ಗೆಲುವಿನ ಸಂಭ್ರಮದಲ್ಲಿದ್ದ ಸಿದ್ದರಾಮಯ್ಯುಗೆ ಕಹಿ ಸುದ್ದಿ – ಬಾವ ರಾಮೇಗೌಡ ನಿಧನ

ಗೆಲುವಿನ ಸಂಭ್ರಮದಲ್ಲಿದ್ದ ಸಿದ್ದರಾಮಯ್ಯುಗೆ ಕಹಿ ಸುದ್ದಿ – ಬಾವ ರಾಮೇಗೌಡ ನಿಧನ

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವರುಣಾ ಕ್ಷೇತ್ರದಲ್ಲಿ ಗೆದ್ದು ಬೀಗಿದ್ದಾರೆ. ಗೆಲುವಿನ ಸಂಭ್ರಮದಲ್ಲಿದ್ದ ಸಿದ್ಧರಾಮಯ್ಯಗೆ ಕಹಿ ಸುದ್ದಿಯೊಂದು ಸಿಕ್ಕಿದೆ.

ಸಿದ್ದರಾಮಯ್ಯ ಅವರ ಸ್ವಂತ ಸಹೋದರಿ ಶಿವಮ್ಮ ಅವರ ಪತಿ ರಾಮೇಗೌಡ (69) ಶನಿವಾರ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ರಾಮೇಗೌಡ ಅವರನ್ನು ಬೆಳಿಗ್ಗೆ ಜೆಎಸ್‌ಎಸ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಅವರು ಸಾವನ್ನಪ್ಪಿದ್ದಾರೆ. ಮೃತರಿಗೆ ಪತ್ನಿ, ಮೂವರು ಹೆಣ್ಣು ಓರ್ವ ಪುತ್ರ ಇದ್ದಾರೆ. ಶನಿವಾರ ಮಧ್ಯಾಹ್ನ ಹುಟ್ಟೂರಲ್ಲಿ ಅಂತ್ಯಕ್ರಿಯೆ ನಡೆಯಲಿದೆ

suddiyaana