‘ನಮ್ಮ ಕಾರ್ಯಕರ್ತರೇ ನಮ್ಮ ಶಕ್ತಿ’ – ಲೋಕಸಭಾ ಚುನಾವಣೆಗೆ ಪಕ್ಷ ಸಂಘಟನೆಗೆ ಮುಂದಾದ ಹೆಚ್.ಡಿ ದೇವೇಗೌಡ!

‘ನಮ್ಮ ಕಾರ್ಯಕರ್ತರೇ ನಮ್ಮ ಶಕ್ತಿ’ – ಲೋಕಸಭಾ ಚುನಾವಣೆಗೆ ಪಕ್ಷ ಸಂಘಟನೆಗೆ ಮುಂದಾದ ಹೆಚ್.ಡಿ ದೇವೇಗೌಡ!

ವಿಧಾನಸಭಾ ಚುನಾವಣೆ ಬಳಿಕ ರಾಜ್ಯ ನಾಯಕರ ಕಣ್ಣು ಲೋಕಸಭಾ ಚುನಾವಣೆ ಮೇಲೆ ಬಿದ್ದಿದೆ. ಅದ್ರಲ್ಲೂ ವಿಧಾನಸಭೆಯಲ್ಲಿ ಕೇವಲ 19 ಸ್ಥಾನಗಳಲ್ಲಿ ಗೆದ್ದಿರುವ ಜೆಡಿಎಸ್ ಪಕ್ಷ ಈಗಿನಿಂದಲೇ ತಯಾರಿ ನಡೆಸುತ್ತಿದೆ. ಎಂಪಿ ಎಲೆಕ್ಷನ್ ನಲ್ಲಿ ಹೆಚ್ಚು ಸ್ಥಾನಗಳಲ್ಲಿ ಗೆಲ್ಲಲು ಜೆಡಿಎಸ್ ವರಿಷ್ಠ ಹೆಚ್.ಡಿ ದೇವೇಗೌಡ ಪಕ್ಷ ಸಂಘಟನೆಗೆ ಮುಂದಾಗಿದ್ದಾರೆ.

ಚುನಾವಣೆ ಬಗ್ಗೆ ಮಾತನಾಡಿರುವ ಹೆಚ್​ಡಿಡಿ, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸ್ವಂತ ಬಲದಲ್ಲಿ ಹೋರಾಟ ಮಾಡುತ್ತೇವೆ. ಸ್ವಂತ ಬಲದಿಂದ ಹೋರಾಟ ಮಾಡುವ ಶಕ್ತಿ‌ ಇದೆ. ಸದ್ಯ ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆ ನಡೆಯಲಿದೆ. ಆ ಚುನಾವಣೆಗಳ ಬಗ್ಗೆ ನಾವು ತಯಾರಿ ಮಾಡಬೇಕು. ಪಕ್ಷ ಉಳಿಯಬೇಕಾದರೆ ಏನು ಮಾಡಬೇಕೆಂದು ಚರ್ಚೆ ಮಾಡುತ್ತೇವೆ. ಪಕ್ಷ ಸಂಘಟನೆ ಬಗ್ಗೆ ನಮ್ಮ ಮುಖಂಡರ ಜತೆ ಚರ್ಚೆ ಮಾಡುತ್ತೇವೆ ಎಂದು ಮಾಜಿ ಪ್ರಧಾನಿ ಹೆಚ್​​.ಡಿ ದೇವೇಗೌಡ ಹೇಳಿದ್ದಾರೆ.

ಇದನ್ನೂ ಓದಿ : ‘ಬಾಡಿಗೆದಾರರಿಗೂ ಉಚಿತ ವಿದ್ಯುತ್ ಯೋಜನೆ ಸಿಗಲಿದೆ’ – ಗೊಂದಲಗಳಿಗೆ ತೆರೆ ಎಳೆದ ಸಿಎಂ ಸಿದ್ದರಾಮಯ್ಯ

ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಹೆಚ್​.ಡಿ.ದೇವೇಗೌಡ ಅವರು ಮುಂದಿನ ಲೋಕಸಭೆ ಚುನಾವಣೆ ಬಗ್ಗೆ ಸಾಕಷ್ಟು ಚರ್ಚೆ ಆಗುತ್ತಿದೆ. ಲೋಕಸಭೆ ಚುನಾವಣೆ ಬಗ್ಗೆ ಈಗಲೇ ಚರ್ಚೆ ಮಾಡಲು ಹೋಗಲ್ಲ. ಲೋಕಸಭೆ ಚುನಾವಣೆಯಲ್ಲಿ ಎಷ್ಟು ಕಡೆ ಅಭ್ಯರ್ಥಿ ಹಾಕಬೇಕು. ಎಲ್ಲೆಲ್ಲಿ ಸ್ಪರ್ಧಿಸಬೇಕೆಂದು ಮುಂದಿನ ದಿನಗಳಲ್ಲಿ ನಿರ್ಧಾರ ಮಾಡುತ್ತೇವೆ. ಲೋಕಸಭೆ ಚುನಾವಣೆಗೂ ಮುನ್ನ ಸ್ಥಳೀಯ ಚುನಾವಣೆಗೆ ತಯಾರಿ ನಡೆಸುತ್ತೇವೆ ಎಂದರು. ನಾವು ಎರಡು ಬಾರಿ ಕಾಂಗ್ರೆಸ್​​ಗೆ ಬೆಂಬಲ ಕೊಟ್ಟಿದ್ದೇವೆ. ಮುಂದೆ ಪಕ್ಷ ಹೇಗೆ ಅಭಿವೃದ್ಧಿ ಮಾಡಬೇಕು, ಪಕ್ಷ ಉಳಿಯಬೇಕಾದರೆ ಏನ್ ಮಾಡಬೇಕು. ಎಲ್ಲದರ ಬಗ್ಗೆ ಮುಖಂಡರು ಚರ್ಚೆ ಮಾಡುತ್ತೇವೆ. ನಮ್ಮ ಶಕ್ತಿ ನಮ್ಮ ಕಾರ್ಯಕರ್ತರು. ಯುವಕರಿಗೆ ಹೆಚ್ಚು ಶಕ್ತಿ ತುಂಬುವ ಕೆಲಸ ಮಾಡುತ್ತೇನೆ ಎಂದು ಹೇಳಿದರು.

suddiyaana