ಮದುವೆ ಸಮಾರಂಭವೊಂದರಲ್ಲಿ ಸಚಿವರ ಕಾಲ ಕೆಳಗೆ ರಾಶಿ ರಾಶಿ ನೋಟು – ಶಿವಾನಂದ ಪಾಟೀಲ್ ವಿರುದ್ಧ ಸಾರ್ವಜನಿಕರ ಆಕ್ರೋಶ

ಮದುವೆ ಸಮಾರಂಭವೊಂದರಲ್ಲಿ ಸಚಿವರ ಕಾಲ ಕೆಳಗೆ ರಾಶಿ ರಾಶಿ ನೋಟು – ಶಿವಾನಂದ ಪಾಟೀಲ್ ವಿರುದ್ಧ ಸಾರ್ವಜನಿಕರ ಆಕ್ರೋಶ

ರಾಜ್ಯದಲ್ಲಿ ಬರ ಪರಿಸ್ಥಿತಿ ಎದುರಾಗಿದೆ. ರೈತರು ಪರದಾಡುವಂತಾಗಿದೆ. ಆದರೆ, ಸಚಿವ ಶಿವಾನಂದ ಪಾಟೀಲ್ ಮೋಜು ಮಸ್ತಿಯಲ್ಲಿ ಕಾಲ ಕಳೆಯುತ್ತಿದ್ದಾರೆ ಎಂಬ ಬಲವಾದ ಆರೋಪ ಕೇಳಿಬಂದಿದೆ. ಸಚಿವ ಶಿವಾನಂದ ಪಾಟೀಲ್ ಅವರು ಹೈದರಾಬಾದ್ ಮದುವೆ ಸಂಭ್ರಮದಲ್ಲಿ ಮೋಜು-ಮಸ್ತಿ ಮಾಡಿದ್ದಕ್ಕೆ ಸಾರ್ವಜನಿಕ ವಲಯದಿಂದ ಭಾರೀ ಟೀಕೆ ವ್ಯಕ್ತವಾಗಿದೆ. ಅದು ಕೂಡಾ ನೋಟುಗಳ ರಾಶಿ ನಡುವೆ ಸಚಿವರನ್ನು ನೋಡಿದವರು ಸಚಿವರ ಮೇಲೆ ಟೀಕಾಪ್ರಹಾರ ಮಾಡುತ್ತಿದ್ದಾರೆ.

ಇದನ್ನೂ ಓದಿ: ನಾಯಿ ಮರಿಗೆ ಇಟ್ಟ ಹೆಸರೇ ವಿವಾದ – ರಾಹುಲ್ ಗಾಂಧಿ ವಿರುದ್ಧ ಮತ್ತೊಂದು ದೂರು ದಾಖಲು!

ರಾಜ್ಯದಲ್ಲಿ ಮಳೆಯಿಲ್ಲದೆ ಜನ ಪರದಾಡುತ್ತಿದ್ದಾರೆ. ಆದರೆ, ಸಚಿವ ಶಿವಾನಂದ ಪಾಟೀಲರು ಕಾಲಕೆಳಗೆ ನೋಟುಗಳನ್ನು ರಾಶಿ ರಾಶಿ ಹಾಕಿಕೊಂಡು ಕೂತಿರುವುದು ಈಗ ಜನರ ಆಕ್ರೋಶಕ್ಕೆ ಕಾರಣವಾಗಿದೆ. ಸಚಿವರ ಕಾಲಡಿಯಲ್ಲಿ ರಾಶಿ ಹಣ ಬಿದ್ದಿರುವುದು ಟೀಕೆಗೂ ಎಡೆಮಾಡಿಕೊಟ್ಟಿದೆ. ಹೈದರಾಬಾದ್‌ನಲ್ಲಿ ಸ್ನೇಹಿತನ ಮಗನ ಮದುವೆ ಸಮಾರಂಭದಲ್ಲಿ ಸಚಿವರು ಪಾಲ್ಗೊಂಡಿದ್ದರು. ಅಲ್ಲಿ ಸಚಿವರ ಕಾರುಬಾರಿನ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ಈ ಹಿಂದೆ ರೈತರ ಬಗ್ಗೆ ಹೇಳಿಕೆ ನೀಡಿ ಸಚಿವರು ವಿವಾದಕ್ಕೀಡಾಗಿದ್ದರು. ರೈತರು ಆತ್ಮಹತ್ಯೆ ಮಾಡಿಕೊಳ್ಳುವುದು ಪರಿಹಾರದ ಹಣಕ್ಕಾಗಿ ಎಂದು ಹೇಳಿ ಭಾರೀ ಚರ್ಚೆಗೆ ಗುರಿಯಾಗಿದ್ದರು. ಇದೀಗ ಇದೇ ಸಚಿವರು ರಾಶಿ ರಾಶಿ ಹಣದೊಂದಿಗೆ ಕೂತಿರುವುದು ಆಕ್ರೋಶಕ್ಕೆ ಕಾರಣವಾಗಿದೆ.

ಹೈದರಾಬಾದ್‍ನಲ್ಲಿ ಮದುವೆಯಲ್ಲಿ ನಡೆದ ಘಟನೆಯ ಬಗ್ಗೆ ಸಚಿವ ಶಿವಾನಂದ ಗೌಡ ಪ್ರತಿಕ್ರಿಯಿಸಿದ್ದಾರೆ. ನಾನು ಹೈದರಾಬಾದ್‍ಗೆ ಮದುವೆಗೆ ಹೋಗಿದ್ದೆ. ಅವರ ಕಲ್ಚರ್ ಅವರು ಮಾಡಿಕೊಂಡರೆ ನಾನೇನು ಮಾಡಲಿ. ಇಲ್ಲಿ ಬರ ಇದೆ ಅಂತ ಅಲ್ಲಿ ಹೈದರಾಬಾದ್ ನಲ್ಲಿ ಮದುವೆ ಮಾಡಬಾರದಾ..?. ಅಲ್ಲಿ ಬರ ಇದೆಯಾ ಎಂದು ಪ್ರಶ್ನಿಸಿದರು.

.

Sulekha