ಶಾಂತಿ, ನೆಮ್ಮದಿ ಹುಡುಕುತ್ತಾ ಹೊರಟ ಸಮಂತಾ – ಶಿವನ ಧ್ಯಾನದಲ್ಲಿ ಮುಳುಗಿದ ಸೌತ್ ಸಿನಿ ಬ್ಯೂಟಿ!

ಶಾಂತಿ, ನೆಮ್ಮದಿ ಹುಡುಕುತ್ತಾ ಹೊರಟ ಸಮಂತಾ – ಶಿವನ ಧ್ಯಾನದಲ್ಲಿ ಮುಳುಗಿದ ಸೌತ್ ಸಿನಿ ಬ್ಯೂಟಿ!

ಸೌತ್ ಸಿನಿ ದುನಿಯಾದ ಮೋಸ್ಟ್ ಬ್ಯೂಟಿಫುಲ್ ನಟಿ ಸಮಂತಾ ರುತ್​ ಪ್ರಭು ಒಂದಿಲ್ಲೊಂದು ಕಾರಣಕ್ಕೆ ಸುದ್ದಿಯಾಗುತ್ತಿದ್ದಾರೆ. ಸಮಂತ ಮಯೋಸೈಟೀಸ್ ಕಾಯಿಲೆಯಿಂದ ಬಳಲುತ್ತಿದ್ದು, ಈ ಹಿಂದೆ ಹಲವು ತಿಂಗಳುಗಳ ಕಾಲ ಚಿಕಿತ್ಸೆ ಪಡೆದು ಚೇತರಿಸಿಕೊಂಡು ಸಿನಿಮಾ ರಂಗಕ್ಕೆ ಎಂಟ್ರಿಕೊಟ್ಟಿದ್ದರು. ಸಮಂತಾಗೆ ಮತ್ತೆ ಈ ಕಾಯಿಲೆ ಮರುಕಳಿಸಿದೆ, ಆಕೆ ಚಿಕಿತ್ಸೆಗಾಗಿ ಅಮೆರಿಕಗೆ ಹೋಗುತ್ತಿದ್ದಾರೆ ಅಂತಾ ಕೆಲ ದಿನಗಳ ಹಿಂದೆ ಸುದ್ದಿಯಾಗಿತ್ತು. ಆದರೆ ಇದೀಗ ಸಮಂತಾ ಅವರು ಧ್ಯಾನ ಮಾಡಿ ದಿನ ಕಳೆಯುತ್ತಿರುವ ಫೋಟೋಗಳನ್ನು ಶೇರ್‌ ಮಾಡಿದ್ದಾರೆ.

ನಟಿ ಸಮಂತಾ ಆರೋಗ್ಯದ ಕಡೆ ಗಮನ ಕೊಡೋದಕ್ಕಾಗಿಯೇ ವೃತ್ತಿ ಜೀವನಕ್ಕೆ ಒಂದು ವರ್ಷ ಬ್ರೇಕ್ ಕೊಟ್ಟಿದ್ದಾರೆ. ಹಾಗಾಗಿ ಒಪ್ಪಿಕೊಂಡಿರುವ ಸಿನಿಮಾ, ವೆಬ್ ಸೀರಿಸ್ ಎಲ್ಲಾ ಮುಗಿಸಿಕೊಟ್ಟಿದ್ದಾರೆ.  ಇದೀಗ ಸಮಂತಾ ಅವರು ಇಶಾ ಫೌಂಡೇಶನ್ ಆದಿಯೋಗಿಗೆ ಭೇಟಿ ನೀಡಿದ್ದಾರೆ. ಅಲ್ಲಿ ಧ್ಯಾನ ಮಾಡಿ ದಿನ ಕಳೆಯುತ್ತಿದ್ದಾರೆ. ಇದರ ಫೋಟೋಗಳನ್ನ ಸ್ವತಃ ಆಕೆಯೇ ತನ್ನ ಸೋಶಿಯಲ್‌ ಮೀಡಿಯಾದಲ್ಲಿ ಶೇರ್ ಮಾಡಿದ್ದಾರೆ.

ಇದನ್ನೂ ಓದಿ: ‘ನನ್ನ ಬಯಸುವಂತಹ ಪ್ರೀತಿ’ ಎಂದು ಸಮಂತಾ ಜೊತೆ ಬೆಡ್ರೂಮ್ ಫೋಟೋ ಹಂಚಿಕೊಂಡ ಖ್ಯಾತ ನಟ..!

ಸದ್ಗುರುವಿನ ಅನುಯಾಯಿ ಆಗಿರುವ ಸಮಂತಾ, ಕೊಯಮತ್ತೂರಿನಲ್ಲಿ ಸದ್ಗುರು ಸ್ಥಾಪಿಸಿರುವ ಇಶಾ ಸೆಂಟರ್ ಸೇರಿಕೊಂಡಿದ್ದು ಅಲ್ಲಿ, ಸದ್ಗುರುವಿನ ಮಾರ್ಗದರ್ಶನದಲ್ಲಿ ಧ್ಯಾನ, ಪೂಜೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಜೊತೆಗೆ ಸುಂದರವಾದ ಪ್ರಕೃತಿಯನ್ನು ಎಂಜಾಯ್ ಮಾಡುತ್ತಿದ್ದಾರೆ.

ಇತರ ಭಕ್ತಾಧಿಗಳ ಜೊತೆಗೆ ನೆಲಹಾಸಿನ ಮೇಲೆ ಕುಳಿತು ಧ್ಯಾನ ಮಾಡುತ್ತಿರುವ ತಮ್ಮ ಚಿತ್ರವನ್ನು ಸಮಂತಾ ಹಂಚಿಕೊಂಡಿದ್ದಾರೆ. ಕೆಲವು ಹೊತ್ತಿಗೆ ಮುಂಚೆ ಏನಾದರೂ ತಿರುವುತ್ತಾ, ಮುರಿಯುತ್ತಾ, ಮೈಯಿ ಕೆರೆಯುತ್ತಾ, ಯೋಚನೆಗಳ ಪ್ರವಾಹಗಳಲ್ಲಿ ಇರುತ್ತಿದ್ದೆ. ಇವುಗಳನ್ನು ಮಾಡದೆ ಸುಮ್ಮನೆ ಕೂರುವುದು ಅಸಾಧ್ಯ ಎಂಬ ಪರಿಸ್ಥಿತಿಯಲ್ಲಿದ್ದೆ. ಆದರೆ ಇಂದು ಸತತವಾಗಿ ಧ್ಯಾನಮಗ್ನಳಾಗಿದ್ದೆ. ಧ್ಯಾನ ನನ್ನ ಶಕ್ತಿ ಎಂದು ಅರಿತುಕೊಂಡೆ. ಧ್ಯಾನ ನನ್ನ ಸಂವಹನ, ನನಗೆ ಸ್ಪಷ್ಟನೆಯನ್ನು ನೀಡುತ್ತದೆ ಎಂದು ಅರಿತುಕೊಂಡೆ. ಇಷ್ಟು ಸರಳವಾದ ಕಾರ್ಯವೊಂದರಲ್ಲಿ ಇಷ್ಟು ಶಕ್ತಿ ಅಡಗಿರುತ್ತದೆ ಎಂದು ತಿಳಿದಿರಲಿಲ್ಲ ಎಂದು ಸಮಂತಾ ಬರೆದುಕೊಂಡಿದ್ದಾರೆ.

ಸಮಂತಾ ಅವರು ಸಿಟಾಡೆಲ್, ವಿಜಯ್ ದೇವರಕೊಂಡ ಜೊತೆಗಿನ ‘ಖುಷಿ’ ಸಿನಿಮಾವನ್ನು ಮುಗಿಸಿಕೊಟ್ಟಿದ್ದಾರೆ. ಎರಡು ಪ್ರಾಜೆಕ್ಟ್‌ನಲ್ಲೂ ಭಿನ್ನವಾಗಿ ಕಾಣಿಸಿಕೊಂಡಿದ್ದಾರೆ. ನಾಗಚೈತನ್ಯ ಜೊತೆಗಿನ ಡಿವೋರ್ಸ್, ಅನಾರೋಗ್ಯದ ಸಮಸ್ಯೆ ಇರೋದ್ರಿಂದ ಇದೆಲ್ಲದರಿಂದ ಅವರಿಗೆ ಬಿಡುವು ಬೇಕಾಗಿದೆ. ಆರೋಗ್ಯ ಮತ್ತು ಮನಸ್ಸಿಗೆ ರಿಲಾಕ್ಸೇಷನ್ ಬೇಕಾಗಿದೆ. ಹಾಗಾಗಿ ಸದ್ಗುರು ಸಂಘಕ್ಕೆ ಸಮಂತಾ ಸೇರಿದ್ದಾರೆ.

suddiyaana