ರಾಮ, ರಾವಣ ಹುಚ್ಚರಂತೆ ಸೀತೆ ಹಿಂದೆ ಬಿದ್ದಿದ್ದರು! – ನಾನೂ ಸೀತೆಯಂತೆಯೇ ಎಂದ ಕಾಂಗ್ರೆಸ್‌ ನಾಯಕ

ರಾಮ, ರಾವಣ ಹುಚ್ಚರಂತೆ ಸೀತೆ ಹಿಂದೆ ಬಿದ್ದಿದ್ದರು! – ನಾನೂ ಸೀತೆಯಂತೆಯೇ ಎಂದ ಕಾಂಗ್ರೆಸ್‌ ನಾಯಕ

ಜೈಪುರ: ಕಾಂಗ್ರೆಸ್ ಪಕ್ಷದ ನಾಯಕರು ಆಗಾಗ ವಿವಾದಾತ್ಮಕ ಹೇಳಿಕೆಗಳನ್ನು ನೀಡಿ ಕಾನೂನು ಸಂಕಷ್ಟ ಎದುರಿಸುತ್ತಿರುವುದು ಹೊಸದೇನಲ್ಲ. ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಮೋದಿ ಉಪನಾಮದ ಹೇಳಿಕೆ ವಿಚಾರವಾಗಿ ಸಂಕಷ್ಟದ ಸುಳಿಯಲ್ಲಿ ಸಿಲುಕಿದ್ದಾರೆ. ಈ ಬೆನ್ನಲ್ಲೇ ರಾಜಸ್ಥಾನದ ಸಚಿವ ರಾಜೇಂದ್ರ ಸಿಂಗ್ ಗುಧಾ ಅವರು ಭಗವಾನ್ ರಾಮ, ರಾವಣ ಮತ್ತು ಸೀತೆಯನ್ನು ಒಳಗೊಂಡ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ.

ಜುಂಜುನುವಿನಲ್ಲಿ ಜನರನ್ನು ಉದ್ದೇಶಿಸಿ ಸಚಿವ ರಾಜೇಂದ್ರ ಸಿಂಗ್ ಗುಢಾ ಮಾತನಾಡಿದ್ದಾರೆ. ಈ ವೇಳೆ ರಾಮ  ಮತ್ತು  ರಾವಣ ಅವರು ಹುಚ್ಚರಂತೆ ಸೀತಾ  ಮಾತೆ ಹಿಂದೆ ಬಿದ್ದಿದ್ದರು. ಅದರರ್ಥ ಜನಕ ರಾಜನ ಪುತ್ರಿ ಸೀತಾ ಮಾತೆ ಅಷ್ಟೊಂದು ಸುಂದರಿಯಾಗಿದ್ದಳು ಎಂದು ಹೇಳಿದ್ದಾರೆ. ಈ ವಿಡಿಯೋ ಸೋಷಿಯಲ್ ಮೀಡಿಯಾಗಳಲ್ಲಿ ಭಾರಿ ವೈರಲ್ ಆಗಿದ್ದು, ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂಓದಿ: ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಮತ್ತೊಂದು ಚೀತಾ ಸಾವು – ಐದು ತಿಂಗಳಲ್ಲಿ 7 ನೇ ಸಾವು

ಸೀತಾ ಮಾತೆ ಬಹಳ ಸುಂದರವಾಗಿದ್ದಳು. ಆಕೆ ಅದೆಷ್ಟು ಸುಂದರವಾಗಿದ್ದಳು ಎಂದರೆ ರಾಮ ಹಾಗೂ ರಾವಣ ಇಬ್ಬರೂ ಆಕೆಯನ್ನೂ ನೋಡಿ ಹುಚ್ಚರಾಗಿದ್ದರು. ಸೀತೆ ಸುಂದರವಾಗಿದ್ದ ಕಾರಣಕ್ಕೆ ರಾಮ ಹಾಗೂ ರಾವಣರ ನಡುವೆ ಯುದ್ಧ ನಡೆದಿತ್ತು. ರಾಮ ಹಾಗೂ ರಾವಣ ಇಬ್ಬರೂ ಉತ್ತಮ ವ್ಯಕ್ತಿಗಳು. ಆದರೆ, ಇಬ್ಬರೂ ಕೂಡ ಸೀತಾ ಮಾತೆಗೆ ಹುಚ್ಚರಾಗಿದ್ದರು. ನಿಜಕ್ಕೂ ಸೀತಾ ಮಾತೆ ಸುಂದರವಾಗಿದ್ದಳು. ಇದನ್ನೂ ಯಾರೂ ಕೂಡ ಊಹಿಸಲು ಸಾಧ್ಯವಿಲ್ಲ’ ಎಂದು ಶಾಸಕ ರಾಜೇಂದ್ರ ಸಿಂಗ್‌ ಗುಧಾ ಹೇಳಿದ್ದಾರೆ. ಅಷ್ಟಕ್ಕೆ ನಿಲ್ಲದ ಅವರು, ತಮ್ಮನ್ನೇ ಸೀತಾ ಮಾತೆಗೆ ಹೋಲಿಸಿಕೊಂಡಿದ್ದಾರೆ. ನನ್ನಲ್ಲಿರುವ ಗುಣಗಳ ಕಾರಂದಿಂದಾಗಿಯೇ ಮುಖ್ಯಮಂತ್ರಿ ಅಶೋಕ್‌ ಗೆಹ್ಲೊಟ್‌ ಹಾಗೂ ಸಚಿನ್ ಪೈಲಟ್‌ ಇಬ್ಬರಿಗೂ ನಾನು ಬೇಕಾಗಿದ್ದೇನೆ ಎಂದಿದ್ದಾರೆ.

ಈ ಕಾಂಗ್ರೆಸ್ಸಿಗರು ಹಿಂದೂಗಳನ್ನು ಗೇಲಿ ಮಾಡಲು ಮತ್ತು ಅವರ ಮತ ಬ್ಯಾಂಕ್ ರಾಜಕೀಯವನ್ನು ಇನ್ನಷ್ಟು ಗಟ್ಟಿಮಾಡಲು ಮತ್ತೆಷ್ಟು ಕೆಳಮಟ್ಟಕ್ಕೆ ಇಳಿಯುತ್ತಾರೆ? ಭಗವಾನ್ ಶ್ರೀರಾಮನ ಮೇಲಿನ ಭಾರತದ ನಂಬಿಕೆಯನ್ನು ಹುಚ್ಚ ಎಂದು ಬಣ್ಣಿಸಿದ್ದಾರೆ. ರಾಜಸ್ಥಾನ ಸರ್ಕಾರದ ಸಚಿವ ರಾಜೇಂದ್ರ ಗೂಢಾ ಅವರಿಗೆ ಸ್ವಂತ ಅಸ್ತಿತ್ವದ ಬಗ್ಗೆ ನಾಚಿಕೆಯಾಗಲಿಲ್ಲವೇ? ಇದು ಉದ್ದೇಶಪೂರ್ವಕ ಹೇಳಿಕೆ. ಇಂತಹ ಹೇಳಿಕೆಗಳಿಂದಾಗಿ ಇಂದು ಕಾಂಗ್ರೆಸ್ ಪರಿಸ್ಥಿತಿ ಶೂರ್ಪನಖಿ  ಪರಿಸ್ಥಿತಿಗೆ ಬಂದು ತಲುಪಿದೆ ಎಂದು ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.

suddiyaana