ದುರ್ಬಲವಾಯ್ತು ನೈರುತ್ಯ ಮುಂಗಾರು! – ಉ.ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಉಷ್ಣಾಂಶ ಹೆಚ್ಚಳ

ದುರ್ಬಲವಾಯ್ತು ನೈರುತ್ಯ ಮುಂಗಾರು! – ಉ.ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಉಷ್ಣಾಂಶ ಹೆಚ್ಚಳ

 ಬೆಂಗಳೂರು: ರಾಜ್ಯದಲ್ಲಿ ಮಳೆ ಕೈಕೊಟ್ಟಿದೆ. ಕಳೆದ ನಾಲ್ಕು ದಿನಗಳ ಹಿಂದೆ ರಾಜ್ಯದ ಕೆಲ ಭಾಗಗಳಲ್ಲಿ ಮಾತ್ರ ಮಳೆಯಾಗಿದೆ. ನೈರುತ್ಯ ಮುಂಗಾರು ದುರ್ಬಲವಾಗಿರುವುದರಿಂದಾಗಿ ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಉಷ್ಣಾಂಶ ಹೆಚ್ಚಾಗುತ್ತಾ ಹೋಗುತ್ತಿದೆ. ಕೆಲ ಜಿಲ್ಲೆಗಳಿಗೆ ಗರಿಷ್ಠ ಉಷ್ಣಾಂಶದ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ರಾಜ್ಯದಲ್ಲಿ ನೈರುತ್ಯ ಮಳೆ ದುರ್ಬಲವಾಗಿರುವುದರಿಂದಾಗಿ ಅತೀ ಹೆಚ್ಚಿನ ಗರಿಷ್ಠ ಉಷ್ಣಾಂಶ 32.0 ಡಿ.ಸೆ. ಕಲಬುರಗಿಯಲ್ಲಿ ದಾಖಲಾಗಿದೆ. ರಾಜ್ಯದ ಸಮತಟ್ಟಾದ ಪ್ರದೇಶಗಳಲ್ಲಿ ಅತೀ ಕಡಿಮೆ ಉಷ್ಣಾಂಶ 14.8 ಡಿ.ಸೆ. ಬಾಗಲಕೋಟೆಯಲ್ಲಿ ದಾಖಲಾಗಿದೆ.

ಇದನ್ನೂ ಓದಿ: ಸಿಕ್ಕಿಂನಲ್ಲಿ ಮೇಘಸ್ಪೋಟದಿಂದ 14 ಮಂದಿ ಸಾವು- ಪಶ್ಚಿಮ ಬಂಗಾಳದಲ್ಲಿಯೂ ಪ್ರವಾಹ

ಇನ್ನು ಮುಂದಿನ ದಿನಗಳಲ್ಲಿ ಕಲಬುರಗಿ, ಬೆಳಗಾವಿ, ಕೊಪ್ಪಳ, ಹಾವೇರಿಯಲ್ಲಿ ಒಂದೆರಡು ಕಡೆಗಳಲ್ಲಿ ಗರಿಷ್ಠ ತಾಪಮಾನ 1-2 ಡಿಗ್ರಿಗಳಷ್ಟು ಸಾಮಾನ್ಯಕ್ಕಿಂತ ಹೆಚ್ಚಿರುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕೆಲವು ಜಿಲ್ಲೆಗಳಲ್ಲಿ  ಹಗುರ ಮಳೆ

ರಾಜ್ಯದ ಹಲವೆಡೆ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಚಿಕ್ಕಮಗಳೂರು ಜಿಲ್ಲೆಯ ಕೊಟ್ಟಿಗೆಹಾರದಲ್ಲಿ ಮಾತ್ರ 2 ಸೆಂಮೀ ಮಳೆಯಾಗಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಕಡೆ ಮುಂದಿನ ನಾಲ್ಕು ದಿನ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮುಂದಿನ 24 ಗಂಟೆಗಳಲ್ಲಿ ಬೆಂಗಳೂರು ಹಾಗೂ ಸುತ್ತಲಿನ ಪ್ರದೇಶಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿದ್ದು ಸಂಜೆ ಅಥವಾ ರಾತ್ರಿಯಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30 ಮತ್ತು 20 ಡಿಗ್ರಿ ಸೆಲ್ಸಿಯಸ್ ಆಗಿರುವ ಸಾಧ್ಯತೆಯಿದೆ. ಮುಂದಿನ 48 ಗಂಟೆಗಳು ಭಾಗಶಃ ಮೋಡ ಕವಿದ ವಾತಾವರಣ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿದ್ದು ಸಂಜೆ/ರಾತ್ರಿಯಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30 ಮತ್ತು 20 ಡಿಗ್ರಿ ಸೆಲ್ಸಿಯಸ್ ಆಗಿರುವ ಸಾಧ್ಯತೆಯಿದೆ.

Shwetha M