ಶೂಟಿಂಗ್ ವೇಳೆ ಪೃಥ್ವಿರಾಜ್ ಸುಕುಮಾರನ್‌ಗೆ ಗಂಭೀರ ಏಟು – ಆಸ್ಪತ್ರೆಗೆ ದಾಖಲು

ಶೂಟಿಂಗ್ ವೇಳೆ ಪೃಥ್ವಿರಾಜ್ ಸುಕುಮಾರನ್‌ಗೆ ಗಂಭೀರ ಏಟು – ಆಸ್ಪತ್ರೆಗೆ ದಾಖಲು

ಮಲಯಾಳಂನ ಖ್ಯಾತ ನಟ ಪೃಥ್ವಿರಾಜ್ ಸುಕುಮಾರನ್ ಚಿತ್ರೀಕರಣದ ವೇಳೆ ಗಾಯಗೊಂಡಿದ್ದಾರೆ. ಪೃಥ್ವಿರಾಜ್ ಸುಕುಮಾರನ್ ಅವರ ಕಾಲಿಗೆ ಗಂಭೀರವಾಗಿ ಏಟು ಬಿದ್ದಿದ್ದು, ಸೋಮವಾರ ಶಸ್ತ್ರಚಿಕಿತ್ಸೆ ನಡೆದಿದೆ. ಕೊಚ್ಚಿನ್‌ನಲ್ಲಿರುವ ಮರಯೂರ್ ನಲ್ಲಿ ಭಾನುವಾರ ಮಲಯಾಳಂನ ವಿಲಾಯತ್ ಬುದ್ಧ್ ಸಿನಿಮಾ ಚಿತ್ರೀಕರಣದ ವೇಳೆ ಈ ಅವಘಡ ಸಂಭವಿಸಿದೆ.

ಇದನ್ನೂ ಓದಿ: ‘ಕಟ್ಟಪ್ಪ ಬಾಹುಬಲಿಯನ್ನು ಕೊಂದಿದ್ಯಾಕೆ ಎಂಬ ಪ್ರಶ್ನೆಗೆ ಆದಿಪುರುಷ್ ಸಿನಿಮಾದಲ್ಲಿದೆ ಉತ್ತರ -ಸೆಹ್ವಾಗ್ ಹೀಗೆ ಹೇಳಿದ್ಯಾಕೆ?

ಸಿನಿಮಾದ ಆಕ್ಷನ್ ಸೀಕ್ವೆನ್ಸ್ ಶೂಟಿಂಗ್ ವೇಳೆ ನಟ ಪೃಥ್ವಿರಾಜ್ ಸುಕುಮಾರನ್ ಗಾಯಗೊಂಡಿದ್ದಾರೆ. ಅವರ ಕಾಲಿಗೆ ಶಸ್ತ್ರ ಚಿಕಿತ್ಸೆ ಮಾಡಬೇಕೆಂದು ವೈದ್ಯರು ಹೇಳಿರುವುದಾಗಿ ವರದಿಯಾಗಿದೆ. ಕೇರಳದ ಆರ್‌ಟಿಸಿ ಬಸ್‌ನಲ್ಲಿ ಚಿತ್ರದ ಅದ್ಧೂರಿ ಆಕ್ಷನ್ ಸೀಕ್ವೆನ್ಸ್ ಚಿತ್ರೀಕರಣ ನಡೀತಿತ್ತು. ಈ ವೇಳೆ ಪೃಥ್ವಿರಾಜ್ ಬಸ್‌ನಿಂದ ಜಾರಿ ಬಿದಿದ್ದಾರೆ. ಮರಯೂರು ಬಸ್ ನಿಲ್ದಾಣದಲ್ಲಿ ಅಪಘಾತ ಸಂಭವಿಸಿದೆ. ತಕ್ಷಣವೇ ಪೃಥ್ವಿರಾಜ್ ಅವರನ್ನು ಕೊಚ್ಚಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪರೀಕ್ಷೆ ನಡೆಸಿದ ವೈದ್ಯರು ಶಸ್ತ್ರಚಿಕಿತ್ಸೆಗೆ ಸೂಚಿಸಿದ್ದು, ಸೋಮವಾರ ಪೃಥ್ವಿರಾಜ್ ಕಾಲಿಗೆ ಶಸ್ತ್ರ ಚಿಕಿತ್ಸೆ ನಡೆದಿದೆ. ಇನ್ನು ಮೂರು ತಿಂಗಳು ಬೆಡ್ ರೆಸ್ಟ್ ತೆಗೆದುಕೊಳ್ಳಬೇಕಾಗುತ್ತದೆ ಎಂದು ವೈದ್ಯರು ತಿಳಿಸಿದ್ದಾರೆ.

ವಿಲಾಯತ್ ಬುದ್ಧ ಚಿತ್ರವನ್ನು ಜಯನ್ ನಂಬಿಯಾರ್ ನಿರ್ದೇಶಿಸಿದ್ದಾರೆ. ಪೃಥ್ವಿರಾಜ್ ಸುಕುಮಾರನ್ ಅವರನ್ನು ಆಸ್ಪತ್ರೆಗೆ ದಾಖಲಿಸಿರುವ ಸುದ್ದಿ ಹರಡುತ್ತಿದ್ದಂತೆಯೇ ಅವರ ಅಭಿಮಾನಿಗಳು ಆಸ್ಪತ್ರೆಯ ಮುಂದೆ ಜಮಾಯಿಸಿದ್ದರು.

suddiyaana