ರಾಮನಗರದಲ್ಲಿ ಅಯೋಧ್ಯೆ ಮಾದರಿಯ ರಾಮಮಂದಿರ ನಿರ್ಮಾಣ ಹೇಳಿಕೆ – ಹೆಚ್.ಡಿ ದೇವೇಗೌಡ, ಡಿಕೆಶಿ ಕಿಡಿ

ರಾಮನಗರದಲ್ಲಿ ಅಯೋಧ್ಯೆ ಮಾದರಿಯ ರಾಮಮಂದಿರ ನಿರ್ಮಾಣ ಹೇಳಿಕೆ – ಹೆಚ್.ಡಿ ದೇವೇಗೌಡ, ಡಿಕೆಶಿ ಕಿಡಿ

ರಾಮನಗರದಲ್ಲಿ ಅಯೋಧ್ಯೆ ಮಾದರಿಯ ರಾಮಮಂದಿರ ನಿರ್ಮಾಣ ಮಾಡುತ್ತೇವೆ ಎಂದು ಸಚಿವ ಅಶ್ವತ್ಥ್ ನಾರಾಯಣ ನೀಡಿರುವ ಹೇಳಿಕೆಗೆ ಕಾಂಗ್ರೆಸ್ ಮತ್ತು ಜೆಡಿಎಸ್ ಮುಖಂಡರು ಪ್ರತಿಕ್ರಿಯೆ ನೀಡಿದ್ದಾರೆ. ರಾಯಚೂರಿನಲ್ಲಿ ಮಾತನಾಡಿದ ಮಾಜಿ ಪ್ರಧಾನಿ ಹೆಚ್. ಡಿ ದೇವೇಗೌಡ, ರಾಮನಿಗೂ ಸಚಿವ ಅಶ್ವಥ್ ನಾರಾಯಣಗೂ ಏನು ಸಂಬಂಧ ಎಂದು ಪ್ರಶ್ನೆ ಮಾಡಿದ್ದಾರೆ. ಅಶ್ವಥ್ ನಾರಾಯಣ ತುಂಬಾ ಮಾತನಾಡುವುದು ಬೇಡ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಕಿಡಿಕಾರಿದ್ದಾರೆ.

ಇದನ್ನೂ ಓದಿ:  ರಾಮನಗರದಲ್ಲಿ ಅಯೋಧ್ಯೆ ಮಾದರಿಯ ರಾಮಮಂದಿರ ನಿರ್ಮಾಣ – ಯೋಜನೆ ರೂಪಿಸಲು ಸಿಎಂ ಸೂಚನೆ

ಇನ್ನು ಬೆಳಗಾವಿಯಲ್ಲಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್,  ರಾಮನಗರದಲ್ಲಿ ರಾಮ ಮಂದಿರ, ಸೀತೆ ಮಂದಿರ, ಶಿವ ಮಂದಿರವಾದರೂ ಕಟ್ಟಲಿ, ಅಷ್ಟೇ ಯಾಕೆ ಅಶ್ವಥ್ ನಾರಾಯಣನ ಮಂದಿರವಾದರೂ ಕಟ್ಟಲಿ ನಾವೇನೂ ಸಿಟ್ಟಾಗಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.

ರಾಮನಗರದಲ್ಲಿ ರಾಮದೇವರಬೆಟ್ಟದಲ್ಲಿ ರಾಮ ಮಂದಿರ ನಿರ್ಮಾಣ ವಿಚಾರವಾಗಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ರಾಮನಗರದಲ್ಲಿ ರಾಮ ಮಂದಿರವನ್ನು ಕಟ್ಟಲು ಬೇಡ ಅಂತಾ ಯಾರು ತಡೆದಿದ್ದಾರೆ. ಅವರು ಜಿಲ್ಲಾ ಮಂತ್ರಿ ಇದ್ದಾರೆ. ಅವರನ್ನ ನಾವು ತಡೀತಿವಾ ಎಂದು ವ್ಯಂಗ್ಯವಾಗಿ ಪ್ರಶ್ನಿಸಿದರು.

suddiyaana