ಜಮ್ಮು ಕಾಶ್ಮೀರದಲ್ಲಿ ಪ್ರತಿಕೂಲ ಹವಾಮಾನ – ಅಮರನಾಥ ಯಾತ್ರೆ ಮತ್ತೆ ಸ್ಥಗಿತ

ಜಮ್ಮು ಕಾಶ್ಮೀರದಲ್ಲಿ ಪ್ರತಿಕೂಲ ಹವಾಮಾನ – ಅಮರನಾಥ ಯಾತ್ರೆ ಮತ್ತೆ ಸ್ಥಗಿತ

ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಭಾರಿ ಮಳೆಯಾಗುತ್ತಿದೆ. ಮಳೆ ಮತ್ತು ಪ್ರತಿಕೂಲ ಹವಾಮಾನದಿಂದಾಗಿ ಭಾನುವಾರ ಪುನರಾರಂಭಗೊಂಡಿದ್ದ ಅಮರನಾಥ ಯಾತ್ರೆ ಸೋಮವಾರ ಮತ್ತೆ ಸ್ಥಗಿತಗೊಂಡಿದೆ ಎಂದು ವರದಿಯಾಗಿದೆ.

ಭಾರಿ ಮಳೆಯಾಗುತ್ತಿರುವ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮವಾಗಿ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಭಗವತಿ ಕ್ಯಾಂಪ್‌ನಲ್ಲಿ 6 ಸಾವಿರಕ್ಕೂ ಹೆಚ್ಚು ಯಾತ್ರಾರ್ಥಿಗಳು ಹಾಗೂ ಚಂದೆರಕೋಟ್‌ ಕ್ಯಾಂಪ್‌ನಲ್ಲಿ 5 ಸಾವಿರ ಯಾತ್ರಿಕರು ಸಿಲುಕಿಕೊಂಡಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಮಹಾಮಳೆಯ ರೌದ್ರ ನರ್ತನ – ಆಟಿಕೆಗಳಂತೆ ಕೊಚ್ಚಿ ಹೋಗುತ್ತಿರುವ ವಾಹನಗಳು!

ಜಮ್ಮು ಕಾಶ್ಮೀರದಲ್ಲಿ ಪ್ರತಿಕೂಲ ಹವಾಮಾನ ಇರುವ ಹಿನ್ನೆಲೆ ಹೊಸದಾಗಿ ಯಾವುದೇ ತಂಡಗಳಿಗೆ ಕ್ಯಾಂಪ್‌ಗಳಿಗೆ ಬರಲು ಅವಕಾಶ ನೀಡಲಾಗುತ್ತಿಲ್ಲ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. ಈ ನಡುವೆ ಭಾನುವಾರ ಅಮರನಾಥ ಯಾತ್ರೆ ಪುನರಾರಂಭಗೊಂಡಿದ್ದ ಹಿನ್ನೆಲೆಯಲ್ಲಿ ಒಟ್ಟು 90 ಸಾವಿರಕ್ಕೂ ಹೆಚ್ಚು ಯಾತ್ರಾರ್ಥಿಗಳು ಅಮರನಾಥದ ಗುಹಾ ದೇಗುಲದಲ್ಲಿ ಪೂಜೆ ಸಲ್ಲಿಸಿದ್ದಾರೆ. 40 ಸಾವಿರಕ್ಕೂ ಹೆಚ್ಚು ಭಕ್ತರು ಶನಿವಾರ ಯಾತ್ರೆಯನ್ನು ಸ್ಥಗಿತಗೊಳಿಸುವ ಮೊದಲು ಏಳು ತಂಡಗಳಲ್ಲಿ ಜಮ್ಮುವಿನಿಂದ ಕಾಶ್ಮೀರಕ್ಕೆ ತೆರಳಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

suddiyaana