‘ಕನಕದಾಸ’ ಪಾತ್ರದಲ್ಲಿ ರಿಯಲ್ ಸ್ಟಾರ್ ಉಪೇಂದ್ರ

‘ಕನಕದಾಸ’ ಪಾತ್ರದಲ್ಲಿ ರಿಯಲ್ ಸ್ಟಾರ್ ಉಪೇಂದ್ರ

ಡಿಫರೆಂಟ್ ಪಾತ್ರ, ಡಿಫರೆಂಟ್ ಸ್ಟೋರಿ ಏನೇ ಮಾಡಿದರೂ ಡಿಫರೆಂಟ್.. ಹೀಗೆ ಸದಾ ಭಿನ್ನ ಪಾತ್ರ, ವಿಭಿನ್ನ ಕಥೆ ನೀಡುವ ರಿಯಲ್ ಸ್ಟಾರ್ ಉಪೇಂದ್ರ ಈಗ ಐತಿಹಾಸಿಕ ಪಾತ್ರದಲ್ಲಿ ಬಣ್ಣ ಹಚ್ಚಲಿದ್ದಾರೆ.  ಕುಟುಂಬ, ಗೌರಮ್ಮ, ಗೋಕರ್ಣ, ದುಬೈ ಬಾಬು ಚಿತ್ರಗಳನ್ನ ಉಪ್ಪಿಗೆ ನಿರ್ದೇಶನ ಮಾಡಿದ್ದ ನಿರ್ದೇಶಕ ನಾಗಣ್ಣ ಈ ಹೊಸ ಚಿತ್ರಕ್ಕೆ ಡೈರೆಕ್ಷನ್ ಮಾಡ್ತಿದ್ದಾರೆ. ಈ ಮೂಲಕ 5ನೇ ಬಾರಿಗೆ ಉಪ್ಪಿ-ನಾಗಣ್ಣ ಒಂದಾಗುತ್ತಿದ್ದಾರೆ. ಈ ಚಿತ್ರದಲ್ಲಿ ಉಪೇಂದ್ರ ಕನಕದಾಸರ ಪಾತ್ರ ನಿರ್ವಹಿಸಲಿದ್ದಾರೆ.

ಇದನ್ನೂ ಓದಿ:  “ಮಾರಿ.. ಮಾರಿ.. ಮಾರಿಗೆ ದಾರಿ” – ರಾಜ್‌ ಬಿ ಶೆಟ್ಟಿಯ“ಟೋಬಿ “ ಚಿತ್ರ ರಿಲೀಸ್‌ ಗೆ ಡೇಟ್ ಫಿಕ್ಸ್‌

ಉಪೇಂದ್ರ ಅವರು ಎರಡು ಶೇಡ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ.  ಅದಕ್ಕಾಗಿ ಲುಕ್ ಬದಲಿಸಿಕೊಳ್ಳಲಿದ್ದಾರೆ. ಈ ಸಿನಿಮಾಗಾಗಿ ನಿರ್ದೇಶಕರು ಆಯ್ಕೆ ಮಾಡಿಕೊಂಡಿರುವ ಕಥೆ 15ನೇ ಶತಮಾನದ್ದು. ಕನಕದಾಸರ ಸಿದ್ದಾಂತಗಳಿಂದ ಆದ ಪರಿಣಾಮಗಳು ಸೇರಿದಂತೆ ಹಲವು ವಿಚಾರಗಳ ಬಗ್ಗೆ ತೆರೆಮೇಲೆ ತರಲು ಡೈರೆಕ್ಟರ್ ನಾಗಣ್ಣ ಸಜ್ಜಾಗಿದ್ದಾರೆ. ಈ ಸಿನಿಮಾಗೆ ಖ್ಯಾತ ಚಿತ್ರಕಥೆಗಾರ ಜಿ.ಕೆ. ಭಾರವಿ ಚಿತ್ರಕಥೆ ಬರೆದಿದ್ದಾರೆ. ಹಂಸಲೇಖ ಸಂಗೀತ ಸಂಯೋಜನೆ ಮಾಡುತ್ತಿದ್ದು, ಈಗ ಕೆಲಸ ಆರಂಭಿಸಿದ್ದಾರೆ. ಜಗನ್ನಾಥ್ ಅವರು ಉಪ್ಪಿ ಹೊಸ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ.

suddiyaana