ಸ್ಪಂದನಾ 5 ನೇ ದಿನದ ಕಾರ್ಯ – ಶ್ರೀರಂಗಪಟ್ಟಣದಲ್ಲಿ ಅಸ್ಥಿ ವಿಸರ್ಜನೆ

ಸ್ಪಂದನಾ 5 ನೇ ದಿನದ ಕಾರ್ಯ – ಶ್ರೀರಂಗಪಟ್ಟಣದಲ್ಲಿ ಅಸ್ಥಿ ವಿಸರ್ಜನೆ

ನಟ ವಿಜಯ್‌ ರಾಘವೇಂದ್ರ ಪತ್ನಿ ಸ್ಪಂದನಾ ನಿಧನರಾಗಿ ಐದು ದಿನಗಳಾಗಿದ್ದು, ವಿಜಯ ರಾಘವೇಂದ್ರ ಅವರ ಮನೆಯಲ್ಲಿ ಸೂತಕದ ಛಾಯೆ ಮನೆ ಮಾಡಿದೆ. 5 ದಿನೇ ದಿನದ ಕಾರ್ಯವನ್ನು ಅವರ ಕುಟುಂಬಸ್ಥರು ಶುಕ್ರವಾರ ನೇರವೇರಿಸಲಿದ್ದಾರೆ. ಮಲ್ಲೇಶ್ವರಂನಲ್ಲಿರುವ ಶಿವರಾಮ್ ಮನೆಯಿಂದ ತೆರಳಲು ಕುಟುಂಬಸ್ಥರ ಸಿದ್ಧತೆ ನಡೆಸಿದ್ದು, ಹರಿಶ್ಚಂದ್ರ ಘಾಟ್ ನಲ್ಲಿರುವ ಅಸ್ಥಿ ಪಡೆದು ಶ್ರೀರಂಗಪಟ್ಟಣದಲ್ಲಿ ಕಾರ್ಯ ನೆರವೇರಿಸಲಿದ್ದಾರೆ.

ಇದನ್ನೂ ಓದಿ: ವೇಗವಾಗಿ ಕ್ಷೀಣಿಸುತ್ತಿದೆ ಮಂಗಳ ಗ್ರಹದಲ್ಲಿ ಹಗಲು ಹೊತ್ತಿನ ಅವಧಿ! – ನಾಸಾ ವಿಜ್ಞಾನಿಗಳು ಹೇಳಿದ್ದೇನು?  

ಶಿವರಾಮ್, ಶ್ರೀಮುರಳಿ, ಚಿನ್ನೇಗೌಡ, ವಿಜಯರಾಘವೇಂದ್ರ, ಮಗ ಶೌರ್ಯ ಪೂಜೆಯಲ್ಲಿ ಭಾಗಿಯಾಗಲಿದ್ದಾರೆ. ಶುಕ್ರವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ಶ್ರೀರಂಗಪಟ್ಟಣ ತಲುಪಲಿರುವ ಸ್ಪಂದನಾ ಕುಟುಂಬ ಸದಸ್ಯರು, ಅಲ್ಲಿ ಅಸ್ಥಿ ಬಿಡುವ ಕಾರ್ಯವನ್ನು ನೆರವೇರಿಸಲಿದ್ದಾರೆ.

ಶುಕ್ರವಾರದಂದು 5ನೇ ದಿನದ ಕಾರ್ಯ, ಅಸ್ಥಿ ವಿಸರ್ಜನೆ ಶ್ರೀರಂಗಪಟ್ಟಣದಲ್ಲಿ ನಡೆಯಲಿದೆ. 11ನೇ ದಿನದ ಕಾರ್ಯ ಸಹ ಶ್ರೀರಂಗಪಟ್ಟಣದಲ್ಲಿ ನಡೆಯಲಿದೆ.

ಕೆಲ ದಿನಗಳ ಹಿಂದೆ ಸ್ಪಂದನಾ ಸ್ನೇಹಿತರ ಜೊತೆ ಬ್ಯಾಂಕಾಕ್‌ಗೆ ತೆರಳಿದ್ದರು. ಆಗಸ್ಟ್ 6ರಂದು ಭಾನುವಾರದಂದು ಹೃದಯಾಘಾತದಿಂದ ಸ್ಪಂದನಾ ವಿಧಿವಶರಾದರು. ಆಗಸ್ಟ್ 9ರಂದು ಹರಿಶ್ಚಂದ್ರ ಘಾಟ್‌ನಲ್ಲಿ ಸ್ಪಂದನಾರ ಅಂತಿಮ ಸಂಸ್ಕಾರ ನಡೆಯಿತು. ಸ್ಪಂದನಾ ಹಠಾತ್‌ ನಿಧನ ವಿಜಯ ಮತ್ತು ಅವರ ಕುಟುಂಬಕ್ಕೆ ಶಾಕ್‌ ನೀಡಿದೆ.

suddiyaana