ಕುದುರೆ ಮೇಲಿಂದ ಬಿದ್ದ ರಣದೀಪ್ ಹೂಡಾ – ಬಾಲಿವುಡ್ ನಟನಿಗೆ ಗಂಭೀರ ಗಾಯ

ಕುದುರೆ ಮೇಲಿಂದ ಬಿದ್ದ ರಣದೀಪ್ ಹೂಡಾ – ಬಾಲಿವುಡ್ ನಟನಿಗೆ ಗಂಭೀರ ಗಾಯ

ಬಾಲಿವುಡ್ ನಟ ರಣದೀಪ್ ಹೂಡಾ ಶೂಟಿಂಗ್ ವೇಳೆ ಕುದುರೆ ಮೇಲಿಂದ ಬಿದ್ದು ಗಾಯಗೊಂಡಿದ್ದಾರೆ. ತಕ್ಷಣವೇ ಅವರನ್ನು ಮುಂಬೈನ ಕೋಕಿಲಾ ಬೆನ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ. ಕುದುರೆ ಸವಾರಿ ಮಾಡುವಾಗ ಬಿದ್ದಿರುವ ನಟ ರಣದೀಪ್ ಹೂಡಾ ಪ್ರಜ್ಞಾಹೀನರಾಗಿದ್ದರು. ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ನಟ ಸ್ಪಂದಿಸುತ್ತಿದ್ದಾರೆ ಅನ್ನೋ ಮಾಹಿತಿ ತಿಳಿದುಬಂದಿದೆ. ಕಾಲಿಗೆ ಗಂಭೀರ ಗಾಯವಾಗಿದ್ದು, ಅಗತ್ಯಬಿದ್ದಲ್ಲಿ ಶಸ್ತ್ರಚಿಕಿತ್ಸೆ ಮಾಡಬೇಕು ಎಂದು ವೈದ್ಯರು ತಿಳಿಸಿದ್ದಾರೆ. ಹೂಡಾಗೆ ಚಿಕಿತ್ಸೆ ನೀಡುತ್ತಿದ್ದ ವೈದ್ಯರು, ಸದ್ಯಕ್ಕೆ ಸಂಪೂರ್ಣ ಬೆಡ್ ರೆಸ್ಟ್ ಬೇಕು ಎಂದು ತಿಳಿಸಿದ್ದಾರೆ ಎನ್ನಲಾಗ್ತಿದೆ.

ಇದನ್ನೂ ಓದಿ:  ಬಾಲಿವುಡ್ ಅಂಗಳಕ್ಕೆ ಹಾರಿದ ಕಾಂತಾರ ಸಿನಿಮಾದ ‘ಸಿಂಗಾರ ಸಿರಿ’ – ವಿವೇಕ್ ಅಗ್ನಿಹೋತ್ರಿ ಸಿನಿಮಾದಲ್ಲಿ ಸಪ್ತಮಿ ಗೌಡ

ನಟ ರಣ್‌ದೀಪ್ ಹೂಡಾ ಸಾವರ್ಕರ್ ಸಿನಿಮಾದ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದರು. ಸಿನಿಮಾ ದೃಶ್ಯಕ್ಕಾಗಿ ಕುದುರೆ ಸವಾರಿ ಮಾಡುತ್ತಿದ್ದರು ಎಂದು ಹೇಳಲಾಗುತ್ತಿದೆ. ಸಾವರ್ಕರ್ ಪಾತ್ರ ಮಾಡುವುದಕ್ಕಾಗಿಯೇ ಅವರು 22 ಕೆಜಿ ತೂಕವನ್ನು ಕೂಡಾ ಇಳಿಸಿಕೊಳ್ಳುತ್ತಿದ್ದರು. ಕುದುರೆ ಸವಾರಿ ಮಾಡುವ ಸಮಯದಲ್ಲಿ ಕುದುರೆ ಮೇಲಿಂದ ಬಿದ್ದು ತೀವ್ರಗಾಯಗೊಂಡಿದ್ದಾರೆ. ಬಿದ್ದಿರುವ ಹೊಡೆತಕ್ಕೆ ಪ್ರಜ್ಞೆ ಕೂಡ ಕಳೆದುಕೊಂಡಿದ್ದರು. ಈ ಹಿಂದೆಯೂ ರಾಧೆ ಸಿನಿಮಾದ ಶೂಟಿಂಗ್ ವೇಳೆಯೂ ರಣದೀಪ್ ಗಾಯಗೊಂಡು ಆಸ್ಪತ್ರೆಗೆ ಸೇರಿದ್ದರು.

suddiyaana