ಅಭಿಮಾನಿಗಳಿಗೆ ಸರ್‌ಪ್ರೈಸ್ ಕೊಟ್ಟ ರಿಷಭ್ ಪಂತ್ – ಅಪಘಾತದ ನಂತರ ಮೊದಲ ಬಾರಿಗೆ ಕಾಣಿಸಿಕೊಂಡ ವಿಕೆಟ್ ಕೀಪರ್

ಅಭಿಮಾನಿಗಳಿಗೆ ಸರ್‌ಪ್ರೈಸ್ ಕೊಟ್ಟ ರಿಷಭ್ ಪಂತ್ – ಅಪಘಾತದ ನಂತರ ಮೊದಲ ಬಾರಿಗೆ ಕಾಣಿಸಿಕೊಂಡ ವಿಕೆಟ್ ಕೀಪರ್

ಐಪಿಎಲ್ ಕ್ರಿಕೆಟ್ ಪ್ರೇಮಿಗಳು ಟೀಮ್ ಇಂಡಿಯಾ ವಿಕೆಟ್ ಕೀಪರ್ ರಿಷಭ್ ಪಂತ್‌ ಅವರನ್ನು ಸಿಕ್ಕಾಪಟ್ಟೆ ಮಿಸ್ ಮಾಡಿಕೊಳ್ಳುತ್ತಿದ್ದರು. ಅದರಲ್ಲೂ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಅಭಿಮಾನಿಗಳು ಕೂಡಾ ರಿಷಭ್ ಪಂತ್‌ರನ್ನು ಸ್ಟೇಡಿಯಂನಲ್ಲಿ ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದರು. ಹೀಗಿರುವಾಗಲೇ ರಿಷಭ್ ಪಂತ್‌ ಅಭಿಮಾನಿಗಳಿಗೆ ಸರ್‌ಪ್ರೈಸ್ ಕೊಟ್ಟಿದ್ದಾರೆ. ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಗುಜರಾತ್ ಟೈಟಾನ್ಸ್ ನಡುವಣ ಪಂದ್ಯದ ವೇಳೆ ರಿಷಭ್ ಪಂತ್ ಕಾಣಿಸಿಕೊಂಡಿದ್ದಾರೆ.

ಇದನ್ನೂ ಓದಿ:  ರಿಷಬ್ ಪಂತ್ ರೀ ಎಂಟ್ರಿ ಯಾವಾಗ ?- ಸೌರವ್ ಗಂಗೂಲಿ ಉತ್ತರ ಕೇಳಿ ಫ್ಯಾನ್ಸ್ ಶಾಕ್..!

ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದ ವೇಳೆ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಡಗೌಟ್‌ನಲ್ಲಿ ರಿಷಭ್ ಪಂತ್ ಅವರ ಜೆರ್ಸಿ ಪ್ರದರ್ಶಿಸಿತ್ತು. ರಿಷಭ್ ಪಂತ್ ಜೆರ್ಸಿ ನೋಡಿ ಅಭಿಮಾನಿಗಳು ಭಾವುಕರಾಗಿದ್ದರು. ಇದಾದ ಸ್ವಲ್ಪ ಸಮಯದಲ್ಲೇ ರಿಷಭ್ ಪಂತ್ ಖುದ್ದಾಗಿ ಸ್ಟೇಡಿಯಂಗೆ ಆಗಮಿಸಿದ್ದು ನೋಡಿ ಅಭಿಮಾನಿಗಳು ಭಾವುಕರಾದರು. ಹರ್ಷೋಧ್ಘಾರ ಮಾಡಿದರು. ಡಿಸೆಂಬರ್‌ನಲ್ಲಿ ನಡೆದ ಕಾರು ಅಪಘಾತದ ಬಳಿಕ ರಿಷಭ್ ಪಂತ್‌ ಸಾರ್ವಜನಿಕವಾಗಿ ಎಲ್ಲಿಯೂ ಕಾಣಿಸಿಕೊಂಡಿರಲಿಲ್ಲ. ಇದೇ ಮೊದಲ ಬಾರಿಗೆ ತಮ್ಮ ತಂಡ ಡೆಲ್ಲಿ ಕ್ಯಾಪಿಟಲ್ಸ್ ಅನ್ನು ಬೆಂಬಲಿಸಲು ಸ್ಟೇಡಿಯಂಗೆ ಆಗಮಿಸಿದ್ದರು. ಗಾಯದಿಂದ ರಿಷಭ್ ಪಂತ್ ಬಹುತೇಕ ಚೇತರಿಸಿಕೊಂಡಿದ್ದು, ನಡೆಯಲು ಊರುಗೋಲನ್ನು ಅವಲಂಭಿಸುತ್ತಿದ್ದಾರೆ. ಕ್ರೀಡಾಂಗಣಕ್ಕೂ ಊರುಗೋಲಿನ ಸಹಾಯದೊಂದಿಗೆ ಆಗಮಿಸಿದ್ದ ಪಂತ್ ಅವರನ್ನು ಅಭಿಮಾನಿಗಳು, ಕ್ರಿಕೆಟಿಗರು ಸಂತಸದಲ್ಲೇ ಸ್ವಾಗತಿಸಿದರು. ಇದೇ ವೇಳೆ ಅಭಿಮಾನಿಗಳತ್ತ ರಿಷಭ್ ಪಂತ್ ಕೈ ಬೀಸಿ ಸಂತಸ ವ್ಯಕ್ತಪಡಿಸಿದರು. ಇನ್ನು ಪಂತ್ ಅವರೊಂದಿಗೆ ಸ್ಟೇಡಿಯಂನಲ್ಲಿ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಕೂಡ ಕಾಣಿಕೊಂಡಿದ್ದರು.

ಡೆಲ್ಲಿ ಕ್ಯಾಪಿಟಲ್ಸ್ ತಂಡದ ಮಾಜಿ ನಾಯಕರಾಗಿರುವ ರಿಷಭ್ ಪಂತ್ ಐಪಿಎಲ್‌ನಲ್ಲಿ 98 ಪಂದ್ಯಗಳಿಂದ ಒಟ್ಟು 2838 ರನ್ ಗಳಿಸಿದ್ದಾರೆ.

ಕಳೆದ ವರ್ಷ ನಡೆದ ರಸ್ತೆ ಅಪಘಾತದಲ್ಲಿ ರಿಷಭ್ ಪಂತ್ ಗಾಯಗೊಂಡಿದ್ದರು. ಡಿಸೆಂಬರ್ 30 ರಂದು ದೆಹಲಿಯಿಂದ ಉತ್ತರ ಖಂಡದ ಹರಿದ್ವಾರದಲ್ಲಿರುವ ರೂರ್ಕಿಯಲ್ಲಿರುವ ತನ್ನ ಮನೆಗೆ ತೆರಳುವಾಗ ಭೀಕರ ಅಪಘಾತ ಸಂಭವಿಸಿತ್ತು. ಬಳಿಕ ಅವರನ್ನು ಡೆಹ್ರಾಡೂನ್‌ನ ಮ್ಯಾಕ್ಸ್ ಆಸ್ಪತ್ರೆಗೆ ಸೇರಿಸಲಾಗಿತ್ತು. ಕೆಲ ದಿನಗಳ ಚಿಕಿತ್ಸೆಯ ಬಳಿಕ ಪಂತ್ ಅವರನ್ನು ಡೆಹ್ರಾಡೂನ್‌ನಿಂದ ಮುಂಬೈಗೆ ಶಿಫ್ಟ್ ಮಾಡಲಾಗಿತ್ತು. ಇದೀಗ ರಿಷಭ್ ಪಂತ್ ಚೇತರಿಸಿಕೊಳ್ಳುತ್ತಿದ್ದಾರೆ.

suddiyaana