ಕತಾರ್ ನಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿದ್ದ ಭಾರತೀಯ ನೌಕಾಪಡೆಯ ಯೋಧರಿಗೆ ಬಿಗ್ ರಿಲೀಫ್! – ಜೈಲುಶಿಕ್ಷೆಗೆ ಮಾರ್ಪಾಡು!

ಕತಾರ್ ನಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿದ್ದ ಭಾರತೀಯ ನೌಕಾಪಡೆಯ ಯೋಧರಿಗೆ ಬಿಗ್ ರಿಲೀಫ್! – ಜೈಲುಶಿಕ್ಷೆಗೆ ಮಾರ್ಪಾಡು!

ಕತಾರ್ ನ್ಯಾಯಾಲಯದಿಂದ ಮರಣದಂಡನೆಗೆ ಗುರಿಯಾಗಿದ್ದ ಭಾರತೀಯ ನೌಕಾಪಡೆಯ ಎಂಟು ಮಾಜಿ ಸಿಬ್ಬಂದಿಗೆ ಬಿಗ್ ರಿಲೀಫ್ ಸಿಕ್ಕಿದೆ.  ನೌಕಾಪಡೆಯ ಮಾಜಿ ಸಿಬ್ಬಂದಿಗೆ ಮರಣ ದಂಡನೆ ಶಿಕ್ಷೆಯನ್ನು ಕಡಿತಗೊಳಿಸಲಾಗಿದೆ. ಈ ಮೂಲಕ ಅವರ ಕುಟುಂಬಸ್ಥರಿಗೂ ಒಂದಿಷ್ಟು ನೆಮ್ಮದಿ ಮೂಡಿದೆ.

ಖಾಸಗಿ ಕಂಪನಿ ಅಲ್ ದಹ್ರಾ ಜತೆ ಕೆಲಸ ಮಾಡುತ್ತಿದ್ದ ಭಾರತೀಯ ಪ್ರಜೆಗಳನ್ನು ಕಳೆದ ವರ್ಷ ಆಗಸ್ಟ್‌ನಲ್ಲಿ ಬೇಹುಗಾರಿಕೆ ಆರೋಪದಡಿಯಲ್ಲಿ ಬಂಧಿಸಲಾಗಿತ್ತು. ಅಕ್ಟೋಬರ್ 26 ರಂದು ಕತಾರ್‌ನ ಪ್ರಥಮ ನಿದರ್ಶನದ ನ್ಯಾಯಾಲಯವು ಮರಣದಂಡನೆ ಶಿಕ್ಷೆಯನ್ನು ನೌಕಾಪಡೆಯ ಈ ಮಾಜಿ ಸಿಬ್ಬಂದಿಗೆ ವಿಧಿಸಿತ್ತು. ಭಾರತವು ತೀರ್ಪನ್ನು ಈ ಆಘಾತಕಾರಿ ಎಂದು ಹೇಳಿತ್ತು. ಅಷ್ಟೇ ಅಲ್ಲದೇ ನೌಕಾಪಡೆಯ ಯೋಧರಿಗೆ ಮರಣದಂಡನೆ ವಿಧಿಸಿದ ವಿರುದ್ಧ ಭಾರತ ಸರ್ಕಾರ ಮೇಲ್ಮನವಿಯನ್ನು ಸಲ್ಲಿಸಿತ್ತು. ಈ ಮೇಲ್ಮನವಿಯನ್ನು ನ್ಯಾಯಾಲಯವು ಸ್ವೀಕರಿಸಿದ ವಾರಗಳ ನಂತರ ಈ ಬೆಳವಣಿಗೆಯಾಗಿದೆ.

ಇದನ್ನೂ ಓದಿ: ಹೊಸ ವರ್ಷಾಚರಣೆಯಂದು ತುಮಕೂರಿನ ಪ್ರವಾಸಿ ತಾಣಗಳಿಗೆ ನೋ ಎಂಟ್ರಿ! –  ಎರಡು ದಿನ ಸಾರ್ವಜನಿಕರಿಗೆ ನಿರ್ಬಂಧ!

ಕತಾಕತಾರ್‌ನ ಮೇಲ್ಮನವಿ ನ್ಯಾಯಾಲಯವು ದಹ್ರಾ ಗ್ಲೋಬಲ್ ಪ್ರಕರಣದಲ್ಲಿ ಶಿಕ್ಷೆಯನ್ನು ಕಡಿಮೆ ಮಾಡಿದೆ ಎಂದು ಭಾರತೀಯ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ. ಆದರೆ, ನ್ಯಾಯಾಲಯವು ಏನು ಹೇಳಿದೆ ಎಂಬುದನ್ನು ಅದು ಸ್ಪಷ್ಟವಾಗಿ ತಿಳಿಸಿಲ್ಲ, ಈ ವಿಷಯದಲ್ಲಿ ವಿವರವಾದ ತೀರ್ಪನ್ನು ನಿರೀಕ್ಷಿಸಲಾಗುತ್ತಿದೆ ಎಂದು ಸಚಿವಾಲಯ ಹೇಳಿದೆ.

ಮುಂದಿನ ಕ್ರಮಗಳನ್ನು ನಿರ್ಧರಿಸಲು ಭಾರತೀಯ ಅಧಿಕಾರಿಗಳು, ಕಾನೂನು ತಂಡ ಮತ್ತು ಕುಟುಂಬದ ಸದಸ್ಯರೊಂದಿಗೆ ನಿಕಟ ಸಂಪರ್ಕದಲ್ಲಿದ್ದಾರೆ.

“ದಹ್ರಾ ಗ್ಲೋಬಲ್ ಪ್ರಕರಣದಲ್ಲಿ ಕತಾರ್‌ನ ಮೇಲ್ಮನವಿ ನ್ಯಾಯಾಲಯದ ತೀರ್ಪನ್ನು ನಾವು ಇಂದು ಗಮನಿಸಿದ್ದೇವೆ, ಇದರಲ್ಲಿ ಶಿಕ್ಷೆಯನ್ನು ಕಡಿಮೆ ಮಾಡಲಾಗಿದೆ. ವಿವರವಾದ ತೀರ್ಪಿಗೆ ಕಾಯಲಾಗುತ್ತಿದೆ” ಎಂದು ಸಚಿವಾಲಯವು ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ.

“ಕತಾರ್‌ನಲ್ಲಿರುವ ನಮ್ಮ ರಾಯಭಾರಿ ಮತ್ತು ಇತರ ಅಧಿಕಾರಿಗಳು ಕುಟುಂಬ ಸದಸ್ಯರೊಂದಿಗೆ ಇಂದು ಮೇಲ್ಮನವಿ ನ್ಯಾಯಾಲಯಕ್ಕೆ ಹಾಜರಾಗಿದ್ದರು. ಆರಂಭದಿಂದಲೂ ನಾವು ಅವರ ಬೆಂಬಲಕ್ಕೆ ನಿಂತಿದ್ದೇವೆ. ನಾವು ಎಲ್ಲಾ ರಾಜತಾಂತ್ರಿಕ ಮತ್ತು ಕಾನೂನು ನೆರವು ನೀಡುವುದನ್ನು ಮುಂದುವರಿಸುತ್ತೇವೆ” ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

Shwetha M