ಶಿವಣ್ಣನನ್ನು ಪ್ರೀತಿಯಿಂದ ತಬ್ಬಿಕೊಂಡ ರಾಹುಲ್ ಗಾಂಧಿ – ನಾನು ಅಭಿಮಾನಿಯಾಗಿ ಬಂದಿದ್ದೇನೆ ಎಂದ ಶಿವರಾಜ್ ಕುಮಾರ್

ಶಿವಣ್ಣನನ್ನು ಪ್ರೀತಿಯಿಂದ ತಬ್ಬಿಕೊಂಡ ರಾಹುಲ್ ಗಾಂಧಿ – ನಾನು ಅಭಿಮಾನಿಯಾಗಿ ಬಂದಿದ್ದೇನೆ ಎಂದ ಶಿವರಾಜ್ ಕುಮಾರ್

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಲೆನಾಡಿನಲ್ಲಿ ತಮ್ಮ ಅಭ್ಯರ್ಥಿಗಳ ಪರ ಪ್ರಚಾರ ನಡೆಸಿದರು. ಶಿವಮೊಗ್ಗದಲ್ಲಿ ಪ್ರಚಾರ ನಡೆಸುವ ವೇಳೆ ರಾಹುಲ್ ಗಾಂಧಿಗೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಸಾಥ್ ನೀಡಿರುವುದು ವಿಶೇಷವಾಗಿತ್ತು. ಜೊತೆಗೆ ರಾಹುಲ್ ಗಾಂಧಿ ಜೊತೆ ಶಿವಣ್ಣ ವೇದಿಕೆ ಕೂಡಾ ಹಂಚಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ರಾಹುಲ್ ಗಾಂಧಿ, ಶಿವಣ್ಣ ಅವರನ್ನು ಆತ್ಮೀಯವಾಗಿ ಆಲಂಗಿಸಿಕೊಂಡಿದ್ದಾರೆ.

ಇದನ್ನೂ ಓದಿ:  ಡಿಕೆಶಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಗೆ ಹದ್ದು ಡಿಕ್ಕಿ – ಕೂದಲೆಳೆ  ಅಂತರದಲ್ಲಿ ಪಾರು

ಇತ್ತೀಚೆಗಷ್ಟೇ ಕಾಂಗ್ರೆಸ್ ಪಕ್ಷ ಸೇರಿದ ಗೀತಾ ಶಿವರಾಜ್ ಕುಮಾರ್, ಪತಿ ಶಿವರಾಜ್ ಕುಮಾರ್ ಜೊತೆ ಪ್ರಚಾರಕ್ಕೆ ಆಗಮಿಸಿದ್ದರು. ಕಾಂಗ್ರೆಸ್ ಅಭ್ಯರ್ಥಿ ಮತ್ತು ಗೀತಾ ಸಹೋದರ ಮಧು ಬಂಗಾರಪ್ಪ ಶಿವರಾಜ್ ಕುಮಾರ್ ಅವರನ್ನು ರಾಹುಲ್ ಗೆ ಪರಿಚಯಿಸಿದಾಗ ಅವರನ್ನು ಆತ್ಮೀಯವಾಗಿ ತಬ್ಬಿಕೊಂಡರು. ಈ ಸಂದರ್ಭದಲ್ಲಿ ಮಾತನಾಡಿದ ಶಿವರಾಜ್ ಕುಮಾರ್, ತೀರ್ಥಹಳ್ಳಿಯ ಅಭಿಮಾನಿ ದೇವರಿಗೆ ನಮಸ್ಕಾರ ಎಂದರು. ನಾನು ಅಭಿಮಾನಿಯಾಗಿ, ರಾಹುಲ್ ಗಾಂಧಿಯವರನ್ನು ನೋಡಲು ಬಂದಿದ್ದೇನೆ. ರಾಹುಲ್ ಅವರ ಭಾರತ್ ಜೋಡೋ ಯಾತ್ರೆಯಿಂದ ಸ್ಪೂರ್ತಿ ಪಡೆದಿದ್ದೇನೆ. ನನಗೆ ಫಿಟ್ ನೆಸ್ ಎಂದರೆ ತುಂಬಾ ಇಷ್ಟ. ಫಿಟ್‌ನೆಸ್ ಜೊತೆಯಲ್ಲಿ ಅವರು ಒಂದೊಳ್ಳೇ ಉದ್ದೇಶದಿಂದ ಇಡೀ ದೇಶವನ್ನು ಕಾಲ್ನಡಿಗೆಯಲ್ಲಿ ಸುತ್ತಿರುವುದು ತುಂಬಾ ಉತ್ತೇಜನ ನೀಡಿದೆ ಎಂದರು. ಇದೇ ವೇಳೆ ಮಧು ಬಂಗಾರಪ್ಪ ಅವರಿಗೆ ಮತ ನೀಡಿ ಎಂದು ಮನವಿ ಮಾಡಿದರು.

ಇನ್ನು ರಾಹುಲ್ ಗಾಂಧಿ ತೀರ್ಥಹಳ್ಳಿಯಲ್ಲಿ ಕೈ ಅಭ್ಯರ್ಥಿ ಕಿಮ್ಮನೆ ರತ್ನಾಕರ್ ಪರ ಪ್ರಚಾರ ನಡೆಸಿದರು. ಶಿವಮೊಗ್ಗ ಜಿಲ್ಲೆಯಲ್ಲಿ ಪ್ರಚಾರ ನಡೆಸಿದ ನಂತರ ಚಿಕ್ಕಮಗಳೂರು ಜಿಲ್ಲೆಗೆ ಆಗಮಿಸಿದ್ದಾರೆ. ಚಿಕ್ಕಮಗಳೂರಿನಲ್ಲಿ ರಾಹುಲ್ ಗಾಂಧಿ 5 ಕ್ಷೇತ್ರಗಳ ಅಭ್ಯರ್ಥಿಗಳ ಪರ ಪ್ರಚಾರ ನಡೆಸಿದ್ದಾರೆ.

suddiyaana