ಸುಳ್ಯದಲ್ಲಿ ಬಿಜೆಪಿ ಅಭ್ಯರ್ಥಿಯ ಗೆಲುವೊಂದೇ ಮುಂದಿನ ಗುರಿ – ಎಸ್. ಅಂಗಾರ ಯೂ-ಟರ್ನ್..!

ಸುಳ್ಯದಲ್ಲಿ ಬಿಜೆಪಿ ಅಭ್ಯರ್ಥಿಯ ಗೆಲುವೊಂದೇ ಮುಂದಿನ ಗುರಿ – ಎಸ್. ಅಂಗಾರ ಯೂ-ಟರ್ನ್..!

ಮಾಜಿ ಶಾಸಕ ಎಸ್. ಅಂಗಾರ, ದಿಢೀರ್ ಅಂತಾ ತಮ್ಮ ಹೇಳಿಕೆಯನ್ನು ವಾಪಸ್ ಪಡೆದಿದ್ದಾರೆ. ನಾನು ರಾಜಕೀಯ ನಿವೃತ್ತಿ ಪಡೆದಿದ್ದೇನೆ. ಬಿಜೆಪಿಯಿಂದ ಕಣಕ್ಕಿಳಿದಿರುವ ಭಾಗೀರಥಿ ಮುರುಳ್ಯ ಪರ ಪ್ರಚಾರಕ್ಕೂ ಹೋಗಲ್ಲ ಅಂತಾ ಹೇಳಿಕೆ ನೀಡಿದ್ದರು. ಆದರೆ, ಈಗ ಯಾಕೋ ಅಂಗಾರ ಮತ್ತೆ ಯೂ-ಟರ್ನ್ ಹೊಡೆದಿದ್ದಾರೆ. ಭಾಗೀರಥಿ ಮುರುಳ್ಯ ಅವರ ಗೆಲುವೊಂದೇ ನಮ್ಮ ಮುಂದಿನ ನಡೆ ಎಂದಿದ್ದಾರೆ.

ಇದನ್ನೂ ಓದಿ: ಅಂಗಾರ ರಾಜಕೀಯ ನಿವೃತ್ತಿ.. ರಘುಪತಿ ಭಟ್ ಕಣ್ಣೀರು – ಬಿಜೆಪಿ ಟಿಕೆಟ್ ಕೈ ತಪ್ಪಿದ ಬೆನ್ನಲ್ಲೇ ಭಿನ್ನಮತ!

ದಕ್ಷಿಣಕನ್ನಡ ಜಿಲ್ಲೆಯ ಸುಳ್ಯದ ಶಾಸಕ ಎಸ್. ಅಂಗಾರ, ಈ ಬಾರಿ ಕೂಡಾ ಚುನಾವಣೆಗೆ ಸ್ಪರ್ಧಿಸಲು ತಯಾರಿ ನಡೆಸಿದ್ದರು. ಆದರೆ, ಟಿಕೆಟ್ ಕೈ ತಪ್ಪಿದ್ದರಿಂದ ಅಸಮಾಧಾನಗೊಂಡಿರುವ ಅಂಗಾರ, ರಾಜಕೀಯ ನಿವೃತ್ತಿ ಘೋಷಣೆ ಮಾಡಿದ್ದರು. ಪ್ರಸ್ತುತ ಬಿಜೆಪಿ ಅಭ್ಯರ್ಥಿಯಾಗಿ ಭಾಗೀರಥಿ ಮುರುಳ್ಯ ಆಯ್ಕೆಯಾಗಿದ್ದು, ಇವರ ಪರವಾಗಿ ಪ್ರಚಾರ ನಡೆಸಲ್ಲ ಎಂದು ಹೇಳಿದ್ದರು. ಪ್ರಾಮಾಣಿಕತೆಗೆ ಬೆಲೆ ಇಲ್ಲ, ನಾನು ಏಕೆ ಬಿಜೆಪಿಗೆ ಕೆಲಸ ಮಾಡಬೇಕು, ರಾಜಕೀಯ ನಿವೃತ್ತಿ ಪಡೆಯುತ್ತಿದ್ದೇನೆ ಎಂದು ಎಸ್, ಅಂಗಾರ ಹೇಳಿದ್ದರು. ಎಸ್. ಅಂಗಾರ ವಿರುದ್ಧ ಬಿಜೆಪಿ ಕಾರ್ಯಕರ್ತರ ಆಕ್ರೋಶದ ಬೆನ್ನಲ್ಲೇ ಈ ನಿರ್ಧಾರವನ್ನು ಹಿಂಪಡೆದಿದ್ದಾರೆ. ಸಕ್ರಿಯ ರಾಜಕಾರಣಕ್ಕೆ ನಿವೃತ್ತಿ ಹೇಳಿಕೆ ನೋವಿನಿಂದ ಹೇಳಿದ್ದೇನೆ. ನಾನು ಮೊದಲಿನಂತೆ ಸಕ್ರಿಯವಾಗಿದ್ದು, ಭಾಗೀರಥಿ ಮುರುಳ್ಯ ಅವರ ಗೆಲುವೊಂದೇ ನಮ್ಮ ಮುಂದಿನ ನಡೆ. ವೈಯಕ್ತಿಕವಾಗಿ ನೀಡಿದ ಹೇಳಿಕೆಯನ್ನು ಹಿಂದಕ್ಕೆ ಪಡೆಯುತ್ತಿದ್ದೇನೆ. ಆಯ್ಕೆ ಮಾಡಿದ ಅಭ್ಯರ್ಥಿ ಬಗ್ಗೆ ಬೇಸರ ಇಲ್ಲ, ಅವರ ಪರ ಕೆಲಸ ಮಾಡೋದು ನನ್ನ ಹೊಣೆಗಾರಿಕೆ. ನನ್ನ ಕಾರ್ಯಕರ್ತರು ಜೊತೆ ನಿಂತಿದ್ದಕ್ಕೆ ಧನ್ಯವಾದಗಳು ಎಂದು ಅಂಗಾರ ಹೇಳಿದ್ದಾರೆ.

suddiyaana