ಅಭಿ ಕೊರಳಿಗೆ ಚಿನ್ನದ ಸರ ಹಾಕಿದ ಕಿಚ್ಚ ಸುದೀಪ್‌!

ಅಭಿ ಕೊರಳಿಗೆ ಚಿನ್ನದ ಸರ ಹಾಕಿದ ಕಿಚ್ಚ ಸುದೀಪ್‌!

ರೆಬೆಲ್ ಸ್ಟಾರ್ ಅಂಬರೀಶ್ ಮಗನ ಮದುವೆ ಅದ್ಧೂರಿಯಾಗಿ ಬೆಂಗಳೂರಿನಲ್ಲಿ ನೆರವೇರಿದೆ. ಬೆಂಗಳೂರಿನ ಮಾಣಿಕ್ಯ ಚಾಮರ ವಜ್ರದಲ್ಲಿ ಅಭಿಷೇಕ್ ಅಂಬರೀಶ್ ಹಾಗೂ ಅವಿವಾ ಮದುವೆ ಸಮಾರಂಭ ನಡೆದಿದ್ದು, ಅಂಬಿ ಪುತ್ರನ ಕಲ್ಯಾಣೋತ್ಸವಕ್ಕೆ ಚಿತ್ರರಂಗದ ಗಣ್ಯಾತಿಗಣ್ಯರು ಪಾಲ್ಗೊಂಡಿದ್ದಾರೆ. ಸ್ಯಾಂಡಲ್‌ ವುಡ್‌ ನಟ ಕಿಚ್ಚ ಸುದೀಪ್‌ ಅಂಬಿ ಪುತ್ರನ ಮದುವೆಗೆ ಆಗಮಿಸಿ ನವ ದಂಪತಿಗೆ ಶುಭಾಶಯ ಕೋರಿ, ಬೆಲೆಬಾಳುವ ಗಿಫ್ಟ್‌ ನೀಡಿದ್ದಾರೆ.

ಇದನ್ನೂ ಓದಿ: ಅಂಬಿ ಮಗನ ಮದುವೆ – ರಜಿನಿಕಾಂತ್, ಸುಹಾಸಿನಿ ಸೇರಿದಂತೆ ಗಣ್ಯರಿಂದ ಶುಭಾಶಯ

ಕಿಚ್ಚ ಸುದೀಪ್‌ ಕುಟುಂಬ ಸಮೇತ ಅಭಿಷೇಕ್‌ ಅಂಬರೀಶ್‌ ಅವರ ಮದುವೆಗೆ ಆಗಮಿಸಿದ್ದರು. ಪತ್ನಿ ಪ್ರಿಯಾ, ಪುತ್ರಿ ಶಾನ್ವಿ ಜೊತೆ ಆಗಮಿಸಿದ್ದ ಕಿಚ್ಚ ಅಂಬಿಮಾಮನ ಮಗನಿಗೆ ಚಿನ್ನದ ಸರವನ್ನು ಉಡುಗೊರೆಯಾಗಿ ನೀಡಿದ್ದಾರೆ. . ಚಿನ್ನದ ಸರವನ್ನು ಕಿಚ್ಚ ಸುದೀಪ್‌ ಅವರೇ ಅಭಿಷೇಕ್ ಕೊರಳಿಗೆ ಹಾಕಿ, ಹೊಸ ಜೀವನಕ್ಕೆ ಕಾಲಿಡುತ್ತಿರುವ ಅಭಿ ಮತ್ತು ಅವಿವಾಗೆ ಶುಭ ಹಾರೈಸಿದ್ದಾರೆ.

ಇನ್ನು ಅಭಿ – ಅವಿ ಮದುವೆಗೆ ಅನೇಕ ಗಣ್ಯರು ಆಗಮಿಸಿದ್ದಾರೆ. ನಟ ರಜನಿಕಾಂತ್, ತೆಲುಗು ನಟ ಚಿರಂಜೀವಿ, ನಟ ಯಶ್,  ಕ್ರಿಕೆಟಿಗ ಅನಿಲ್ ಕುಂಬ್ಳೆ, ಮಾಜಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ತಮಿಳು ನಟ ಮೋಹನ್ ಬಾಬು, ತೆಲುಗು ನಟ ನರೇಶ್, ನಟಿ ಪವಿತ್ರ ಲೋಕೇಶ್, ನಟಿ ಶುಭ್ರ ಅಯ್ಯಪ್ಪ, ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್ ಕುಮಾರ್, ಗಾಯಕ ವಿಜಯ್ ಪ್ರಕಾಶ್ ಸೇರಿದಂತೆ ಸಾಕಷ್ಟು ಕಲಾವಿದರು ಹಾಗೂ ತಂತ್ರಜ್ಞರು ಮದುವೆಯಲ್ಲಿ ಪಾಲ್ಗೊಂಡು ನವ ಜೋಡಿಗೆ ಶುಭಾಶಯ ಕೋರಿದ್ದಾರೆ.

ನಟ ಅಭಿಷೇಕ್ ಅಂಬರೀಶ್ ಹಾಗೂ ಅವಿವಾ ಬಿಡಪ್ಪ ಅವರ ವಿವಾಹ ಮಾಣಿಕ್ಯ-ಚಾಮರ ವಜ್ರದಲ್ಲಿ ಬೆಳಿಗ್ಗೆ ಕರ್ಕಾಟಕ ಲಗ್ನದಲ್ಲಿ (9:30-10:30) ನಡೆದಿದೆ. ಜೂನ್ 7ಕ್ಕೆ ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್‌ನ ತ್ರಿಪುರ ವಾಸಿನಿಯಲ್ಲಿ ಅದ್ದೂರಿಯಾಗಿ ಆರತಕ್ಷತೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಜೂನ್ 16ರಂದು ಮಂಡ್ಯದಲ್ಲಿ ಬೀಗರ ಊಟ ನಡೆಯಲಿದೆ. ಅಂದಾಜು 1 ಲಕ್ಷ ಜನರು ಇದರಲ್ಲಿ ಭಾಗಿ ಆಗುವ ನಿರೀಕ್ಷೆ ಇದೆ. ಈ ಕಾರ್ಯಕ್ರಮದಲ್ಲಿ ಚಿತ್ರರಂಗ- ರಾಜಕೀಯ ರಂಗದ ಗಣ್ಯರು ಭಾಗಿಯಾಗಲಿದ್ದಾರೆ.

suddiyaana