‘ಹಿಂದೂಗಳ ರಕ್ಷಣೆಗೆ ಚೂರಿಗಳನ್ನು ಹರಿತ ಮಾಡಿಕೊಳ್ಳಿ’ – ಪ್ರಗ್ಯಾ ಸಿಂಗ್ ಠಾಕೂರ್

‘ಹಿಂದೂಗಳ ರಕ್ಷಣೆಗೆ ಚೂರಿಗಳನ್ನು ಹರಿತ ಮಾಡಿಕೊಳ್ಳಿ’ – ಪ್ರಗ್ಯಾ ಸಿಂಗ್ ಠಾಕೂರ್

ಶಿವಮೊಗ್ಗ: ಹಿಂದೂಗಳು ತಮ್ಮನ್ನು ತಾವು ರಕ್ಷಿಸಿಕೊಳ್ಳಲು ತಮ್ಮ ಮನೆಗಳಲ್ಲಿ ಆಯುಧಗಳನ್ನು ಹರಿತ ಮಾಡಿಟ್ಟುಕೊಳ್ಳಬೇಕು ಎಂದು ಭೋಪಾಲದ ಬಿಜೆಪಿ ಸಂಸದೆ ಪ್ರಗ್ಯಾ ಸಿಂಗ್ ಠಾಕೂರ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಶಿವಮೊಗ್ಗದಲ್ಲಿ ನಡೆದ ಹಿಂದೂ ಜಾಗರಣ ವೇದಿಕೆ ದಕ್ಷಿಣ ಪ್ರಾಂತ್ಯದ ತ್ರೈವಾರ್ಷಿಕ ಸಮ್ಮೇಳನದಲ್ಲಿ ದಿಕ್ಸೂಚಿ ಭಾಷಣ ಮಾಡಿದ್ದಾರೆ. ‘ಮುಂದೆ ಎಂತಹ ಸಂದರ್ಭ ಬರುತ್ತದೋ ಗೊತ್ತಿಲ್ಲ. ಆತ್ಮ ರಕ್ಷಣೆಗಾಗಿ ನಾವು ದಾಳಿ ಮಾಡಬೇಕಾಗುತ್ತದೆ. ನಮ್ಮ ಹೆಣ್ಣು ಮಕ್ಕಳ ರಕ್ಷಣೆಗಾಗಿ ತರಕಾರಿ ಕತ್ತರಿಸುವ ಚಾಕುಗಳನ್ನು ಇನ್ನಷ್ಟು ಹರಿತವಾಗಿಸಿ ಇಟ್ಟುಕೊಳ್ಳಬೇಕು ಎಂದು ಹೇಳಿದ್ದಾರೆ.

ಇದನ್ನೂ ಓದಿ:   ಗಡಿ ವಿವಾದ: ‘ಕರ್ನಾಟಕ ಆಕ್ರಮಿತ ಮಹಾರಾಷ್ಟ್ರವನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡಿ’ – ಉದ್ಧವ್ ಠಾಕ್ರೆ

ಹೆಣ್ಣು ಮಕ್ಕಳನ್ನು ನಡೆದಾಡುವ ಆಟಂ ಬಾಂಬ್ ಗಳಂತೆ ಸಿದ್ಧಪಡಿಸಬೇಕು. ನಮ್ಮ ಹೆಣ್ಣು ಮಕ್ಕಳನ್ನು ಲವ್ ಜಿಹಾದ್ ನಲ್ಲಿ ಬೀಳದಂತೆ ನೋಡಿಕೊಳ್ಳಬೇಕು. ಮಕ್ಕಳಿಗೆ ಗೀತೋಪದೇಶ, ರಾಮಾಯಣ, ಹನುಮಾನ್ ಚಾಲಿಸಾ ಕಲಿಸಬೇಕು. ದೇಶದ, ಸಮಾಜದ ರಕ್ಷಣೆಗೆ ನಾವೆಲ್ಲಾ ಸದಾ ಬದ್ಧರಾಗಬೇಕು ಎಂದರು.

ನಾನು ಇಂದು ನಾರಿಶಕ್ತಿಯಾಗಿ ಮಾತನಾಡುತ್ತಿದ್ದೇನೆ. ಸರ್ಕಾರಗಳ ಮೇಲೆ ನಂಬಿಕೆ ಇಡಬೇಡಿ. ಪ್ರತಿ 5 ವರ್ಷಕ್ಕೊಮ್ಮೆ ಸರ್ಕಾರ ಬರುತ್ತದೆ ಹೋಗುತ್ತದೆ. ಆದರೆ ಸಾಧು-ಸಂತರು ಬದಲಾಗುವುದಿಲ್ಲ. ಅವರನ್ನು ಕೊಲೆ ಮಾಡಲಾಗುವುದಿಲ್ಲ. ಏಕೆಂದರೆ ಅವರು ಸತ್ತ ಮೇಲೆ ಸಾಧುಗಳಾಗುತ್ತಾರೆ ಎಂದು ತಿಳಿಸಿದ್ದಾರೆ

suddiyaana