‘ಪತ್ನಿಯ ಗ್ರಹ ಗತಿಯೇ ನಿಮ್ಮನ್ನು ಕಾಪಾಡಿದೆ’ – ಘಟನೆಯನ್ನು ಹಗುರವಾಗಿ ಪರಿಗಣಿಸದಂತೆ ಡಿಕೆಶಿಗೆ ಖ್ಯಾತ ಜ್ಯೋತಿಷಿ ಸಲಹೆ

‘ಪತ್ನಿಯ ಗ್ರಹ ಗತಿಯೇ ನಿಮ್ಮನ್ನು ಕಾಪಾಡಿದೆ’ – ಘಟನೆಯನ್ನು ಹಗುರವಾಗಿ ಪರಿಗಣಿಸದಂತೆ ಡಿಕೆಶಿಗೆ ಖ್ಯಾತ ಜ್ಯೋತಿಷಿ ಸಲಹೆ

ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಬೆಂಗಳೂರಿನಿಂದ ಕೋಲಾರಕ್ಕೆ ಪ್ರಯಾಣಿಸುತ್ತಿದ್ದ ವೇಳೆ ಹದ್ದೊಂದು ಬಂದು ಹೆಲಿಕಾಪ್ಟರ್‌ಗೆ ಡಿಕ್ಕಿ ಹೊಡೆದಿತ್ತು. ಆದರೆ, ಯಾವುದೇ ಅನಾಹುತ ಸಂಭವಿಸಿರಲಿಲ್ಲ. ಅಪಾಯದಿಂದ ಪಾರಾಗಿರುವ ಡಿಕೆ ಶಿವಕುಮಾರ್ ಈಗ ನೊಣವಿಕೆರೆ ಅಜ್ಜಯ್ಯನ ಮೊರೆ ಹೋಗಿದ್ದಾರೆ. ಅಲ್ಲದೇ ಜ್ಯೋತಿಷಿ ರಾಜಗುರು ದ್ವಾರಕನಾಥ್ ಡಿಕೆಶಿಗೆ ಕೆಲ ಸಲಹೆಗಳನ್ನು ನೀಡಿದ್ದಾರೆ.

ಇದನ್ನೂ ಓದಿ: ಡಿಕೆಶಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಗೆ ಹದ್ದು ಡಿಕ್ಕಿ – ಕೂದಲೆಳೆ  ಅಂತರದಲ್ಲಿ ಪಾರು

ಮೇ 3ರಂದು ಡಿಕೆ ಶಿವಕುಮಾರ್ ಅವರು ಜಕ್ಕೂರು ವಿಮಾನ ನಿಲ್ದಾಣದಿಂದ ಮುಳಬಾಗಿಲುಗೆ ತೆರಳುತ್ತಿದ್ದಾಗ ಹೆಲಿಕಾಪ್ಟರ್​ಗೆ ಹದ್ದು ಡಿಕ್ಕೆ ಹೊಡೆದಿತ್ತು. ಪರಿಣಾಮ ಹೆಲಿಕಾಪ್ಟರ್​ ಮುಂಭಾಗದ ಗಾಜು ಪುಡಿಪುಡಿಯಾಗಿತ್ತು. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಖ್ಯಾತ ಜ್ಯೋತಿಷಿ ರಾಜಗುರು ದ್ವಾರಕನಾಥ್, ಅವರ ಪತ್ನಿಯ ಗ್ರಹ ಗತಿ ಚೆನ್ನಾಗಿರುವುದರಿಂದ ಡಿಕೆ ಶಿವಕುಮಾರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಡಿ.ಕೆ. ಶಿವಕುಮಾರ್ ಅವರಿಗೆ ಸದ್ಯ ಗುರುಬಲ, ಶನಿ ಬಲ ಎರಡೂ ಇಲ್ಲ. ಆದರೆ, ಅವರ ಪತ್ನಿ ಉಷಾ ಅವರ ಗ್ರಹ ಗತಿ ಚೆನ್ನಾಗಿದ್ದು, ಆ ದೈವ ಬಲ ಶಿವಕುಮಾರ್ ಅವರನ್ನು ಕಾಪಾಡುತ್ತಿದೆ ಎಂದಿದ್ದಾರೆ. ಹೆಲಿಕಾಪ್ಟರ್ ಗೆ ಡಿಕ್ಕಿಹೊಡೆದ ಹದ್ದು ಮೃತಪಟ್ಟಿದೆ. ಹೀಗಾಗಿ ಪಂಚ ಪಕ್ಷಿ ಶಾಸ್ತ್ರ ಪರಿಣಿತ ಗಜೇಂದ್ರ ಅವರೊಂದಿಗೆ ಚರ್ಚೆ ನಡೆಸಿದ್ದು, ಶಾಸ್ತ್ರದ ಅನುಸಾರ ದೋಷ ಪರಿಹಾರಕ್ಕೆ ಬೆಂಗಳೂರಿನ ಅಲಸೂರಿನಲ್ಲಿರುವ ಸಾವಿರ ವರ್ಷ ಹಳೆಯ ಸೋಮೇಶ್ವರ ದೇವಾಲಯದಲ್ಲಿ ರುದ್ರಾಭಿಷೇಕ ಮಾಡಿಸಬೇಕು. ಕುಕ್ಕೆ ಸುಬ್ರಹ್ಮಣ್ಯಕ್ಕೆ 22 ದಿನಗಳ ಒಳಗೆ ಭೇಟಿ ನೀಡಬೇಕು. ಘಟನೆಯನ್ನು ಹಗುರವಾಗಿ ಪರಿಗಣಿಸದೇ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಡಿಕೆ ಶಿವಕುಮಾರ್​​ ಮುನ್ನಡೆಯಬೇಕು ಎಂದು ರಾಜಗುರು ದ್ವಾರಕನಾಥ್ ಸಲಹೆ ನೀಡಿದ್ದಾರೆ.

suddiyaana