ಅಯ್ಯೋ ದುರ್ವಿಧಿಯೇ.. ಚಕ್ಕುಲಿಯಿಂದ ಹೊರಟೇ ಹೋಯ್ತು ಈ ವ್ಯಕ್ತಿಯ ಪ್ರಾಣ!

ಅಯ್ಯೋ ದುರ್ವಿಧಿಯೇ.. ಚಕ್ಕುಲಿಯಿಂದ ಹೊರಟೇ ಹೋಯ್ತು ಈ ವ್ಯಕ್ತಿಯ ಪ್ರಾಣ!

ಸಾವು ಯಾವಾಗ ಯಾವ ರೂಪದಲ್ಲಿ ಬರುತ್ತೆ ಅಂತಾ ಹೇಳೋದಿಕ್ಕೆ ಆಗಲ್ಲ. ಈಗಷ್ಟೇ ಖುಷಿಯಿಂದ ಮಾತನಾಡುತ್ತಿದ್ದ ವ್ಯಕ್ತಿ ಕ್ಷಣಾರ್ಧದಲ್ಲೇ ಸಾವನ್ನಪ್ಪುತ್ತಿರುವುದು ಸಾಮಾನ್ಯವಾಗಿದೆ. ಇದೀಗ ಇಂತಹದ್ದೇ ಘಟನೆಯೊಂದು ನಡೆದಿದೆ. ಚಕ್ಕುಲಿಯ ರೂಪದಲ್ಲಿ ಯಮರಾಯ ಎಂಟ್ರಿಕೊಟ್ಟಿದ್ದಾನೆ. ಚಕ್ಕುಲಿ ಗಂಟಲಲ್ಲಿ ಸಿಲುಕಿ ವ್ಯಕ್ತಿಯೊರ್ವ ಮೃತಪಟ್ಟಿದ್ದಾರೆ.

ಇದನ್ನೂ ಓದಿ: ಗಿಚ್ಚಿ ಗಿಲಿಗಿಲಿ ಶೋನಲ್ಲಿ ಬಿಗ್‌ಬಾಸ್ ಸ್ಟಾರ್‌ಗಳು – ಡ್ರೋನ್ ಪ್ರತಾಪ್, ತುಕಾಲಿ ಸಂತು, ಇಶಾನಿಗೆ ಚಾನ್ಸ್

ಈ ಘಟನೆ ತೆಲಂಗಾಣದ ಮಂಚಿರ್ಯಾಲ್​​​​​​​​ನಲ್ಲಿ ನಡೆದಿದೆ. ಮೃತ ವ್ಯಕ್ತಿ ರಂಗರಾವ್ ಅ ಚಹಾದ ಸಮಯದಲ್ಲಿ ಚಕ್ಕುಲಿ ತಿಂದಿದ್ದಾರೆ. ಚಕ್ಕುಲಿ ನುಂಗುವಾಗ   ಗಂಟಲಿನಲ್ಲಿ ಸಿಲುಕಿಕೊಂಡಿದೆ. ಪರಿಣಾಮ ಉಸಿರಾಟದ ಸಮಸ್ಯೆ ಉಂಟಾದ್ದು, ಕೆಲವೇ ಹೊತ್ತಲ್ಲಿ ಪ್ರಾಣಪಕ್ಷಿ ಹಾರಿಹೋಗಿದೆ.  ಸ್ಥಳದಲ್ಲೇ ಕುಸಿದು ಬಿದ್ದ ರಂಗರಾವ್ ನನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಪರೀಕ್ಷಿಸಿದ ವೈದ್ಯರು ಅದಾಗಲೇ ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ.

ರಂಗರಾವ್ ಸಾವಿನ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಸಂಜೆಯ ವೇಳೆ ಚಹಾದ ಜೊತೆಗೆ ಸೇವಿಸಿದ್ದ ಚಕ್ಕುಲಿ ಗಂಟಲಲ್ಲಿ ಸಿಕ್ಕಿ ಉಸಿರುಗಟ್ಟಿ ರಂಗರಾವ್ ಮೃತಪಟ್ಟಿರುವುದು ತನಿಖೆಯ ವೇಳೆ ತಿಳಿದುಬಂದಿದ್ದು, ಮಂಚಿರ್ಯಾಲ ಸಬ್ ಇನ್ಸ್ ಪೆಕ್ಟರ್ ರಾಜೇಂದರ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

Shwetha M