ತೆಲುಗಿನಲ್ಲಿ ಮತ್ತೊಂದು ಚಿತ್ರ ಘೋಷಣೆ – ಟಾಲಿವುಡ್‌ನಲ್ಲಿ ಫಿಕ್ಸ್ ಆದ್ರಾ ಪ್ರಶಾಂತ್ ನೀಲ್..?

ತೆಲುಗಿನಲ್ಲಿ ಮತ್ತೊಂದು ಚಿತ್ರ ಘೋಷಣೆ – ಟಾಲಿವುಡ್‌ನಲ್ಲಿ ಫಿಕ್ಸ್ ಆದ್ರಾ ಪ್ರಶಾಂತ್ ನೀಲ್..?

ಕೆಜಿಎಫ್ ಚಿತ್ರದ ಯಶಸ್ಸಿನ ನಂತರ ಸ್ಟಾರ್ ನಿರ್ದೇಶಕರೆಂದೇ ಫೇಮಸ್ ಆಗಿರುವ ಪ್ರಶಾಂತ್ ನೀಲ್ ಸದ್ಯ ತೆಲುಗು ಚಿತ್ರರಂಗದಲ್ಲಿ ಬ್ಯುಸಿಯಾಗಿದ್ದಾರೆ. ಆದರೆ, ಪ್ರಶಾಂತ್ ನೀಲ್ ಟಾಲಿವುಡ್‌ ನಲ್ಲೇ ಫಿಕ್ಸ್ ಆಗ್ತಾರಾ ಅನ್ನೋ ಮಾತು ಕೇಳಿಬರುತ್ತಿದೆ. ಯಾಕೆಂದರೆ, ಪ್ರಶಾಂತ್ ನೀಲ್ ಈಗಾಗಲೇ ಟಾಲಿವುಡ್ ಮಾಸ್ ಹೀರೋ ಪ್ರಭಾಸ್ ಜೊತೆ ಸಲಾರ್ ಸಿನಿಮಾದಲ್ಲಿ ತೊಡಗಿಕೊಂಡಿದ್ದಾರೆ. ಅಲ್ಲದೇ, ಜ್ಯೂನಿಯರ್ ಎನ್ ಟಿ ಆರ್ ಜೊತೆ ಇನ್ನು ಹೆಸರಿಡದ ಚಿತ್ರಕ್ಕೂ ನಿರ್ದೇಶನ ಮಾಡುತ್ತಿದ್ದಾರೆ. ಇದಾದ ಬೆನ್ನಲ್ಲೇ ತೆಲುಗಿನಲ್ಲೇ ಇನ್ನೊಂದು ಚಿತ್ರವನ್ನೂ ಘೋಷಣೆ ಮಾಡಿದ್ದಾರೆ.

ಇದನ್ನೂ ಓದಿ:  ದಳಪತಿ ವಿಜಯ್ ಸಿನಿಮಾದಲ್ಲಿ ರಕ್ಷಿತ್ ಶೆಟ್ಟಿ – ತಮಿಳು ಚಿತ್ರರಂಗಕ್ಕೆ ಕಾಲಿಟ್ಟ ಸ್ಯಾಂಡಲ್‌ವುಡ್‌ ಸಿಂಪಲ್ ಸ್ಟಾರ್

ಪ್ರಭಾಸ್ ಮತ್ತು ಜ್ಯೂನಿಯರ್ ಎನ್ ಟಿಆರ್ ಚಿತ್ರಗಳನ್ನು ಮುಗಿಸಿ ಪ್ರಶಾಂತ್ ನೀಲ್ ಸ್ಯಾಂಡಲ್ ವುಡ್‌ಗೆ ವಾಪಾಸ್ ಆಗ್ತಾರೆ ಎನ್ನಲಾಗ್ತಿತ್ತು. ಆದರೀಗ ತೆಲುಗಿನಲ್ಲಿ ಮತ್ತೊಂದು ಸಿನಿಮಾ ಒಪ್ಪಿಕೊಂಡಿರುವುದನ್ನು ತೆಲುಗಿನ ಖ್ಯಾತ ನಿರ್ಮಾಪಕ ದಿಲ್ ರಾಜು ಬಹಿರಂಗ ಪಡಿಸಿದ್ದಾರೆ. ಸದ್ಯ ದಿಲ್ ರಾಜು ವಾರಿಸು ಸಿನಿಮಾದ ಸಕ್ಸಸ್‌ನ ಖುಷಿಯಲ್ಲಿದ್ದಾರೆ. ಇದೇ ಖುಷಿಯಲ್ಲಿ ಕೆಜಿಎಫ್ ಖ್ಯಾತಿಯ ಪ್ರಶಾಂತ್ ನೀಲ್ ಜೊತೆ ಸಿನಿಮಾ ಮಾಡುವ ಬಗ್ಗೆ ಮಾತನಾಡಿದ್ದಾರೆ. ಸಿನಿಮಾಗೆ ರಾವಣಂ ಎಂದು ಟೈಟಲ್ ಇಡಲಾಗಿದೆ ಅನ್ನೋ ವಿಚಾರವನ್ನು ತಿಳಿಸಿದ್ದಾರೆ. ದೊಡ್ಡ ಬಜೆಟ್‌ನಲ್ಲಿ ಸಿನಿಮಾ ಮೂಡಿಬರಲಿದೆ.

suddiyaana