ಗುರುವಿನ ಸ್ಥಾನದಲ್ಲಿದ್ದು ಕರ್ತವ್ಯ ಮರೆತ ಪಾಪಿ – 142ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಗೆ ಸರ್ಕಾರಿ ಶಾಲೆಯ ಪ್ರಾಂಶುಪಾಲನಿಂದ ಲೈಂಗಿಕ ಕಿರುಕುಳ

ಗುರುವಿನ ಸ್ಥಾನದಲ್ಲಿದ್ದು ಕರ್ತವ್ಯ ಮರೆತ ಪಾಪಿ – 142ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಗೆ ಸರ್ಕಾರಿ ಶಾಲೆಯ ಪ್ರಾಂಶುಪಾಲನಿಂದ ಲೈಂಗಿಕ ಕಿರುಕುಳ

ಶಿಕ್ಷಣ ನೀಡುವ ಗುರುಗಳು ಅಂದ್ರೆ ದೇವರು ಅಂತಾ ಭಾವಿಸುತ್ತಾರೆ. ಆದರೆ ಈ ಪ್ರಾಂಶುಪಾಲ ಮಾಡಿರುವ ಕೆಲಸ ನೋಡಿದ್ರೆ ಎಂಥವರಿಗೂ ಸಿಟ್ಟು ಬರುತ್ತೆ. ಮಕ್ಕಳ ಸಮಾನವಾದ ವಿದ್ಯಾರ್ಥಿಗಳ ಮೇಲೆ ತನ್ನ ವಕ್ರದೃಷ್ಟಿ ಬೀರಿದ್ದಾನೆ. ಸರ್ಕಾರಿ ಶಾಲೆಯೊಂದರ ಪ್ರಾಂಶುಪಾಲನೊಬ್ಬ ನೂರಕ್ಕೂ ಹೆಚ್ಚು ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುವ ಆರೋಪ ಕೇಳಿ ಬಂದಿದೆ.

ಹರಿಯಾಣದ ಜಿಂದ್ ಜಿಲ್ಲೆಯ ಸರ್ಕಾರಿ ಶಾಲೆಯಲ್ಲಿ 6 ವರ್ಷಗಳ ಅವಧಿಯಲ್ಲಿ 100ಕ್ಕೂ ಹೆಚ್ಚು ಬಾಲಕಿಯರು ಲೈಂಗಿಕ ದೌರ್ಜನ್ಯ ಮತ್ತು ಕಿರುಕುಳ ಅನುಭವಿಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ಅಧಿಕಾರಿಗಳೇ ಮಾಹಿತಿ ನೀಡಿದ್ದಾರೆ. ಉಪವಿಭಾಗೀಯ ಮ್ಯಾಜಿಸ್ಟ್ರೇಟ್ (SDM) ನೇತೃತ್ವದ ಸಮಿತಿಯು 390 ಬಾಲಕಿಯರ ಹೇಳಿಕೆಗಳನ್ನು ದಾಖಲಿಸಿಕೊಂಡಿದೆ. ಈ ಪೈಕಿ ನಾವು 142 ಸಂತ್ರಸ್ತ ಬಾಲಕಿಯರ ವಿವರಗಳನ್ನು ಪ್ರಕರಣದ ಮುಂದಿನ ಕ್ರಮಕ್ಕಾಗಿ ಶಿಕ್ಷಣ ಇಲಾಖೆಯ ಉನ್ನತ ಅಧಿಕಾರಿಗಳಿಗೆ ಕಳಿಸಿದ್ದೇವೆ. 142 ಬಾಲಕಿಯರ ಪೈಕಿ ಈಗ ಜೈಲಿನಲ್ಲಿರುವ ಆರೋಪಿ ಪ್ರಾಂಶುಪಾಲರು ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಜಿಂದ್ ಉಪ ಆಯುಕ್ತ ಮೊಹಮ್ಮದ್ ಇಮ್ರಾನ್ ರಾಜಾ ಗುರುವಾರ ಹೇಳಿದ್ದಾರೆ.

ಇದನ್ನೂ ಓದಿ : ಮೇಲುಕೋಟೆ ಜಾತ್ರೆಯಲ್ಲಿ ಹೆಜ್ಜೇನು ದಾಳಿ- 30ಕ್ಕೂ ಹೆಚ್ಚು ಭಕ್ತರಿಗೆ ಗಾಯ, 17 ಮಂದಿ ಸ್ಥಿತಿ ಗಂಭೀರ

ಆಗಸ್ಟ್ 31, 2023 ರಂದು ರಾಷ್ಟ್ರಪತಿ, ಪ್ರಧಾನ ಮಂತ್ರಿ, ಭಾರತದ ಮುಖ್ಯ ನ್ಯಾಯಮೂರ್ತಿ, ರಾಷ್ಟ್ರೀಯ ಮಹಿಳಾ ಆಯೋಗ, ರಾಜ್ಯ ಮಹಿಳಾ ಆಯೋಗ ಮತ್ತು ಇತರರಿಗೆ 15 ಬಾಲಕಿಯರು ದೌರ್ಜನ್ಯದ ಬಗ್ಗೆ ಪತ್ರ ಕಳುಹಿಸಿದ್ದರು. ಬಳಿಕ, ಈ ಪ್ರಕರಣ ದೇಶದ ಗಮನ ಸೆಳೆದಿದ್ದು, ನಂತರ ಆ ಪ್ರಾಂಶುಪಾಲರನ್ನು ಶಾಲೆಯಿಂದ ಅಮಾನತುಗೊಳಿಸಿ ಅವರನ್ನು ಬಂಧಿಸಲಾಗಿತ್ತು. ಇನ್ನು, 2 ತಿಂಗಳ ಹಿಂದೆ ಸಂಭವಿಸಿದ 60 ಅಪ್ರಾಪ್ತ ಬಾಲಕಿಯರ ಮೇಲಿನ ಲೈಂಗಿಕ ದೌರ್ಜನ್ಯದ ತನಿಖೆಗಾಗಿ ಹರ್ಯಾಣ ಸರ್ಕಾರವು ಹೊಸ ವಿಶೇಷ ತನಿಖಾ ತಂಡವನ್ನು (SIT) ರಚಿಸಿದೆ. ಹಾಗೂ, ಮಹಿಳಾ ಐಪಿಎಸ್ ಅಧಿಕಾರಿ ನೇತೃತ್ವದ ಎಸ್‌ಐಟಿ ಸಂತ್ರಸ್ತರಿಗೆ ಕೌನ್ಸೆಲಿಂಗ್ ಸೆಷನ್‌ಗಳನ್ನು ನಡೆಸಿ 10 ದಿನಗಳಲ್ಲಿ ವರದಿಯನ್ನು ಸಲ್ಲಿಸಲಿದೆ. ದುರ್ವರ್ತನೆ ಆರೋಪದ ಹಿನ್ನೆಲೆಯಲ್ಲಿ ಉಚ್ಚನ ಕಲಾನ್ ಎಸ್‌ಎಚ್‌ಒ ಅವರನ್ನು ತಂಡದಿಂದ ತೆಗೆದುಹಾಕಲಾಗಿದೆ.

 

Shantha Kumari