ಚಿತ್ರರಂಗಕ್ಕೆ ಗುಡ್ ಬೈ ಹೇಳ್ತಾರಾ ಸಮಂತಾ? – ನಿರ್ಮಾಪಕರಿಗೆ ಅಡ್ವಾನ್ಸ್ ಹಣ ವಾಪಸ್ ಮಾಡಿದ್ಯಾಕೆ?

ಚಿತ್ರರಂಗಕ್ಕೆ ಗುಡ್ ಬೈ ಹೇಳ್ತಾರಾ ಸಮಂತಾ? – ನಿರ್ಮಾಪಕರಿಗೆ ಅಡ್ವಾನ್ಸ್ ಹಣ ವಾಪಸ್ ಮಾಡಿದ್ಯಾಕೆ?

ಬಹುಭಾಷಾ ನಟಿ ಸಮಂತಾ ಅಭಿಮಾನಿಗಳಿಗೆ ಬೇಸರದ ಸುದ್ದಿಯೊಂದಿದೆ. ನಟಿ ಸಮಂತಾ ಅವರು ಚಿತ್ರರಂಗದೊಂದಿಗೆ ಕೆಲಕಾಲದಿಂದ ದೂರ ಉಳಿಯುವ ಆಲೋಚನೆ ಮಾಡಿದ್ದಾರಂತೆ. ಕೈಯಲ್ಲಿರುವ ಕೆಲ ಪ್ರಾಜೆಕ್ಟ್‌ಗಳನ್ನು ಬೇಗ ಮುಗಿಸಿಕೊಂಡಿದ್ದಾರೆ. ಅಷ್ಟೇ ಅಲ್ಲದೇ ಈಗಾಗಲೇ ಒಪ್ಪಿಕೊಂಡಿದ್ದ ಕೆಲವು ಪ್ರಾಜೆಕ್ಟ್ ಗಳ ನಿರ್ಮಾಪಕರಿಗೆ ಅಡ್ವಾನ್ಸ್‌  ಹಣ ವಾಪಸ್ಸು ಮಾಡಿದ್ದಾರಂತೆ.

ಇದನ್ನೂ ಓದಿ: ನಟಿ ಆಲಿಯಾ ಭಟ್ ‘ಬ್ಲೌಸ್’ ಹಾಕಿಲ್ವಾ ? –ಈ ‘ಅಶ್ಲೀಲ’ ಫೋಟೋದ ಅಸಲಿ ವಿಚಾರ ಏನು ಗೊತ್ತಾ?

ನಟಿ ಸಮಂತಾ ಅವರು ಆಟೋಇಮ್ಯೂನ್ ಎನ್ನುವ ಅಪರೂಪದ ಕಾಯಿಲೆಯಿಂದ ಬಳಲುತ್ತಿದ್ದಾರೆ. ಕಳೆದ ಒಂದು ವರ್ಷದಿಂದ ಈ ಕಾಯಿಲೆಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಿಕಿತ್ಸೆ ಪಡೆಯುವಾಗಲೂ ಅವರು ಚಿತ್ರರಂಗದಿಂದ ದೂರವಿದ್ದರು. ಚೇತರಿಸಿಕೊಂಡ ಬಳಿಕ ಸಮಂತಾ ಕೆಲ ಸಿನಿಮಾಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಸದ್ಯ ವಿಜಯ್ ದೇವರಕೊಂಡ ಜೊತೆ ʼಖುಷಿʼ ಸಿನಿಮಾದಲ್ಲಿ ಸಮಂತಾ ನಟಿಸುತ್ತಿದ್ದಾರೆ. ಈ ಸಿನಿಮಾದ ಶೂಟಿಂಗ್ ನಾಲ್ಕೈದು ದಿನಗಳ ಬಾಕಿಯಷ್ಟೇ ಇದೆ. ಅಲ್ಲದೇ, ಸಿಟಾಡೆಲ್ ಪ್ರಾಜೆಕ್ಟ್ ಅನ್ನೂ ಬಹುತೇಕ ಮುಗಿಸಿದ್ದಾರಂತೆ ಸಮಂತಾ. ಇದೀಗ ಸಮಂತಾ ಅವರು ಚಿತ್ರರಂಗದಿಂದ ಸುಮಾರು ಒಂದು ವರ್ಷಗಳ ಕಾಲ ಚಿತ್ರರಂಗದಿಂದ ದೂರ ಇರುವ ಪ್ಲ್ಯಾನ್ ಮಾಡಿದ್ದಾರೆ. ಹೀಗಾಗಿ ಮೊದಲೇ ಒಪ್ಪಿಕೊಂಡಿದ್ದ ಕೆಲವು ಪ್ರಾಜೆಕ್ಟ್ ಗಳ ನಿರ್ಮಾಪಕರಿಗೆ ಹಣ ವಾಪಸ್ಸು ಮಾಡಿದ್ದಾರೆ ಎನ್ನುವ ಮಾಹಿತಿ ಹರಿದಾಡುತ್ತಿದೆ.

ಸಮಂತಾ ಅವರು ಅನಾರೋಗ್ಯದ ಹಿನ್ನೆಲೆ ಇಂತಹ ಕಠಿಣ ನಿರ್ಧಾರ ತೆಗೆದುಕೊಳ್ಳಲು ಕಾರಣ ಎಂದು ಹೇಳಲಾಗುತ್ತಿದೆ. ಆಟೋಇಮ್ಯೂನ್  ಕಾಯಿಲೆಗೆ ಈಗ ಹೆಚ್ಚುವರಿಯಾಗಿ ಮತ್ತೆ ಅವರು ಚಿಕಿತ್ಸೆ ಪಡೆದುಕೊಳ್ಳಲಿದ್ದಾರಂತೆ. ಈ ಕಾಯಿಲೆಗೆ ಹೆಚ್ಚು ವಿಶ್ರಾಂತಿ ಅಗತ್ಯವಿದೆ ಎಂದು ವೈದ್ಯರು ಸೂಚಿಸಿರುವ ಹಿನ್ನೆಲೆಯಲ್ಲಿ ಒಂದು ವರ್ಷಗಳ ಕಾಲ ಚಿತ್ರರಂಗದಿಂದ ದೂರವಿದ್ದು ಚಿಕಿತ್ಸೆ ಮತ್ತು ವಿಶ್ರಾಂತಿ ಪಡೆಯಲು ಸಮಂತಾ ಪ್ಲ್ಯಾನ್ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.

suddiyaana