ಶಾಸಕ ಸ್ಥಾನಕ್ಕೆ ಎಸ್.ಆರ್ ಶ್ರೀನಿವಾಸ್ ರಾಜೀನಾಮೆ – ಗುಬ್ಬಿ ಕ್ಷೇತ್ರದಲ್ಲಿ ‘ಕೈ’ಗೆ ಸಿಕ್ಕಿತು ಬಲ!

ಶಾಸಕ ಸ್ಥಾನಕ್ಕೆ ಎಸ್.ಆರ್ ಶ್ರೀನಿವಾಸ್ ರಾಜೀನಾಮೆ – ಗುಬ್ಬಿ ಕ್ಷೇತ್ರದಲ್ಲಿ ‘ಕೈ’ಗೆ ಸಿಕ್ಕಿತು ಬಲ!

ಜೆಡಿಎಸ್ ವಿರುದ್ಧ ಬಹಿರಂಗವಾಗಿಯೇ ಅಸಮಾಧಾನ ಹೊರ ಹಾಕುತ್ತಿದ್ದ ಗುಬ್ಬಿ ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ಆರ್ ಶ್ರೀನಿವಾಸ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಜೆಡಿಎಸ್ (JDS)ನಿಂದ ಉಚ್ಛಾಟನೆಯಾಗಿದ್ದ ಶ್ರೀನಿವಾಸ್​ ಕಾಂಗ್ರೆಸ್ ಸೇರ್ಪಡೆಯಾಗುವುದಾಗಿ ಬಹಿರಂಗಪಡಿಸಿದ್ದು, ಈ ಬಾರಿ ವಿಧಾನಸಭಾ ಚುನಾವಣೆಗೆ  ಕಾಂಗ್ರೆಸ್ ನಿಂದ ಸ್ಪರ್ಧಿಸುವ ಸಾಧ್ಯತೆ ಇದೆ.

ಗುಬ್ಬಿ ಕ್ಷೇತ್ರದಲ್ಲಿ ವಾಸು ಎಂದೇ ಜನಪ್ರಿಯರಾಗಿರುವ ಶ್ರೀನಿವಾಸ್, ರಾಜೀನಾಮೆ ಬಗ್ಗೆ ಮಾತನಾಡಿದ್ದಾರೆ. ‘ನನ್ನ ರಾಜೀನಾಮೆ ಅಂಗೀಕಾರ ಆದ ಬಳಿಕ ಕಾಂಗ್ರೆಸ್ ಸೇರುತ್ತೇನೆ. ದೇವೇಗೌಡರು ನನ್ನನ್ನು ಮಗನಂತೆ ನೋಡಿಕೊಳ್ಳುತ್ತಿದ್ದರು. ಹೆಚ್.ಡಿ ದೇವೇಗೌಡರು (HD Devegowda), ಕುಮಾರಸ್ವಾಮಿ ನಾಯಕತ್ವದಲ್ಲಿ ಕೆಲಸ ಮಾಡಿದ್ದೇನೆ. ದೇವೇಗೌಡರು ಹೆಚ್ಚಿನ ಪ್ರೋತ್ಸಾಹ ಕೊಟ್ಟು ಮಗನಂತೆ ನೋಡಿಕೊಂಡರು. ಕುಮಾರಸ್ವಾಮಿ ಅವರು ಕೂಡ ಒಡಹುಟ್ಟಿದ ತಮ್ಮನ ಹಾಗೆ ನೋಡಿಕೊಂಡಿದ್ದಾರೆ. ಅದ್ಯಾವ ಸಂದರ್ಭಕ್ಕೋಸ್ಕರ ನನ್ನನ್ನು ಹೊರಹಾಕಿದ್ರೋ ಗೊತ್ತಿಲ್ಲ. ಆದರೂ ಇವತ್ತು ಭಾರವಾದ ಹೃದಯದಿಂದ, ನೋವಿನಿಂದ ಆ ಪಕ್ಷಕ್ಕೆ ರಾಜೀನಾಮೆ ಕೊಡುತ್ತಿದ್ದೇನೆ ಎಂದು ಭಾವುಕರಾದರು.

ಇದನ್ನೂ ಓದಿ : ಬಿಜೆಪಿಗೆ ಬಿಗ್ ಶಾಕ್.. ಕಾಂಗ್ರೆಸ್ ಗೆ ಚಿಂಚನಸೂರ್ – ಚುನಾವಣಾ ಲೆಕ್ಕಾಚಾರ ಏನಾಗುತ್ತೆ..?

2021ರ ಅಕ್ಟೋಬರ್‌ನಲ್ಲಿ ಕುಮಾರಸ್ವಾಮಿ (HD Kumaraswamy) ಬಂದು ಗುಬ್ಬಿಗೆ ಬೇರೆ ಅಭ್ಯರ್ಥಿ ಘೋಷಣೆ ಮಾಡಿದರು. ಅವತ್ತಿನಿಂದ ನನ್ನ ಮತ್ತು ಕುಮಾರಸ್ವಾಮಿ ಮಧ್ಯೆ ಅಂತರ ಜಾಸ್ತಿ ಆಯ್ತು. ಅವರು ನನ್ನ ಮೇಲೆ ಇಲ್ಲದ ಆರೋಪ ಮಾಡಿದರು. ದೇವೇಗೌಡರನ್ನು ಸೋಲಿಸಲು ನಾನು ಮುಖ್ಯ ಕಾರಣ ಅಂದರು. ಯಾವತ್ತೂ ನಾನು ಅಂತಹ ಪಕ್ಷದ್ರೋಹ ಮಾಡಿಲ್ಲ ಎಂದು ಹೇಳಿದರು. ನಾನು ಮತ್ತು ಕುಮಾರಸ್ವಾಮಿ ನಡುವೆ ಭಾವನಾತ್ಮಕ ಸಂಬಂಧ ಇತ್ತು. ಅವರು ಯಾರ ಮಾತು ಕೇಳಿದ್ರೋ ಗೊತ್ತಿಲ್ಲ. ನಾನು ಪಕ್ಷ ಬಿಡಲ್ಲ ಅಂದರೂ ಅಧಿಕೃತವಾಗಿ ಅವರೇ ಬೇರೆ ಅಭ್ಯರ್ಥಿ ಘೋಷಣೆ ಮಾಡಿದರು. ಅಡ್ಡ ಮತದಾನ ಮಾಡಿರುವ ಆರೋಪ ಮಾಡಿದರು. ಪಕ್ಷದಿಂದ ವಜಾಗೊಳಿಸಿದರು. ಇದುವರೆಗೂ ನನಗೆ ಸಹಕಾರ ಕೊಟ್ಟ ಜೆಡಿಎಸ್ ಪಕ್ಷದ ಎಲ್ಲಾ ಶಾಸಕರಿಗೂ ಧನ್ಯವಾದ ತಿಳಿಸುತ್ತೇನೆ ಎಂದರು.

suddiyaana