ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿದ ರೇಣುಕಾಚಾರ್ಯ – ಲೋಕಸಭಾ ಟಿಕೆಟ್‌ ಮೇಲೆ ಕಣ್ಣು!

ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿದ ರೇಣುಕಾಚಾರ್ಯ – ಲೋಕಸಭಾ ಟಿಕೆಟ್‌ ಮೇಲೆ ಕಣ್ಣು!

ರಾಜ್ಯ ರಾಜಕೀಯದಲ್ಲಿ ಆಪರೇಷನ್ ಹಸ್ತದ ಚರ್ಚೆ ಜೋರಾಗಿದ್ದು ಈ ನಡುವೆ ಮಾಜಿ ಶಾಸಕ ಎಂ.ಪಿ ರೇಣುಕಾಚಾರ್ಯ ಇವತ್ತು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ರನ್ನ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಪ್ರತ್ಯೇಕ ಭೇಟಿಯಾಗಿ ಮಾತುಕತೆ ನಡೆಸಿರುವ ರೇಣುಕಾಚಾರ್ಯ ಅವರ ನಡೆ ಭಾರೀ ಕುತೂಹಲ ಮೂಡಿಸಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಪ್ರಧಾನಿ ರೋಡ್‌ ಶೋ ಇರಲ್ಲ – ಸಚಿವೆ ಶೋಭಾ ಕರಂದ್ಲಾಜೆ ಸ್ಪಷ್ಟನೆ

ಸಿದ್ದರಾಮಯ್ಯ ಅವರ ನಿವಾಸದಲ್ಲಿ ಸುಮಾರು 20 ನಿಮಿಷಗಳ ಕಾಲ ಚರ್ಚೆ ನಡೆಸಿದ್ದಾರೆ.. ಬಳಿಕ ಮಾತನಾಡಿದ ರೇಣುಕಾಚಾರ್ಯ, ನಾನು‌ ಕೂಡ ದಾವಣಗೆರೆ ಲೋಕಸಭಾ ಬಿಜೆಪಿ ಟಿಕೆಟ್ ಆಕಾಂಕ್ಷಿ, ಟಿಕೆಟ್ ಬೇಕು ಅಂತ ಕೇಳಿದ್ದೇನೆ. ವರಿಷ್ಠರು ಏನ್ ತೀರ್ಮಾನ ಮಾಡ್ತಾರೆ ಅಂತ ನೋಡಬೇಕು. ಯಾರು ಬಿಜೆಪಿ ಬಿಡುತ್ತಾರೋ ನನಗೆ ಗೊತ್ತಿಲ್ಲ.. ನಾನು ಬಿಜೆಪಿಯಲ್ಲೆ ಇದ್ದೇನೆ, ಕಾಂಗ್ರೆಸ್ ಸೇರುವಂತೆ ಯಾರು ಆಫರ್ ಕೊಟ್ಟಿಲ್ಲ ಎಂದು ರೇಣುಕಾಚಾರ್ಯ ಸ್ಪಷ್ಟಪಡಿಸಿದ್ದಾರೆ.

suddiyaana