ಭಾರತೀಯ ನೌಕಾಪಡೆ ಮಾಜಿ ಸಿಬ್ಬಂದಿಯ ಮರಣದಂಡನೆಗೆ ವಿರೋಧ – ಭಾರತದ ಮನವಿ ಸ್ವೀಕರಿಸಿದ ಕತಾರ್

ಭಾರತೀಯ ನೌಕಾಪಡೆ ಮಾಜಿ ಸಿಬ್ಬಂದಿಯ ಮರಣದಂಡನೆಗೆ ವಿರೋಧ – ಭಾರತದ ಮನವಿ ಸ್ವೀಕರಿಸಿದ ಕತಾರ್

ಗೂಢಾಚಾರದ ಆರೋಪದ ಮೇಲೆ 8 ಮಾಜಿ ಭಾರತೀಯ ನೌಕಾಪಡೆ ಸಿಬ್ಬಂದಿ ಕಳೆದ ತಿಂಗಳು ಕತಾರ್‌ನಲ್ಲಿ ಶಿಕ್ಷೆಗೆ ಗುರಿಯಾಗಿದ್ದು, ಅವರಿಗೆ ಮರಣದಂಡನೆ ವಿಧಿಸಲಾಗಿದೆ. ಇದೀಗ ಮರಣದಂಡನೆ ವಿಧಿಸುವುದರ ವಿರುದ್ಧ ಭಾರತ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ಇದೀಗ ಕತಾರ್ ನ್ಯಾಯಾಲಯ ಸ್ವೀಕರಿಸಿದೆ.

ವರದಿಗಳ ಪ್ರಕಾರ ಗೂಢಾಚಾರಿಕೆ ಆರೋಪದ ಮೇಲೆ ಕತಾರ್‌ನ ಗುಪ್ತಚರ ಸಂಸ್ಥೆಯು 2022ರ ಆಗಸ್ಟ್‌ನಲ್ಲಿ ಭಾರತದ ನೌಕಾಪಡೆ 8 ಮಾಜಿ ಸಿಬ್ಬಂದಿಯನ್ನು ಬಂಧಿಸಿತು. ಆದರೆ ಕತಾರ್‌ನ ಅಧಿಕಾರಿಗಳು ಅವರ ವಿರುದ್ಧದ ಆರೋಪಗಳನ್ನು ಇನ್ನೂ ಬಹಿರಂಗಪಡಿಸಿಲ್ಲ. ಅವರ ಜಾಮೀನು ಅರ್ಜಿಗಳನ್ನು ಹಲವಾರು ಬಾರಿ ತಿರಸ್ಕರಿಸಲಾಗಿತ್ತು. ಕಳೆದ ತಿಂಗಳು ಅವರ ವಿರುದ್ಧದ ತೀರ್ಪನ್ನು ಕತಾರ್‌ನ ಪ್ರಥಮ ನಿದರ್ಶನದ ನ್ಯಾಯಾಲಯವು ಪ್ರಕಟಿಸಿತು. ಇದೀಗ ಭಾರತದ ನೌಕಾಪಡೆಯ 8 ಮಾಜಿ ಸಿಬ್ಬಂದಿಗೆ ಮರಣದಂಡನೆ ವಿಧಿಸಿರುವುದನ್ನು ವಿರೋಧಿಸಿ ಭಾರತ ಸಲ್ಲಿಸಿದ ಮೇಲ್ಮನವಿಯನ್ನು ಕತಾರ್ ನ್ಯಾಯಾಲಯ ಪರಿಶೀಲಿಸಿದ ನಂತರ ವಿಚಾರಣೆಯ ದಿನಾಂಕವನ್ನು ನಿಗದಿಪಡಿಸುತ್ತದೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಹಮಾಸ್‌ ಹಾಗೂ ಇಸ್ರೇಲ್‌ ನಡುವೆ ಕದನ ವಿರಾಮ – 13 ಒತ್ತೆಯಾಳುಗಳ ಬಿಡುಗಡೆಗೆ ಹಮಾಸ್‌ ಸಿದ್ಧತೆ

ಭಾರತೀಯ ನೌಕಾಪಡೆಯ ಮಾಜಿ ಯೋಧರಾದ ಕಮಾಂಡರ್ ಪೂರ್ಣೇಂದು ತಿವಾರಿ, ಕಮಾಂಡರ್ ಸುಗುಣಾಕರ್ ಪಕಾಲ, ಕಮಾಂಡರ್ ಅಮಿತ್ ನಾಗ್ಪಾಲ್, ಕಮಾಂಡರ್ ಸಂಜೀವ್ ಗುಪ್ತಾ, ಕ್ಯಾಪ್ಟನ್ ನವತೇಜ್ ಸಿಂಗ್ ಗಿಲ್, ಕ್ಯಾಪ್ಟನ್ ಬೀರೇಂದ್ರ ಕುಮಾರ್ ವರ್ಮಾ, ಕ್ಯಾಪ್ಟನ್ ಸೌರಭ್ ವಸಿಷ್ಟ್ ಮತ್ತು ನಾವಿಕ ರಾಗೇಶ್ ಗೋಪಕುಮಾರ್ ಬಂಧಿತರು ಯೋಧರು. ಎಲ್ಲಾ ಮಾಜಿ ನೌಕಾಪಡೆಯ ಅಧಿಕಾರಿಗಳು ಭಾರತೀಯ ನೌಕಾಪಡೆಯಲ್ಲಿ 20 ವರ್ಷಗಳವರೆಗಿನ ವಿಶಿಷ್ಟ ಸೇವಾ ದಾಖಲೆಯನ್ನು ಹೊಂದಿದ್ದಾರೆ ಮತ್ತು ಪಡೆಯಲ್ಲಿ ಬೋಧಕರನ್ನು ಒಳಗೊಂಡಂತೆ ಪ್ರಮುಖ ಹುದ್ದೆಗಳನ್ನು ಹೊಂದಿದ್ದಾರೆ.

Shwetha M