ಕಾಂಗ್ರೆಸ್ ಸರ್ಕಾರ ಬಂದ ದಿನವೇ 10 ಕೆಜಿ ಅಕ್ಕಿ ಕೊಡಲು ಆದೇಶ – ಸಿದ್ದರಾಮಯ್ಯ ಘೋಷಣೆ!

ಕಾಂಗ್ರೆಸ್ ಸರ್ಕಾರ ಬಂದ ದಿನವೇ 10 ಕೆಜಿ ಅಕ್ಕಿ ಕೊಡಲು ಆದೇಶ – ಸಿದ್ದರಾಮಯ್ಯ ಘೋಷಣೆ!

ಅನ್ನಭಾಗ್ಯ ಯೋಜನೆ ನಮ್ಮ ಸರ್ಕಾರದ ಯೋಜನೆ ಎಂದು ಪದೇಪದೆ ಹೇಳುವ ವಿಪಕ್ಷನಾಯಕ ಸಿದ್ದರಾಮಯ್ಯ ಇವತ್ತು ಕಲಬುರಗಿಯಲ್ಲಿ ಅದನ್ನೇ ಪುನರುಚ್ಚರಿಸಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ದಿನವೇ 10 ಕೆಜಿ ಅಕ್ಕಿ ಕೊಡಲು ಆದೇಶಿಸುತ್ತೇವೆ ಎಂದು ಘೋಷಣೆ ಮಾಡಿದ್ದಾರೆ.

ಇದನ್ನೂ ಓದಿ : 

ಕಲಬುರಗಿ ಜಿಲ್ಲೆಯ ಕಮಲಾಪುರ ಪಟ್ಟಣದಲ್ಲಿ ಆಯೋಜಿಸಿದ್ದ ಪ್ರಜಾಧ್ವನಿ ಸಮಾವೇಶ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಈ ಘೋಷಣೆ ಮಾಡಿದ್ದಾರೆ. ಬಿಜೆಪಿ ಸರ್ಕಾರ ಜನರ ರಕ್ತ ಕುಡಿಯಲು ಆರಂಭಿಸಿದೆ. ದೇಶದ ಇತಿಹಾಸದಲ್ಲಿ ಇಷ್ಟೊಂದು ಸುಳ್ಳು ಹೇಳಿದವರು ಯಾರೂ ಇಲ್ಲ. ಪ್ರಧಾನಿ ನರೇಂದ್ರ ಮೋದಿಯವರು ಅಷ್ಟೊಂದು ಸುಳ್ಳು ಹೇಳುತ್ತಿದ್ದಾರೆ. ಮೂಗಿಗೆ ತುಪ್ಪ ಹಚ್ಚುತ್ತಾರೆಂದು ಕೇಳಿದ್ದೆ. ಆದ್ರೆ ಇವರು ಹಣೆಗೆ ತುಪ್ಪ ಹಚ್ಚುತ್ತಿದ್ದಾರೆ ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಮತ್ತೊಂದೆಡೆ ವಿಪಕ್ಷ ನಾಯಕ ಸಿದ್ದರಾಮಯ್ಯ ಭಾಷಣ ಮಾಡುವಾಗಲೇ ಕರೆಂಟ್​ ಕೈಕೊಟ್ಟಿದೆ. ವಿದ್ಯುತ್​ ಇಲ್ಲದೆ ಭಾಷಣ ಮಾಡಲಾಗದೆ ಸಿದ್ದರಾಮಯ್ಯ ಪರದಾಡಿದ್ದಾರೆ. ಕೊನೆಗೆ ಜನರೇಟರ್ ಹಾಕಿಸಿಕೊಂಡು ಭಾಷಣ ಆರಂಭಿಸಿದ ಸಿದ್ದರಾಮಯ್ಯ, ನಾನು ಭಾಷಣ ಆರಂಭಿಸಿದಾಗಲೇ ಕರೆಂಟ್ ತೆಗೆಸಿದ್ದಾರೆ. ಬಿಜೆಪಿಯ ಮನೆಹಾಳರು ಕರೆಂಟ್​ ತೆಗೆಸಿದ್ದಾರೆ ಎಂದು ಕಿಡಿಕಾರಿದರು.

ಇದೇ ವೇಳೆ ಪ್ರಧಾನಿ ಮೋದಿಯವರ ಕರ್ನಾಟಕ ಭೇಟಿ ಬಗ್ಗೆಯೂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ. ಹಾಗೇ ಬಿಜೆಪಿ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ಟಾಂಗ್ ಕೊಟ್ಟಿದ್ದಾರೆ.

suddiyaana