ಕಟೀಲು ದುರ್ಗಾಪರಮೇಶ್ವರಿ ಸನ್ನಿಧಿಯಲ್ಲಿ ‘ಡಿವೈನ್ ಸ್ಟಾರ್’ ಪೂಜೆ

ಕಟೀಲು ದುರ್ಗಾಪರಮೇಶ್ವರಿ ಸನ್ನಿಧಿಯಲ್ಲಿ ‘ಡಿವೈನ್ ಸ್ಟಾರ್’ ಪೂಜೆ

ಮಂಗಳೂರು: ಕನ್ನಡದ ಸೂಪರ್ ಹಿಟ್ ಚಿತ್ರ ‘ಕಾಂತಾರ’ದ ಯಶಸ್ಸಿನ ನಂತರ ನಟ ರಿಷಬ್ ಶೆಟ್ಟಿ ಧರ್ಮಸ್ಥಳದ ಮಂಜುನಾಥನ ದರ್ಶನ ಪಡೆದಿದ್ದರು. ಇದಾದ ನಂತರ ಡಿಸೆಂಬರ್ 8ರಂದು ರಿಷಬ್ ಶೆಟ್ಟಿ ಮತ್ತು ಪ್ರಗತಿ ಶೆಟ್ಟಿ ದಂಪತಿ ಕಟೀಲು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.

ಇದನ್ನೂ ಓದಿ :   ಕನ್ನಡಕ್ಕೆ ಬಂದ ದಿಗ್ಗಜ ನಟ ಕಬೀರ್ ಬೇಡಿ – ‘ಕರಿ ಹೈದ ಕರಿ ಅಜ್ಜ’ ಸಿನಿಮಾದ ಪಾತ್ರ ರಿವೀಲ್

ಕಾಂತಾರ ಚಿತ್ರದ ಸಕ್ಸಸ್ ನಂತರ ರಿಷಬ್ ಶೆಟ್ಟಿ ಇದೇ ಮೊದಲ ಬಾರಿಗೆ ಕಟೀಲು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ರಿಷಬ್ ಶೆಟ್ಟಿ ಮತ್ತು ಪ್ರಗತಿ ಶೆಟ್ಟಿ ದಂಪತಿ ದೇಗುಲಕ್ಕೆ ಬಂದು, ವಿಶೇಷ ಪೂಜೆ ಸಲ್ಲಿಸಿದ್ದಾರೆ. ದೇವಳದ ವತಿಯಿಂದ ರಿಷಬ್ ಶೆಟ್ಟಿಯವರನ್ನು  ಆತ್ಮೀಯವಾಗಿ ಬರಮಾಡಿಕೊಳ್ಳಲಾಯ್ತು. ದೇವರ ಶೇಷ ವಸ್ತ್ರ, ಪ್ರಸಾದ ನೀಡಿ ಆಡಳಿತ ಮಂಡಳಿ ಗೌರವ ನೀಡಿದರು. ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಹೊರಬಂದ ಬಳಿಕ ರಿಷಬ್ ಶೆಟ್ಟಿ ಜೊತೆ ದೇವಸ್ಥಾನದ ಮುಂಭಾಗ ಸೆಲ್ಪಿ ಕ್ಲಿಕ್ಕಿಸಲು ಅಭಿಮಾನಿಗಳು ಮುಗಿಬಿದ್ದರು. ಕಾಂತಾರ ಚಿತ್ರದ ಯಶಸ್ಸಿನ ನಂತರ ರಿಷಬ್ ಶೆಟ್ಟಿ ಆನೆಗುಡ್ಡೆ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದರು.

suddiyaana