ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿ ಪ್ರಧಾನಿ ಮೋದಿ – ನಾಮಪತ್ರಕ್ಕೂ ಮುನ್ನ ಗಂಗಾ ಆರತಿ
![ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿ ಪ್ರಧಾನಿ ಮೋದಿ – ನಾಮಪತ್ರಕ್ಕೂ ಮುನ್ನ ಗಂಗಾ ಆರತಿ](https://suddiyaana.com/wp-content/uploads/2024/05/2-12.jpg)
ಪ್ರಧಾನಿ ನರೇಂದ್ರ ಮೋದಿ ವಾರಾಣಸಿಯಿಂದ 3ನೇ ಬಾರಿಗೆ ಲೋಕಸಭೆ ಚುನಾವಣೆ ಸ್ಪರ್ಧಿಸುತ್ತಿದ್ದಾರೆ. ನಾಮಪತ್ರ ಸಲ್ಲಿಸುವುದಕ್ಕೂ ಮುನ್ನ ದೇವರ ಆಶಿರ್ವಾದ ಪಡೆದಿದ್ದಾರೆ. ಮಂಗಳವಾರ ಬೆಳ್ಳಂ ಬೆಳಗ್ಗೆ ದಶಾಶ್ವಮೇಧ ಘಾಟ್ನಲ್ಲಿ ಗಂಗಾ ಆರತಿ ನೆರವೇರಿಸಿದರು.
ಇದನ್ನೂ ಓದಿ: ಜಾಮೀನು ಸಿಕ್ಕರೂ ರಾತ್ರಿಯಿಡಿ ಜೈಲಲ್ಲೇ ಕಾಲ ಕಳೆದ ರೇವಣ್ಣ.. ಶಾಸಕನಿಗೆ ಕೋರ್ಟ್ ವಿಧಿಸಿದ ಷರತ್ತುಗಳು ಏನೇನು..?
2024 ರ ಲೋಕಸಭಾ ಚುನಾವಣೆಗೆ ಮಂಗಳವಾರ 11:40 ಕ್ಕೆ ನಾಮಪತ್ರ ಸಲ್ಲಿಸಲಿದ್ದು, ಅದಕ್ಕೂ ಮುಂಚಿತವಾಗಿ ಅವರು ಗಂಗಾ ನದಿಗೆ ಪ್ರಾರ್ಥನೆ ಸಲ್ಲಿಸಿದ್ದಾರೆ. ‘ಹರ್ ಹರ್ ಮಹಾದೇವ್’ ಘೋಷಣೆಯ ನಡುವೆ ಗಂಗಾ ಪೂಜೆಯನ್ನು ಪೂರ್ಣಗೊಳಿಸಿದರು. ವೇದ ಮಂತ್ರಗಳ ಪಠಣದ ಜೊತೆಗೆ ಮೋದಿ ದಶಾಶ್ವಮೇಧ್ ಘಾಟ್ನಲ್ಲಿ ಗಂಗಾ ಮಾತೆಗೆ ಪ್ರಾರ್ಥನೆ ಸಲ್ಲಿಸಿದರು.
ಮಂಗಳವಾರ ಗಂಗಾ ಸಪ್ತಮಿ, ಈ ದಿನ ಗಂಗಾ ಮಾತೆಗೆ ಪೂಜೆ ಸಲ್ಲಿಸುವುದು ವಿಶೇಷ ಮಹತ್ವವನ್ನು ಹೊಂದಿದೆ ಎಂದು ಜ್ಯೋತಿಷಿ ಪಂಡಿತ್ ರಿಷಿ ದ್ವಿವೇದಿ ಹೇಳಿದ್ದಾರೆ. ಅದರಂತೆ ಪ್ರಧಾನಿಯವರು ಇಂದು ಗಂಗಾರತಿ ಬೆಳಗಿದ್ದಾರೆ. ಇದಕ್ಕೂ ಮುನ್ ತಮ್ಮ ಎಕ್ಸ್ ನಲ್ಲಿ, ಕಾಶಿಯೊಂದಿಗಿನ ನನ್ನ ಸಂಬಂಧವು ಅದ್ಭುತವಾಗಿದೆ. ಅದನ್ನು ಪದಗಳಲ್ಲಿ ವ್ಯಕ್ತಪಡಿಸಲು ಸಾಧ್ಯವಿಲ್ಲ. ಅಲ್ಲದೇ 10 ವರ್ಷಗಳ ಹಿಂದೆ ನಾನು ಕಾಶಿಗೆ ಬಂದಾಗ, ಗಂಗಾ ಮಾತೆ ನನ್ನನ್ನು ಕರೆದಿದ್ದಾಳೆ ಎಂದು ಹೇಳಿದ್ದೆ. ಆದರೆ ಕಳೆದ 10 ವರ್ಷಗಳಲ್ಲಿ ಗಂಗೆ ನನ್ನನ್ನು ದತ್ತು ತೆಗೆದುಕೊಂಡಿದ್ದಾಳೆ ಎಂದು ಪ್ರಧಾನಿ ಮೋದಿ ಹೇಳಿದರು.