ನ್ಯಾಯ ಕೊಡಿಸಿ ಎಂದು ಮೈಸೂರಿಗೆ ಬಂದ ರಾಖಿ ಸಾವಂತ್ – ತಪ್ಪಾಗಿ ನಮಾಜ್ ಮಾಡಿ ಎದ್ವಾತದ್ವಾ ಟ್ರೋಲ್..!

ನ್ಯಾಯ ಕೊಡಿಸಿ ಎಂದು ಮೈಸೂರಿಗೆ ಬಂದ ರಾಖಿ ಸಾವಂತ್ – ತಪ್ಪಾಗಿ ನಮಾಜ್ ಮಾಡಿ ಎದ್ವಾತದ್ವಾ ಟ್ರೋಲ್..!

ಬಾಲಿವುಡ್ ನಟಿ ರಾಖಿ ಸಾವಂತ್ ಹಾಗೂ ಮೈಸೂರು ಮೂಲದ ಆದಿಲ್ ಖಾನ್ ಮದುವೆ ಪ್ರಸಂಗ ಮತ್ತು ದಾಂಪತ್ಯ ಕಲಹ ಮುಗಿಯುವ ಲಕ್ಷಣಗಳೇ ಕಾಣುತ್ತಿಲ್ಲ. ಆದಿಲ್ ಖಾನ್ ವಿರುದ್ಧ ಈಗಾಗಲೇ ರಾಖಿ ಸಾವಂತ್ ಪೊಲೀಸರಿಗೆ ದೂರು ನೀಡಿದ್ದು, ಆದಿಲ್ ಖಾನ್ ಪೊಲೀಸರ ವಶದಲ್ಲಿದ್ದಾನೆ.

ಇದನ್ನೂ ಓದಿ : ಪಕ್ಕದ ಕಟ್ಟಡವೇರಿ ಫೋಟೋ ಕ್ಲಿಕ್- ಖಾಸಗಿತನಕ್ಕೆ ಧಕ್ಕೆ ತಂದವರ ವಿರುದ್ಧ ನಟಿ ಕಂಪ್ಲೇಂಟ್

ಮೈಸೂರು ಸೊಸೆ ಎಂದೇ ಇತ್ತೀಚೆಗೆ ಕರೆಸಿಕೊಳ್ಳುತ್ತಿದ್ದ ರಾಖಿ ಸಾವಂತ್ ಬುಧವಾರ ಮೈಸೂರು ಕೋರ್ಟ್‌ಗೆ ಹಾಜರಾಗಿ ತನಗೆ ನ್ಯಾಯ ಕೊಡಿಸಿ ಎಂದು ಗೋಗೆರೆದಿದ್ದಾರೆ. ನಾನು ನ್ಯಾಯಾಧೀಶರ ಮುಂದೆ ಹಾಜರಾಗಲು ಬಂದಿದ್ದೇನೆ‌. ನನಗೆ ನ್ಯಾಯ ಬೇಕು, ಆತನಿಗೆ ಜಾಮೀನು ಯಾವುದೇ ಕಾರಣಕ್ಕೂ ಸಿಗಬಾರದು. ಆತ ನನ್ನನ್ನು ಕಾನೂನು ಬದ್ಧವಾಗಿ ಮದುವೆಯಾಗಿದ್ದಾನೆ. ಅದರ ಎಲ್ಲಾ ದಾಖಲೆ ನನ್ನ ಬಳಿ ಇದೆ. ನಾನು ಇಂದು ಬೆಳಿಗ್ಗೆ ಆದಿಲ್ ಖಾನ್ ತಂದೆ ಜೊತೆ ಮಾತನಾಡಿದೆ‌. ನಾನು ಹಿಂದೂ ಎಂಬ ಕಾರಣಕ್ಕೆ ಅವರು ಸ್ವೀಕಾರ ಮಾಡುತ್ತಿಲ್ಲ. ಹಾಗಾದ್ರೆ ನಾನು ಏನು ಮಾಡಲಿ. ನನ್ನ ಬಳಿ 1.65 ಕೋಟಿ ಹಣ ಪಡೆದಿದ್ದಾನೆ‌. ಆದರೆ ನನಗೆ ಒಂದು ಪೈಸೆ ಕೊಟ್ಟಿಲ್ಲ‌. ಮೈಸೂರು ಜನ ಸರಿ ಇಲ್ಲ. ಹೀಗಾಗಿ ಮುಂಬೈಗೆ ಬರುತ್ತೇನೆ ಎಂದು ಹೇಳಿದ್ದ. ಆ ನಂತರ ಮುಂಬೈನಲ್ಲಿ ಸಾಕಷ್ಟು ಬಾರಿ ನನ್ನ ಮೇಲೆ ಹಲ್ಲೆ ಮಾಡಿದ್ದ. ಮೈಸೂರು ಕೋರ್ಟ್ ಮೇಲೆ ವಿಶ್ವಾಸ ಇದೆ ನನಗೆ ನ್ಯಾಯ ಕೊಡಿಸಿ’ ಎಂದು ಕೇಳಿಕೊಂಡಿದ್ದಾರೆ.

ಇದನ್ನೂ ಓದಿ:

ಕಳೆದ ಕೆಲವು ದಿನಗಳಿಂದ ನಟಿ ರಾಖಿ ಸಾವಂತ್ ಮತ್ತು ಆದಿಲ್ ದಾಂಪತ್ಯ ಕಲಹ ಜೋರಾಗಿ ಸದ್ದು ಮಾಡುತ್ತಿದೆ. ಬಾಲಿವುಡ್ ನಟಿ, ಬಿಗ್ ಬಾಸ್ ಖ್ಯಾತಿಯ ರಾಖಿ ಸಾವಂತ್ ಮೈಸೂರು ಮೂಲದ ಆದಿಲ್ ಖಾನ್ ನನ್ನು ಮದುವೆಯಾಗಿದ್ದಾರೆ. ಮದುವೆಯಾಗಿ ಅನೇಕ ತಿಂಗಳ ಬಳಿಕ ಬಹಿರಂಗ ಪಡಿಸಿದ್ದರು. ಫೋಟೋಗಳನ್ನು ರಿವೀಲ್ ಮಾಡಿ ಆದಿಲ್ ಜೊತೆ ಮದುವೆಯಾಗಿರುವುದಾಗಿ ಹೇಳಿದ್ದರು. ಆದರೆ ಕೆಲವೇ ದಿನಕ್ಕೆ ಕಿತ್ತಾಡಿಕೊಂಡು ಇಬ್ಬರೂ ದೂರ ಆಗಿದ್ದಾರೆ. ಆದಿಲ್ ತನ್ನನ್ನು ಬಿಟ್ಟು ಹೋಗಿದ್ದಾನೆ, ಮೋಸ ಮಾಡಿದ್ದಾನೆ, ಹಣ ಕದ್ದು ಹೋಗಿದ್ದಾನೆ. ಬೇರೆ ಯುವತಿ ಜೊತೆ ಅನೈತಿಕ ಸಂಬಂಧ ಹೊಂದಿದ್ದಾನೆ ಎಂದು ಪತಿ ವಿರುದ್ಧ ರಾಖಿ ಸಾವಂತ್ ಸಾಲು ಸಾಲು ಆರೋಪ ಮಾಡಿದ್ದರು. ಆದಿಲ್ ವಿರುದ್ಧ ದೂರು ಕೂಡ ದಾಖಲಿಸಿದ್ದರು.

ರಾಖಿ ಸಾವಂತ್ ದೂರಿನ ಮೇರೆಗೆ ಮುಂಬೈ ಪೊಲೀಸರು ಆದಿಲ್ ನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಸದ್ಯ ಆದಿಲ್ ನ್ಯಾಯಾಂಗ ಬಂಧನದಲ್ಲಿದ್ದಾರೆ. ಈ ನಡುವೆ ರಾಖಿ ಸವಾಂತ್ ಆತನನ್ನು ಬಿಡಬೇಡಿ, ತನಗೆ ನ್ಯಾಯ ಕೊಡಿಸಿ ಎಂದು ಗೋಗರಿಯುತ್ತಿದ್ದಾರೆ. ಇದೀಗ ಮೈಸೂರು ಕೋರ್ಟ್ ಗೆ ಹಾಜರಾಗಿರುವ ನಟಿ ರಾಖಿ ಸಾವಂತ್ ತನಗೆ ನ್ಯಾಯ ಕೊಡಿಸಿ ಎಂದು ಅಂಗಾಲಾಚಿದ್ದಾರೆ.

ನಾನು ಹಿಂದೂ ಆಗಿದ್ದು ಮುಸ್ಲಿಂ ಧರ್ಮವನ್ನ ಒಪ್ಪಿಕೊಂಡಿದ್ದೇನೆ ಎನ್ನುತ್ತಿರುವ ರಾಖಿ ಸಾವಂತ್, ಫಾತೀಮಾ ಎಂದು ತಮ್ಮ ಹೆಸರನ್ನು ಬದಲಾಯಿಸಿಕೊಂಡಿದ್ದಾರೆ. ಅಷ್ಟೇ ಅಲ್ಲದೇ, ನಮಾಜ್ ಕೂಡ ಮಾಡುತ್ತಿದ್ದಾರೆ. ಆದರೆ ಸರಿಯಾಗಿ ನಮಾಜ್​ ಮಾಡಿಲ್ಲ ಎಂಬ ಕಾರಣಕ್ಕೆ ಅವರನ್ನು ಟ್ರೋಲ್​ ಮಾಡಲಾಗಿದೆ. ನೆಟ್ಟಿಗರು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ.

suddiyaana