಕ ಅಮೆರಿಕದ ಅಧ್ಯಕ್ಷ ಜೋ ಬೈಡೆನ್ ಮತ್ತು ಪ್ರಧಾನಿ ಮೋದಿಯವರಿಗೆ ಪ್ರಶ್ನೆಗಳನ್ನು ಕೇಳಲು ಮಾಧ್ಯಮಗಳಿಗೆ ಅವಕಾಶ ನೀಡಲಿಲ್ಲ. ಬೈಡೆನ್ ಅವರ ತಂಡವು ಹಲವಾರು ವಿನಂತಿಗಳ ಹೊರತಾಗಿಯೂ ಭಾರತವು ಅವರ ದ್ವಿಪಕ್ಷೀಯ ಸಭೆಯ ನಂತರ ಅವರ ಮತ್ತು ಪ್ರಧಾನಿ ಮೋದಿಯವರಿಗೆ ಪ್ರಶ್ನೆಗಳನ್ನು ಕೇಳಲು ಮಾಧ್ಯಮಗಳಿಗೆ ಅವಕಾಶ ನೀಡಿಲ್ಲ. ಈ ಬಗ್ಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್, ಈ ಬೆಳವಣಿಗೆ ಪ್ರಜಾಪ್ರಭುತ್ವದ ಪ್ರತಿಪಾದನೆ ಹೇಗಾಗುತ್ತದೆ ಎಂದು ಪ್ರಶ್ನಿಸಿದ್ದಾರೆ. ಇದೇ ವಿಚಾರವಾಗಿ ರಾಹುಲ್ ಗಾಂಧಿಯವರು ಸಹ ಜಿ20 ಅತಿಥಿಗಳಿಂದ ಯಾವುದನ್ನು ಮುಚ್ಚಿಡುವ ಅಗತ್ಯ ಇಲ್ಲ ಎಂದು ಹೇಳಿದ್ದಾರೆ.

ಅಲ್ಲದೇ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆಯವರಿಗೆ ಜಿ20 ಸಭೆಗೆ ಆಹ್ವಾನ ನೀಡದಿರುವ ಕುರಿತು ಇದು ಕೀಳುಮಟ್ಟದ ರಾಜಕೀಯ ಎಂದು ಅವರು ಟೀಕಿಸಿದ್ದಾರೆ.

suddiyaana