ಬೆಂಗಳೂರು – ಮೈಸೂರು ಎಕ್ಸ್ ಪ್ರೆಸ್ ವೇಯಲ್ಲಿ ಕೆಎಸ್ಆರ್ಟಿಸಿ ಬಸ್ಗಳಿಗೂ ವೇಗ ಮಿತಿ!
![ಬೆಂಗಳೂರು – ಮೈಸೂರು ಎಕ್ಸ್ ಪ್ರೆಸ್ ವೇಯಲ್ಲಿ ಕೆಎಸ್ಆರ್ಟಿಸಿ ಬಸ್ಗಳಿಗೂ ವೇಗ ಮಿತಿ!](https://suddiyaana.com/wp-content/uploads/2023/08/5.jpg)
ಬೆಂಗಳೂರು: ಬೆಂಗಳೂರು – ಮೈಸೂರು ಎಕ್ಸ್ ಪ್ರೆಸ್ ವೇಯಲ್ಲಿ ಸಂಚಾರ ಆರಂಭವಾದಾಗಿಂದ ಅಪಘಾತ ಸಂಭವಿಸುತ್ತಲೇ ಇದೆ. ಅಪಘಾತ ತಪ್ಪಿಸಲು ಹೊಸ ಕ್ರಮಗಳನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಕೂಗೊಳ್ಳುತ್ತಿದೆ. ದ್ವಿಚಕ್ರ ವಾಹನಗಳು, ಆಟೋಗಳು, ಟ್ರಾಕ್ಟರುಗಳು, ಮೋಟಾರು ರಹಿತ ವಾಹನಗಳು, ಮಲ್ಟಿ ಆಕ್ಸಲ್ ಹೈಡ್ರಾಲಿಕ್ ಟ್ರೈಲರ್ ವಾಹನಗಳು ಮತ್ತು ಕ್ವಾಡ್ರಿ ಸೈಕಲ್ ಗಳ ಸಂಚಾರಕ್ಕೆ ಆಗಸ್ಟ್ 1 ರಿಂದ ಎನ್ಹೆಚ್ಎಐ ನಿಷೇಧ ಹೇರಿದೆ. ಈ ಮಧ್ಯೆಯೇ ಕೆಎಸ್ಆರ್ಟಿಸಿ ಕೂಡ ಚಾಲಕರಿಗೆ ಮಹತ್ವ ಸೂಚನೆಗಳನ್ನು ನೀಡಿದೆ.
ಇದನ್ನೂ ಓದಿ: ಎಕ್ಸ್ಪ್ರೆಸ್ ವೇ ನಿರ್ಮಾಣದ ವೇಳೆ ಕ್ರೇನ್ ಕುಸಿದು 17 ಕಾರ್ಮಿಕರು ಸಾವು
ಬೆಂಗಳೂರಿನಿಂದ ಮೈಸೂರಿಗೆ ನಿತ್ಯ ಸಾವಿರಾರು ಜನರು ಕೆಎಸ್ಆರ್ಟಿಸಿ ಬಸ್ಗಳಲ್ಲಿ ಸಂಚರಿಸುತ್ತಿರುತ್ತಾರೆ. ಹೀಗಾಗಿ ಕೆಎಸ್ಆರ್ಟಿಸಿ ಬಸ್ ಚಲಾಯಿಸುವಾಗ ವೇಗ ಮಿತಿಯನ್ನು ಕಾಯ್ದುಕೊಳ್ಳಬೇಕೆಂದು ಸೂಚಿಸಿದೆ. 118 ಕಿ.ಮೀ ವ್ಯಾಪ್ತಿಯಲ್ಲಿ ಅಪಘಾತ ತಡೆಯಲು ಮೈಸೂರು ವಿಭಾಗದ ಅಧಿಕಾರಿಗಳು ಕ್ರಮ ಕೈಗೊಂಡಿದ್ದು ಗರಿಷ್ಠ ವೇಗವನ್ನು ಗಂಟೆಗೆ 100 ಕಿ.ಮೀ ಕಾಯ್ದುಕೊಳ್ಳುವಂತೆ ಚಾಲಕರಿಗೆ ಸೂಚನೆ ನೀಡಿದೆ.
ಎಕ್ಸ್ ಪ್ರೆಸ್ ವೇಯಲ್ಲಿ 3ನೇ ಪಥವನ್ನು ಬಿಟ್ಟು, ಮೊದಲ ಮತ್ತು ಎರಡನೇ ಲೇನ್ ನಲ್ಲಿ ಬಸ್ ಗಳ ಓಡಿಸುವಂತೆ. ಮುಂಭಾಗದಲ್ಲಿ ಮತ್ತೊಂದು ವಾಹನವನ್ನು ಹಿಂದಿಕ್ಕುವಾಗ ಚಾಲಕರು ಸರಿಯಾದ ಮಾರ್ಗವನ್ನು ಮಾತ್ರ ಬಳಸಬೇಕು. ಲೇನ್ ಶಿಸ್ತು ಕಾಯ್ದುಕೊಳ್ಳುವುದರ ಜೊತೆಗೆ ಚಾಲಕರು ಸೈಡ್ ಮಿರರ್ಗಳನ್ನು ನೋಡುತ್ತಿರಬೇಕು. ಲೇನ್ ಬದಲಾವಣೆಯ ಸಮಯದಲ್ಲಿ ಟರ್ನ್ ಇಂಡಿಕೇಟರ್ಗಳನ್ನು ಕಡ್ಡಾಯವಾಗಿ ಬಳಸಬೇಕೆಂದು, ಎಕ್ಸ್ಪ್ರೆಸ್ವೇಯಲ್ಲಿ ಗಂಟೆಗೆ ಗರಿಷ್ಠ 80 ಕಿಮೀ ವೇಗವನ್ನು ಕಾಯ್ದುಕೊಳ್ಳುವಂತೆ ಹಾಗೂ ಎಡಿಪಿಸಿ ಅಲೋಕ್ ಕುಮಾರ್ ಅವರು ಗುರ್ತಿಸಿರುವ 25 ಆ್ಯಕ್ಸಿಂಡೆಟ್ ಸ್ಪಾಟ್ ಗಳಲ್ಲಿ ಬಹಳಷ್ಟು ಎಚ್ಚರಿಕೆಯಿಂದಿರುವಂತೆಯೂ ಚಾಲಕರಿಗೆ ಕೆಎಸ್ಆರ್ಟಿಸಿ ಸೂಚನೆ ನೀಡಿದೆ.