‘ರಾಮಾಯಣ’ ಸಿನಿಮಾ ಟೀಂ ಗೆ ಎದುರಾಯ್ತು ಹೊಸ ಸಂಕಷ್ಟ! – ಶೂಟಿಂಗ್‌ ಮುಂದೂಡಿದ ಟೀಮ್!

 ‘ರಾಮಾಯಣ’ ಸಿನಿಮಾ ಟೀಂ ಗೆ ಎದುರಾಯ್ತು ಹೊಸ ಸಂಕಷ್ಟ! – ಶೂಟಿಂಗ್‌ ಮುಂದೂಡಿದ ಟೀಮ್!

ನಮಿತ್ ಮಲ್ಹೋತ್ರಾ ಹಾಗೂ ರಾಕಿಂಗ್ ಸ್ಟಾರ್ ಯಶ್ ನಿರ್ಮಾಣದ ‘ರಾಮಾಯಣ’ ಸಿನಿಮಾ ಭಾರೀ ನಿರೀಕ್ಷೆ ಹುಟ್ಟುಹಾಕಿದೆ. ಅಧಿಕೃತವಾಗಿ ಸಿನಿಮಾ ಇನ್ನು ಘೋಷಣೆ ಆಗಿಲ್ಲ. ಆದರೆ ಸದ್ದಿಲ್ಲದೇ ಸಿನಿಮಾ ಚಿತ್ರೀಕರಣ ನಡೀತಿದೆ. ಆದ್ರೆ ಈಗ ಈ ಸಿನಿಮಾಗೆ ಸಂಕಷ್ಟವೊಂದು ಎದುರಾಗಿದೆ. ಈ ಹಿನ್ನೆಲೆಯಲ್ಲಿ ಶೂಟಿಂಗ್‌ ಸ್ಥಗಿತಗೊಳಿಸಲಾಗಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಅಪಘಾತದಿಂದ ಗಾಯಗೊಂಡ ಯುವತಿಯರು  – ನೋವಿನಲ್ಲೂ ಸೆಲ್ಫಿಗೆ ಪೋಸ್ ಕೊಡಲು ಮರೆಯದ ಮಹಿಳಾ ಮಣಿಗಳು!

ಹೌದು, ರಣಬೀರ್ ಕಪೂರ್, ಯಶ್ ಹಾಗೂ ಸಾಯಿ ಪಲ್ಲವಿ ಮುಖ್ಯ ಭೂಮಿಕೆಯ ಪೌರಾಣಿಕ ಚಿತ್ರ ರಾಮಾಯಣವು ಮೂರು ವಾರಗಳ ಕಾಲ ಚಿತ್ರದ ಶೂಟಿಂಗ್ ಮುಂದಕ್ಕೆ ಹಾಕಿದೆ. ಕಾರಣ, ಕಾಪಿರೈಟ್ ಇಶ್ಯೂ.. ಕಾಪಿ ರೈಟ್‌ ಕಂಟೆಂಟ್‌ ಇರುವ ಕಾರಣಕ್ಕೆ ಚಿತ್ರದ ಮೇಲೆ ಕೇಸ್ ದಾಖಲಾಗಿದ್ದು, ಅದು ಇತ್ಯರ್ಥವಾಗುವರೆಗೂ, ಅಂದರೆ 3 ವಾರಗಳ ಕಾಲ ಶೂಟಿಂಗ್ ಮಾಡಲು ಸಾಧ್ಯವಿಲ್ಲ ಎನ್ನಲಾಗಿದೆ.

ರಾಮಾಯಣ ಭಾರತೀಯ ಪರಂಪರೆಯನ್ನ ಇಡೀ ವಿಶ್ವಕ್ಕೆ ತೆರೆದಿಡಲು ಸಿದ್ಧವಾಗುತ್ತಿರೋ ಪ್ಯಾನ್​ ವರ್ಲ್ಡ್​ ಮೂವಿ. ಈ ಸಿನಿಮಾದಿಂದ ಯಶ್​​ ದೊಡ್ಡ ರೆಕಾರ್ಡ್​ ಒಂದನ್ನು ಬರೆಯಲು ಸಜ್ಜಾಗಿದ್ದಾರೆ. ಈ ಸಿನಿಮಾಗೆ 835 ಕೋಟಿ ಬಂಡವಾಳ ಹೂಡೂದಕ್ಕೆ ಯಶ್​ ಹಾಗೂ  ನಮಿತ್ ಮಲ್ಹೋತ್ರಾ ನಿರ್ಧರಿಸಿದ್ದಾರೆ ಎನ್ನಲಾಗಿದೆ.

ಎಲ್ಲಾ ಹೊಸ ಟೆಕ್ನಾಲಜಿಯನ್ನ ಬಳಸಿ ರಾಮಾಯಣದ ಪ್ರಪಂಚವನ್ನ ರಿಯಲಿಸ್ಟಿಕ್ ಆಗಿ ತೆರೆದಿಡೋ ಜವಾಬ್ಧಾರಿ ನಿರ್ದೇಶಕ ನಿತೀಶ್ ತಿವಾತಿ ಮೇಲಿದೆ. ರಾಮಾಯಣದ ಕಥೆಯನ್ನು ಅದ್ಭುತ ದೃಶ್ಯ ವೈಭವದೊಂದಿಗೆ ಪ್ರೇಕ್ಷಕರಿಗೆ ತೋರಿಸಲು ಚಿತ್ರತಂಡ ನಿರ್ಧರಿಸಿದೆ. ಆ ಕಾರಣಕ್ಕಾಗಿ ಇಷ್ಟು ದೊಡ್ಡ ಬಜೆಟ್​ನಲ್ಲಿ ಸಿನಿಮಾ ಮಾಡಲಾಗುತ್ತಿದೆ.

Shwetha M