ಸ್ಪಂದನಾ ಮೃತದೇಹ ಮಂಗಳವಾರ ಮಧ್ಯಾಹ್ನ ಹಸ್ತಾಂತರ – ರಾತ್ರಿ ಬೆಂಗಳೂರಿಗೆ ಪಾರ್ಥಿವ ಶರೀರ

ಸ್ಪಂದನಾ ಮೃತದೇಹ ಮಂಗಳವಾರ ಮಧ್ಯಾಹ್ನ ಹಸ್ತಾಂತರ – ರಾತ್ರಿ ಬೆಂಗಳೂರಿಗೆ ಪಾರ್ಥಿವ ಶರೀರ

ಬೆಂಗಳೂರು: ಬ್ಯಾಂಕಾಕ್ ಪ್ರವಾಸಕ್ಕೆ ತೆರಳಿದ್ದ ವೇಳೆ ವಿಜಯ್‌ ರಾಘವೇಂದ್ರ ಪತ್ನಿ ಸ್ಪಂದನಾ ಅವರು ಹೃದಯಾಘಾತದಿಂದ ಮೃತಪಟ್ಟಿದ್ದು, ಈಗಾಗಲೇ ಮರಣೋತ್ತರ ಪರೀಕ್ಷೆ ಮುಗಿದಿದೆ. ಸ್ಪಂದನಾ ಅವರ ಪಾರ್ಥೀವ ಶರೀರ ಮಂಗಳವಾರ ರಾತ್ರಿ ಬೆಂಗಳೂರಿಗೆ ತಲುಪುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ಸ್ಪಂದನಾ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಶೂಟಿಂಗ್‌ ಅರ್ಧಕ್ಕೆ ನಿಲ್ಲಿಸಿ ಬೆಂಗಳೂರಿಗೆ ಆಗಮಿಸಿದ ಶಿವಣ್ಣ

ಸ್ಪಂದನಾ ಅವರ ಮರಣೋತ್ತರ ಪರೀಕ್ಷೆ ನಡೆದಿದೆ. ಮಂಗಳವಾರ ಬೆಳಗ್ಗೆಯೂ ಬ್ಯಾಂಕಾಕ್​ನಲ್ಲಿ ಒಂದಷ್ಟು ಕಾನೂನಾತ್ಮಕ ಪ್ರಕ್ರಿಯೆಗಳು ನಡೆಯಲಿದ್ದು, ಮಧ್ಯಾಹ್ನದ ಒಳಗೆ ಮುಗಿಯುವ ಸಾಧ್ಯತೆ ಇದೆ ಎನ್ನಲಾಗಿದೆ. ಮಧ್ಯಾಹ್ನ 2 ಗಂಟೆಯ ಒಳಗೆ ಎಲ್ಲ‌ ಪ್ರಕ್ರಿಯೆಗಳು ಮುಗಿದರೆ, ಬ್ಯಾಂಕಾಕ್​ನಿಂದ ಸ್ಪಂದನಾ ಪಾರ್ಥೀವ ಶರೀರ ರಾತ್ರಿ ವೇಳೆ ಬೆಂಗಳೂರು ತಲುಪುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಇನ್ನು ಸ್ಪಂದನಾ ಅವರ ಅಂತಿಮ ದರ್ಶನ ಮಲ್ಲೇಶ್ವರಂ ಗ್ರೌಂಡ್ ಅಥವಾ ಬಿಜೆಪಿ ಕಚೇರಿ ಎದುರಿನ ಮೈದಾನ ಎರಡರಲ್ಲಿ‌ ಒಂದು ಕಡೆ ಅಂತಿಮ ದರ್ಶನಕ್ಕೆ ಇಡಲು ಪ್ಲ್ಯಾನ್ ಮಾಡಲಾಗುತ್ತಿದೆ. ಅಂತ್ಯಕ್ರಿಯೆಯು ಈಡಿಗ ಸಮುದಾಯದ ಪ್ರಕಾರ ಆಗಲಿದೆ. ಅಂತ್ಯಕ್ರಿಯೆ ಜಾಗ ಇನ್ನಷ್ಟೇ ನಿರ್ಧಾರ ಆಗಬೇಕಿದೆ. ಸ್ಪಂದನಾ ಅಂತ್ಯಕ್ರಿಯೆ, ಅಂತಿಮ ವಿಧಿ ವಿಧಾನಗಳನ್ನು ಬೆಂಗಳೂರಿನಲ್ಲಿಯೇ ನಡೆಸಲಾಗುತ್ತದೆಯೇ ಅಥವಾ ಮಂಗಳೂರು ಸಮೀಪ ಬೆಳ್ತಂಗಡಿಗೆ ಕೊಂಡೊಯ್ಯಲಾಗುತ್ತದೆಯೇ ಎಂಬುದನ್ನು ಕುಟುಂಬಸ್ಥರು ನಿರ್ಧರಿಸಲಿದ್ದಾರೆ.

suddiyaana