‘ಜವಾನ್’ರಿಲೀಸ್‌ಗೂ ಮುನ್ನವೇ ಶಾರುಖ್‌ ಖಾನ್ ಟೆಂಪಲ್‌ ರನ್ ಶುರು – ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಬಾಲಿವುಡ್‌ ನಟ

‘ಜವಾನ್’ರಿಲೀಸ್‌ಗೂ ಮುನ್ನವೇ ಶಾರುಖ್‌ ಖಾನ್ ಟೆಂಪಲ್‌ ರನ್ ಶುರು – ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಬಾಲಿವುಡ್‌ ನಟ

ಬಾಲಿವುಡ್‌ ನಟ ಶಾರುಖ್‌ ಖಾನ್‌ ಅವರು ಹಿಂದೂ ಧರ್ಮದ ಬಗ್ಗೆ, ಹಿಂದೂ ದೇವರ ಬಗ್ಗೆ ನಂಬಿಕೆ ಹೊಂದಿದ್ದಾರೆ. ‘ಪಠಾಣ್’ ಸಿನಿಮಾ ರಿಲೀಸ್ ಸಂದರ್ಭದಲ್ಲಿ ಅವರು ಹಲವು ದೇವಾಲಯಗಳಿಗೆ ಭೇಟಿ, ದೇವರ ದರ್ಶನ ಪಡೆದಿದ್ದರು. ಈಗ ‘ಜವಾನ್’ ರಿಲೀಸ್ ಗೂ ಮುನ್ನ ಟೆಂಪಲ್‌ ರನ್‌ ಶುರುಮಾಡಿದ್ದಾರೆ. ಮಂಗಳವಾರ ಶಾರುಖ್‌ ಖಾನ್‌ ಅವರು ತಿರುಪತಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.

ಜವಾನ್ ಸಿನಿಮಾ ರಿಲೀಸ್​​ಗೆ ಕೌಂಟ್​ಡೌನ್​ ಶುರುವಾಗಿದೆ. ಇತ್ತ ಶಾರುಖ್ ಟೆಂಪಲ್ ರನ್ ಸಹ ಶುರು ಮಾಡಿದ್ದಾರೆ. ತಿರುಪತಿ ತಿರುಮಲಕ್ಕೆ ಮೊದಲ ಬಾರಿಗೆ ಆಗಮಿಸಿದ ಕಿಂಗ್ ಖಾನ್, ವೆಂಕಟೇಶ್ವರನ ದರ್ಶನ ಪಡೆದಿದ್ದಾರೆ. ಶಾರುಖ್‌ ಜೊತೆ ಅವರ ಮಗಳು ಸುಹಾನಾ ಖಾನ್ ಮತ್ತು ಜವಾನ್ ಸಿನಿಮಾ ಸಹನಟಿ ನಯನತಾರಾ, ನಿರ್ದೇಶಕ ವಿಘ್ನೇಶ್ ಶಿವನ್ ಕೂಡ ಶಾರುಖ್‌ ಜತೆ ಇದ್ದಾರೆ. ಈ ವಿಡಿಯೋಗಳು ಸೋಶಿಯಲ್​​ ಮೀಡಿಯಾದಲ್ಲಿ ಭಾರಿ ವೈರಲ್‌ ಆಗುತ್ತಿದೆ.

ಇದನ್ನೂ ಓದಿ: ‘ಜವಾನ್’ ಸಿನಿಮಾದಲ್ಲಿ ಟ್ರೈಲರ್ ರಿಲೀಸ್ – ಶಾರುಖ್ ಖಾನ್ ನಾನಾ ರೂಪ ನೋಡಿ ತಲೆಕೆಡಿಸಿಕೊಂಡ ಫ್ಯಾನ್ಸ್

ಶಾರುಖ್‌ ಖಾನ್‌ ಅವರು ತಿರುಪತಿ ತಿಮ್ಮಪ್ಪನ ದೇಗುಲಕ್ಕೆ ಭೇಟಿ ನೀಡುತ್ತಿರುವ ಸುದ್ದಿ ತಿಳಿಯುತ್ತಿದ್ದಂತೆ ಅನೇಕರು ವಿರೋಧ ವ್ಯಕ್ತಪಡಿಸಿದ್ದರು. ದೇವಸ್ಥಾನದ ಆಡಳಿತ ಮಂಡಳಿಯವರು ಇವರುಗಳನ್ನು ಏಕೆ ಸೇರಿಸಿಕೊಳ್ಳಬೇಕು? ಶಾರುಖ್ ಖಾನ್ ಅವರಿಗೆ ದೇವಸ್ಥಾನದ ಒಳಗೆ ಪ್ರವೇಶ ನೀಡಬಾರದು ಎಂದು ಅನೇಕರು ಆಗ್ರಹಿಸಿದ್ದರು. ಇದಕ್ಕೆ ತಲೆಕೆಡಿಸಿಕೊಳ್ಳದ ಶಾರುಖ್‌ ಖಾನ್‌ ಅವರು ತಿರುಪತಿ ತಿಮ್ಮಪ್ಪನ ದರ್ಶನ ಪಡೆದಿದ್ದಾರೆ.

ಬಾಲಿವುಡ್ ಸ್ಟಾರ್ ಹೀರೋ ಶಾರುಖ್ ಖಾನ್ ಶೀಘ್ರದಲ್ಲೇ ಜವಾನ್ ಚಿತ್ರದ ಮೂಲಕ ಪ್ರೇಕ್ಷಕರ ಮುಂದೆ ಬರಲಿದ್ದಾರೆ. ಈ ಚಿತ್ರ ಸೆಪ್ಟೆಂಬರ್ 1 ರಂದು ಭಾರತದಾದ್ಯಂತ  ಬಿಡುಗಡೆಯಾಗಲಿದ್ದು, ಇದರಲ್ಲಿ ನಯನತಾರಾ ನಾಯಕಿಯಾಗಿ, ವಿಜಯ್ ಸೇತುಪತಿ ವಿಲನ್ ಆಗಿ ನಟಿಸಿದ್ದಾರೆ. ಪ್ರಿಯಾಮಣಿ, ದೀಪಿಕಾ ಪಡುಕೋಣೆ..ಇನ್ನು ಕೆಲವು ತಾರೆಯರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

suddiyaana