ರೌಡಿಗೆ ಕೈ ಮುಗಿಯುತ್ತಾರೆ, ಭ್ರಷ್ಟರಿಗೆ ಕರೆ ಮಾಡ್ತಾರೆ – ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ಕಿಡಿ

ರೌಡಿಗೆ ಕೈ ಮುಗಿಯುತ್ತಾರೆ, ಭ್ರಷ್ಟರಿಗೆ ಕರೆ ಮಾಡ್ತಾರೆ – ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ಕಿಡಿ

ಬೆಂಗಳೂರು: ಪ್ರಧಾನಿ ಮೋದಿ ರೌಡಿಗಳಿಗೆ ಕೈ ಮುಗಿಯುತ್ತಾರೆ. ಭ್ರಷ್ಟಾಚಾರಿಗಳಿಗೆ ಕರೆ ಮಾಡಿ ಪ್ರೋತ್ಸಾಹಿಸುತ್ತಾರೆ ಎಂದು ರಾಜ್ಯ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.

ಪ್ರಧಾನಿ ನರೇಂದ್ರ ಮೋದಿ ಬಿಜೆಪಿ ಹಿರಿಯ ಮುಖಂಡ ಕೆ.ಎಸ್ ಈಶ್ವರಪ್ಪಗೆ ಕರೆ ಮಾಡಿ ಮಾತನಾಡಿರುವ ವಿಚಾರ ಪ್ರಸ್ತಾಪಿಸಿ ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್, ಪ್ರಧಾನಿ ಮೋದಿ ರೌಡಿಗಳಿಗೆ ಕೈ ಮುಗಿಯುತ್ತಾರೆ. ಭ್ರಷ್ಟಾಚಾರಿಗಳಿಗೆ ಕರೆ ಮಾಡಿ ಪ್ರೋತ್ಸಾಹಿಸುತ್ತಾರೆ. ಆದರೆ ಭ್ರಷ್ಟಾಚಾರದ ದೂರುಗಳ ಪತ್ರಗಳಿಗೆ ಮಾತ್ರ ಮೌನವಹಿಸುತ್ತಾರೆ. ನೆರೆ ಸಂತ್ರಸ್ತರ ಗೋಳುಗಳನ್ನು ನಿರ್ಲಕ್ಷಿಸುತ್ತಾರೆ. ಭ್ರಷ್ಟಾಚಾರಕ್ಕೆ ಮೋದಿಯೇ ಮಹಾಪೋಷಕರು ಅಂತಾ ಕಿಡಿಕಾರಿದ್ದಾರೆ.

ಇದನ್ನೂ ಓದಿ: ನಂದಿ ಗಿರಿಧಾಮ ಪ್ರವೇಶ ಸಮಯದಲ್ಲಿ ಬದಲಾವಣೆ – ಹೊಸ ವೇಳಾಪಟ್ಟಿಯಲ್ಲಿ ಏನೇನಿದೆ?

ಪ್ರಧಾನಿ ಮೋದಿ ಈಶ್ವರಪ್ಪನವರಿಗೆ ಕರೆ ಮಾಡಿ ಶ್ಲಾಘಿಸಿದ್ದಾರೆ. ಈ ಶ್ಲಾಘನೆ ಏಕೆ? 40% ಕಮಿಷನ್ ಲೂಟಿ ಮಾಡಿದ್ದಕ್ಕಾ? ಸಂತೋಷ್ ಪಾಟೀಲರ ಜೀವ ತೆಗೆದಿದ್ದಕ್ಕಾ? ಭ್ರಷ್ಟಾಚಾರದ ಪೋಷಣೆ ಮಾಡಿದ್ದಕ್ಕಾ? ಕಮಿಷನ್ ಬಗ್ಗೆ ಪತ್ರ ಬರೆದರೂ ಪ್ರತಿಕ್ರಿಯೆ ನೀಡದ ಮೋದಿ ಕಮಿಷನ್ ಲೂಟಿಕೋರನಿಗೆ ಬೆಂಬಲಿಸಿದ್ದಾರೆ ಅಂತಾ ಟೀಕಿಸಿದೆ.

ಒಂದು ಕಡೆ ಈಶ್ವರಪ್ಪ ಮೇಲೆ ಕಮಿಷನ್ ಆರೋಪ. ಡೆತ್ ನೋಟ್ ಬರೆದಿಟ್ಟು ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ. ಇನ್ನೊಂದೆಡೆ ಸ್ವತಃ ಕರೆ ಮಾಡಿ ಈಶ್ವರಪ್ಪರನ್ನು ಶ್ಲಾಘಿಸಿದ ಪ್ರಧಾನಿ ಮೋದಿ. ಪ್ರಧಾನಿ ಮೋದಿ ‘ಭ್ರಷ್ಟಾಚಾರ’ದ ಪರ ನಿಂತಿದ್ದಾರೆ ಎನ್ನುವುದಕ್ಕೆ ಇದಕ್ಕಿಂದ ಸಾಕ್ಷಿ ಬೇಕೆ? ಅಂತಾ ಆಕ್ರೋಶ ಹೊರಹಾಕಿದೆ.

ಮೋದಿ ಅವರೇ ನಿಮಗೆ ದಮ್ಮು, ತಾಕತ್ತು ಇದ್ದರೆ ಒಂದೇ ಒಂದು ಬಾರಿ ಗುತ್ತಿಗೆದಾರರ ಸಂಘದವರೊಂದಿಗೆ ಮಾತನಾಡಿ. ಒಂದೇ ಒಂದು ಬಾರಿ ಆತ್ಮಹತ್ಯೆ ಮಾಡಿಕೊಂಡ ಸಂತೋಷ್ ಪಾಟೀಲ್ ಕುಟುಂಬದೊಂದಿಗೆ ಮಾತನಾಡಿ. ಒಂದೇ ಒಂದು ಬಾರಿ PSI ಹಗರಣದಿಂದ ಸಂತ್ರಸ್ತರಾದ ಅಭ್ಯರ್ಥಿಗಳೊಂದಿಗೆ ಮಾತನಾಡಲು ಸಾಧ್ಯವೇ ಅಂತಾ ಕಾಂಗ್ರೆಸ್ ಪಶ್ನಿಸಿದೆ.

suddiyaana