ಸಾಕು ನಾಯಿಗಳು ಕಚ್ಚಾಡಿಕೊಂಡಿತೆಂದು ಮಾಲೀಕರ ಜಗಳ! – ನಡೆದೇ ಹೋಯ್ತು ಘೋರ ದುರಂತ!
![ಸಾಕು ನಾಯಿಗಳು ಕಚ್ಚಾಡಿಕೊಂಡಿತೆಂದು ಮಾಲೀಕರ ಜಗಳ! – ನಡೆದೇ ಹೋಯ್ತು ಘೋರ ದುರಂತ!](https://suddiyaana.com/wp-content/uploads/2023/08/8-12.jpg)
ಸಾಕುನಾಯಿಗಳ ವಿಚಾರವಾಗಿ ನೆರೆಹೊರೆಯವರೊಂದಿಗೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾದ ಘಟನೆ ಮಧ್ಯಪ್ರದೇಶದ ಇಂದೋರ್ ನಲ್ಲಿ ನಡೆದಿದೆ. ಈ ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದು, ಎಂಟು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಏನಿದು ಘಟನೆ?
ರಾಜಾವತ್ ಮತ್ತು ಅವರ ನೆರೆಹೊರೆಯವರಾದ ವಿಮಲ್ ಅಚಲಾ (35) ರಾತ್ರಿ 11 ಗಂಟೆಗೆ ಕೃಷ್ಣಾ ಬಾಗ್ ಕಾಲೋನಿಯ ಕಿರಿದಾದ ಲೇನ್ನಲ್ಲಿ ತಮ್ಮ ಸಾಕುನಾಯಿಗಳನ್ನು ಹಿಡಿದು ನಡೆದುಕೊಂಡು ಹೋಗುತ್ತಿದ್ದಾಗ ಎರಡೂ ಶ್ವಾನಗಳು ಜಗಳ ಮಾಡಿಕೊಂಡಿವೆ. ಈ ವೇಳೆ ಶ್ವಾನಗಳ ಮಾಲೀಕರ ನಡುವೆಯೂ ವಾಗ್ವಾದ ನಡೆದಿದೆ. ಇದೇ ಸಿಟ್ಟಿನಿಂದ ಬಂದ ರಾಜಾವತ್, ತನ್ನ 12-ಬೋರ್ ರೈಫಲ್ನೊಂದಿಗೆ ಮನೆಯ ಬಾಲ್ಕನಿಯ ಮೇಲೇರಿದ್ದಾನೆ. ನಂತರ ಅಲ್ಲಿಂದಲೇ ಶೂಟೌಟ್ ಮಾಡಿದ್ದಾನೆ.
ಇದನ್ನೂ ಓದಿ: ಅಗಸದಿಂದ ಬಿತ್ತು ಒಂದೇ ಒಂದು ಮೀನು! – ಕೆಲವೇ ಹೊತ್ತಲ್ಲಿ ಭಾರಿ ಸ್ಟೋಟ.. ಇಡೀ ನಗರಕ್ಕೆ ಆವರಿಸಿತು ಕತ್ತಲು!
ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ವಿಮಲ್ ಅಚಲಾ ಹಾಗೂ ರಾಹುಲ್ ವರ್ಮಾ (27) ಮೃತ ದುರ್ದೈವಿಗಳು. ಶೂಟೌಟ್ ಆದ ತಕ್ಷಣವೇ ಗಾಯಗೊಂಡವರನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಆ ವೇಳೆಗಾಗಲೇ ಇಬ್ಬರು ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಇನ್ನು ಘಟನೆಯಲ್ಲಿ 8 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಪೊಲೀಸರು ರಾಜಾವತ್, ಅವರ ಪುತ್ರ ಸುಧೀರ್ ಮತ್ತು ಇನ್ನೊಬ್ಬ ಸಂಬಂಧಿ ಶುಭಂ ಅವರನ್ನು ಬಂಧಿಸಿದ್ದಾರೆ. ಅವರ ವಿರುದ್ಧ ಕೊಲೆ ಪ್ರಕರಣ ದಾಖಲಿಸಲಾಗಿದೆ ಎಂದು ಹೇಳಿದರು.