ಸಹನಟಿ ಪರಪುರುಷನ ಜೊತೆಗಿದ್ದಾಗ ಖಾಸಗಿ ಕ್ಷಣಗಳ ವಿಡಿಯೋ ಸೆರೆ – ನಟಿ ಆತ್ಮಹತ್ಯೆ, ಪುಷ್ಪಾ ಚಿತ್ರದ ನಟ ಜಗದೀಶ್ ಪ್ರತಾಪ್ ಬಂಧನ

ಸಹನಟಿ ಪರಪುರುಷನ ಜೊತೆಗಿದ್ದಾಗ ಖಾಸಗಿ ಕ್ಷಣಗಳ ವಿಡಿಯೋ ಸೆರೆ – ನಟಿ ಆತ್ಮಹತ್ಯೆ, ಪುಷ್ಪಾ ಚಿತ್ರದ ನಟ ಜಗದೀಶ್ ಪ್ರತಾಪ್ ಬಂಧನ

ನಟಿಯೊಬ್ಬರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಷ್ಪಾ ಚಿತ್ರದ ನಟ ಜಗದೀಶ್ ಪ್ರತಾಪ್ ಭಂಡಾರಿ ಅವರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಸಹನಟಿಯೊಬ್ಬರ ಖಾಸಗಿ ಕ್ಷಣಗಳನ್ನು ವಿಡಿಯೋ ಮಾಡಿ ಆಕೆಗೆ ಬೆದರಿಕೆ ಹಾಕಿರುವ ಆರೋಪ ನಟನ ಮೇಲಿದೆ.

ಇದನ್ನೂ ಓದಿ: ಬಿಗ್‌ಬಿ ಮೊಮ್ಮಗನ ಜೊತೆ ಶಾರುಖ್ ಪುತ್ರಿಯ ಡೇಟಿಂಗ್ – ಕೆಬಿಸಿಗೆ ಬಂದ ಸುಹಾನಾ ಖಾನ್‌ಗೆ ಅಮಿತಾಬ್ ಕೇಳಿದ ಪ್ರಶ್ನೆ ಏನು ಗೊತ್ತಾ?

ಅಲ್ಲು ಅರ್ಜುನ್ ನಾಯಕನಾಗಿ ನಟಿಸಿದ್ದ ಪುಷ್ಪ ಸಿನಿಮಾ ಸೂಪರ್ ಹಿಟ್ ಆಗಿತ್ತು.ಪ್ಯಾನ್ ಇಂಡಿಯಾ ಮಟ್ಟದಲ್ಲಿ ಯಶಸ್ಸು ಕಂಡಿದ್ದರಿಂದ ಆ ಚಿತ್ರದಲ್ಲಿ ನಟಿಸಿದ ಹಲವು ಕಲಾವಿದರಿಗೆ ಒಳ್ಳೆಯ ಹೆಸರು ಬಂದಿತ್ತು. ಈ ಚಿತ್ರದಲ್ಲಿ, ನಾಯಕ ಪುಷ್ಪರಾಜನ ಸ್ನೇಹಿತನ ಪಾತ್ರಧಾರಿ ಕೇಶವ ಪಾತ್ರ ಮಾಡಿದ್ದ ಜಗದೀಶ್ ಪ್ರತಾಪ್ ಭಂಡಾರಿ ಸಾಕಷ್ಟು ಹೆಸರು ಮಾಡಿದ್ದರು. ಆದರೆ, ಈಗ ಸಹನಟಿಯೊಬ್ಬರ ಖಾಸಗಿ ವಿಡಿಯೋ ಮುಂದಿಟ್ಟುಕೊಂಡು ಬೆದರಿಕೆ ಹಾಕಲು ಹೋಗಿ ಆಕೆಯ ಸಾವಿಗೆ ಕಾರಣರಾಗಿದ್ದಾರೆ.

ನವೆಂಬರ್ 29ರಂದು ಹೈದರಾಬಾದ್‌ನಲ್ಲಿ ಸಹನಟಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದರು. ತನಿಖೆ ವೇಳೆ  ಜಗದೀಶ್ ಅವರ ಮೇಲೆ ಪೊಲೀಸರಿಗೆ ಅನುಮಾನ ಮೂಡಿತ್ತು. ಆದರೆ ಜಗದೀಶ್  ತಲೆ ಮರೆಸಿಕೊಂಡಿದ್ದರು.  ಡಿಸೆಂಬರ್ 6ರಂದು ನಟ ಜಗದೀಶ್ ಸಿಕ್ಕಿಬಿದ್ದಿದ್ದಾರೆ. ಅವರನ್ನು ಪೊಲೀಸರು ಬಂಧಿಸಿದ್ದಾರೆ. ಕೋರ್ಟ್‌ಗೂ ಹಾಜರುಪಡಿಸಲಾಗಿದೆ.  ‘ಪುಷ್ಪ 2’ ಸಿನಿಮಾದಲ್ಲೂ ಅವರ ಪಾತ್ರ ಇದೆ. ಸದ್ಯ ಈ ಸಿನಿಮಾಗೆ ಬಿರುಸಿನ ಚಿತ್ರೀಕರಣ ನಡೆಯುತ್ತಿದೆ. ಈ ಸಂದರ್ಭದಲ್ಲೇ ಜಗದೀಶ್ ಅರೆಸ್ಟ್ ಆಗಿದ್ದಾರೆ.

ಹೈದರಾಬಾದ್‌ನ ಪಂಜಗುಟ್ಟ ಪೊಲೀಸರು ಜಗದೀಶ್ ಅವರನ್ನು ವಶಕ್ಕೆ ಪಡೆದಿದ್ದಾರೆ. ಕಿರುಕುಳ ಮತ್ತು ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪ ಇವರ ಮೇಲಿದೆ. ಪೊಲೀಸರ ಪ್ರಕಾರ, ನವೆಂಬರ್ 27ರಂದು ನಟಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆಕೆ ಬೇರೆ ಪುರುಷನೊಂದಿಗೆ ಇದ್ದಾಗ, ಜಗದೀಶ್ ಭಂಡಾರಿ ಆಕೆಗೆ ತಿಳಿಯದಂತೆ ವಿಡಿಯೋ ಚಿತ್ರೀಕರಿಸಿದ್ದರು. ನಂತರ ಅದನ್ನು ತೋರಿಸಿ ಬೆದರಿಕೆ ಹಾಕಿದ್ದರು. ಅವುಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡುವುದಾಗಿ ಹೆದರಿಸಿದ್ದರು. ಇದರಿಂದ ಮನನೊಂದ ನಟಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.  ಚಿತ್ರರಂಗದಲ್ಲಿ ಜಗದೀಶ್ ಈಗತಾನೆ ಗುರುತಿಸಿಕೊಳ್ಳುತ್ತಿದ್ದಾರೆ. ಪೋಷಕ ಪಾತ್ರಗಳಿಂದ ಅವರು ಬೇಡಿಕೆ ಹೆಚ್ಚಿಸಿಕೊಂಡಿದ್ದಾರೆ. ಇಂಥ ಸಮಯದಲ್ಲಿ ಗಂಭೀರ ಆರೋಪ ಎದುರಾಗಿದೆ. ಆತ್ಮಹತ್ಯೆ ಮಾಡಿಕೊಂಡ ನಟಿಗೂ ಮತ್ತು ಜಗದೀಶ್‌ಗೂ ಈ ಹಿಂದೆಯೇ ಪರಿಚಯವಿತ್ತು ಎಂದು ಪೊಲೀಸರು ಹೇಳಿದ್ದಾರೆ. ಕಿರುಚಿತ್ರಗಳ ಮೂಲಕವೇ ಆರಂಭದಲ್ಲಿ  ಗುರುತಿಸಿಕೊಂಡಿರುವ ಜಗದೀಶ್ ಭಂಡಾರಿ ಅವರು, 2019ರಲ್ಲಿ ಮಲ್ಲೇಶಂ ಚಿತ್ರದ ಮೂಲಕ ತೆಲುಗು ಸಿನಿಮಾಕ್ಕೆ ಪದಾರ್ಪಣೆ ಮಾಡಿದರು. ಇಲ್ಲಿ ಕೆಲವು ಚಿತ್ರಗಳಲ್ಲಿ ನಟಿಸಿದ್ದಾರೆ. ಆದರೆ ಇವರಿಗೆ ಬ್ರೇಕ್ ತಂದುಕೊಟ್ಟ ಚಿತ್ರ ಪುಷ್ಪ.  ಇದರ ಬೆನ್ನಲ್ಲೇ ಅವರು,  ಪಿಕ್ ಪಾಕೆಟ್, ವಿರಾಟ ಪರ್ವಂ ಮತ್ತು ಬುಟ್ಟ ಬೊಮ್ಮ ಸಿನಿಮಾಗಳಲ್ಲಿ ನಟಿಸಿ ಹೆಸರು ಮಾಡಿದ್ದಾರೆ.  ಸತ್ತಿ ಒರ್ದೆಕರಾಲು ಚಿತ್ರದ ಮೂಲಕ ನಾಯಕನಾಗಿ ಪ್ರವೇಶಿಸಿದ್ದಾರೆ.  ಇಂಥ ಗಂಭೀರ ಆರೋಪ ಬಂದಿರುವ ಹಿನ್ನೆಲೆಯಲ್ಲಿ ಅವರ ವೃತ್ತಿಜೀವನದ ಮೇಲೂ ಪರಿಣಾಮ ಬೀರಲಿದೆ.

Sulekha