ಬಂಡೀಪುರದಲ್ಲಿ ರೈಲ್ವೇ ಯೋಜನೆಗೆ ವಿರೋಧ – ಸೋಶಿಯಲ್‌ ಮೀಡಿಯಾದಲ್ಲಿ ಶುರುವಾಯ್ತು #SaveBandipur ಅಭಿಯಾನ

ಬಂಡೀಪುರದಲ್ಲಿ ರೈಲ್ವೇ ಯೋಜನೆಗೆ ವಿರೋಧ – ಸೋಶಿಯಲ್‌ ಮೀಡಿಯಾದಲ್ಲಿ ಶುರುವಾಯ್ತು #SaveBandipur ಅಭಿಯಾನ

ಬಂಡೀಪುರ ರಾಷ್ಟ್ರೀಯ ಉದ್ಯಾನವನ ಕರ್ನಾಟಕದ ಮತ್ತು ದೇಶದ ಪ್ರಮುಖ ಪ್ರವಾಸಿ ಸ್ಥಳಗಳಲ್ಲಿ ಒಂದಾಗಿದೆ. ಇಲ್ಲಿಗೆ ಸಾವಿರಾರು ಪ್ರವಾಸಿಗರು ಭೇಟಿ ನೀಡುತ್ತಾರೆ. ಆದ್ರೆ ಈಗ ಬಂಡೀಪುರದಲ್ಲಿ ರೈಲ್ವೆ ಯೋಜನೆಗೆ ವೈಜ್ಞಾನಿಕ ಸಮೀಕ್ಷೆ ಶುರುವಾಗಿದೆ. ಈ ಬೆನ್ನಲ್ಲೇ ಸಾಮಾಜಿಕ ಜಾಲತಾಣಗಳಲ್ಲಿ ಸೇವ್ ಬಂಡೀಪುರ ಕ್ಯಾಂಪೇನ್ ಶುರುವಾಗಿದೆ.

ಇದನ್ನೂ ಓದಿ: ಬಾಲರಾಮನನ್ನು ಕಣ್ತುಂಬಿಕೊಳ್ಳಲು ಜನವೋ ಜನ – 11 ದಿನದಲ್ಲಿ 25 ಲಕ್ಷಕ್ಕೂ ಅಧಿಕ ಮಂದಿ ಅಯೋಧ್ಯೆ ರಾಮಮಂದಿರಕ್ಕೆ ಭೇಟಿ!

ಕೇರಳದ ನಿಲಂಬೂರಿನಿಂದ ಕರ್ನಾಟಕದ ನಂಜನಗೂಡಿಗೆ ಸಂಪರ್ಕ ಕಲ್ಪಿಸುವ ರೈಲ್ವೇ ಯೋಜನೆಗೆ ವೈಜ್ಞಾನಿಕ ಸಮೀಕ್ಷೆ ಶುರುವಾಗಿದೆ. ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೂಲಕ ಹಾದು ಹೋಗುವ ಈ ಯೋಜನೆಗೆ ಪರಿಸರ ಕಾರ್ಯಕರ್ತರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಬೆನ್ನಲ್ಲೇ ಸೋಶಿಯಲ್‌ ಮೀಡಿಯಾದಲ್ಲಿ ಸೇವ್‌ ಬಂಡೀಪುರ ಕ್ಯಾಂಪೇನ್ ಆರಂಭವಾಗಿದೆ.

ಹಳೆ ಮೈಸೂರು ಭಾಗಕ್ಕೆ ಬಂಡೀಪುರ ಮತ್ತು ನಾಗರಹೊಳೆ ಕಾಡುಗಳು 2 ಕಣ್ಣುಗಳಿದ್ದಂತೆ. ಅಭಿವೃದ್ಧಿ ಹೆಸರಲ್ಲಿ ನಮ್ಮ ಕಾಡನ್ನು ನಾಶಪಡಿಸುವ ಎಲ್ಲಾ ಚಟುವಟಿಕೆಗಳು ನಿಲ್ಲಬೇಕು. ಕರ್ನಾಟಕ ಸರ್ಕಾರ ರೈಲು ಸಮೀಕ್ಷೆಗೆ ಅವಕಾಶ ನೀಡಬಾರದು. ಬಂಡೀಪುರದಲ್ಲಿ ರಾತ್ರಿ ವಾಹನ ಸಂಚಾರ ನಿಷೇಧವನ್ನು ಮುಂದುವರಿಸಬೇಕು ಎಂಬ ಆಗ್ರಹ ಕೇಳಿಬಂದಿದೆ.

Shwetha M